Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರವಿಶಂಕರರ ವಿಶ್ವ ಸಂಸ್ಕೃತಿ ಮೇಳದಲ್ಲಿ...

ರವಿಶಂಕರರ ವಿಶ್ವ ಸಂಸ್ಕೃತಿ ಮೇಳದಲ್ಲಿ ಕಳ್ಳತನ : 30 ಜನರ ಸೆರೆ,70 ಎಫ್‌ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ15 March 2016 6:46 PM IST
share
ರವಿಶಂಕರರ ವಿಶ್ವ ಸಂಸ್ಕೃತಿ ಮೇಳದಲ್ಲಿ ಕಳ್ಳತನ : 30 ಜನರ ಸೆರೆ,70 ಎಫ್‌ಐಆರ್ ದಾಖಲು

ಹೊಸದಿಲ್ಲಿ,ಮಾ.15: ಇಲ್ಲಿಯ ಯಮುನಾ ನದಿಯ ತೀರದಲ್ಲಿ ಮೂರು ದಿನಗಳ ಕಾಲ ನಡೆದ,ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ಅವರು ಆಯೋಜಿಸಿದ್ದ ವಿಶ್ವ ಸಂಸ್ಕೃತಿ ಉತ್ಸವದಲ್ಲಿ ಭಾಗಿಯಾಗಿದ್ದ ದೇಶವಿದೇಶಗಳ ಲಕ್ಷಾಂತರ ಜನರನ್ನು ಗುರಿಯಾಗಿಸಿಕೊಂಡು ದೇಶಾದ್ಯಂತದಿಂದ ಬಂದಿದ್ದ ಕಳ್ಳರ ತಂಡಗಳೂ ಅಲ್ಲಿ ಬೀಡು ಬಿಟ್ಟಿದ್ದವು. ಭಾರೀ ಭದ್ರತೆಯ ನಡುವೆಯೂ ತಮ್ಮ ಕೈಚಳಕವನ್ನು ಮೆರೆದ ಚೋರ ಶಿಖಾಮಣಿಗಳು ಚಿನ್ನಾಭರಣಗಳು ಮತ್ತು ನಗದು,ಲ್ಯಾಪ್‌ಟಾಪ್‌ನಂತಹ ಅಮೂಲ್ಯ ಸೊತ್ತುಗಳನ್ನು ಎಗರಿಸಿದ್ದಾರೆ. ಈ ಸಂಬಂಧ ಕನಿಷ್ಠ 70 ಎಫ್‌ಐಆರ್‌ಗಳು ದಾಖಲಾಗಿದ್ದು, ಪೊಲೀಸರು ಸುಮಾರು 30 ಜನರನ್ನು ಬಂಧಿಸಿದ್ದಾರೆ.

ಪೊಲೀಸರು ಭೇದಿಸಿರುವ ಇಂತಹ ಗ್ಯಾಂಗ್‌ಗಳ ಪೈಕಿ ಕೆಲವು ಉತ್ತರ ಪ್ರದೇಶ,ಹರ್ಯಾಣ,ತಮಿಳುನಾಡು ಮತ್ತು ಕೇರಳ ಮೂಲದ್ದಾಗಿವೆ. ಈ ಗ್ಯಾಂಗ್‌ಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ವ್ಯವಸ್ಥಿತ ಯೋಜನೆಯನ್ನು ರೂಪಿಸಿಕೊಂಡೇ ಈ ಕಳ್ಳರ ತಂಡಗಳು ದಿಲ್ಲಿಗೆ ಆಗಮಿಸಿದ್ದವು ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಮಂಗಳವಾರ ಇಲ್ಲಿ ತಿಳಿಸಿದರು.

ಈ ತಂಡಗಳು ಅತಿಥಿಗಳನ್ನು ಮಾತ್ರವಲ್ಲ,ಉತ್ಸವ ನಡೆಯುತ್ತಿದ್ದ ತಾಣದಲ್ಲಿದ್ದ ಹಲವಾರು ಹಂಗಾಮಿ ಅಂಗಡಿಗಳನ್ನೂ ಗುರಿಯಾಗಿಸಿಕೊಂಡಿದ್ದರು. ಉದ್ಘಾಟನಾ ದಿನದಂದು ಸುಮಾರು 20 ಕಳ್ಳತನ ಪ್ರಕರಣಗಳು ವರದಿಯಾಗಿದ್ದರೆ ಸಮಾರೋಪ ದಿನವಾಗಿದ್ದ ರವಿವಾರ ಗರಿಷ್ಠ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಬಂಧಿತ 20 ಜನರು ಉತ್ಸವ ತಾಣದಲ್ಲಿಯೇ ಸಿಕ್ಕಿಬಿದ್ದಿದ್ದಾರೆ. ಕೆಲವರನ್ನು ಪೊಲೀಸರು ಹಿಡಿದಿದ್ದರೆ ಇನ್ನು ಕೆಲವರನ್ನು ಜನರೇ ಹಿಡಿದು ಕೊಟ್ಟಿದ್ದಾರೆ.

ಕೆಲವು ಪಿಕ್‌ಪಾಕೆಟ್ ತಂಡಗಳಲ್ಲಿ ಕೇವಲ ಮಹಿಳೆಯರೇ ಇದ್ದು, ಈ ಪೈಕಿ ಕೆಲವರು ಈಗ ಜೈಲಿನಲ್ಲಿ ದಣಿವಾರಿಸಿಕೊಳ್ಳುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X