Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಿಂದ ಮಹಿಳಾ ಸಬಲೀಕರಣದ ರಾಷ್ಟ್ರೀಯ...

ಭಾರತದಿಂದ ಮಹಿಳಾ ಸಬಲೀಕರಣದ ರಾಷ್ಟ್ರೀಯ ನೀತಿ ನವೀಕರಣ: ಮೇನಕಾ

ವಾರ್ತಾಭಾರತಿವಾರ್ತಾಭಾರತಿ15 March 2016 11:54 PM IST
share
ಭಾರತದಿಂದ ಮಹಿಳಾ ಸಬಲೀಕರಣದ ರಾಷ್ಟ್ರೀಯ ನೀತಿ ನವೀಕರಣ: ಮೇನಕಾ

ವಿಶ್ವಸಂಸ್ಥೆ, ಮಾ.16: ಭಾರತವು ಲಿಂಗ ಸಮಾನತೆಯನ್ನು ಸಾಧ್ಯವಾಗಿಸುತ್ತಿದೆ ಹಾಗೂ ಮಹಿಳಾ ಸಬಲೀಕರಣದ ತನ್ನ ಬದ್ಧತೆಗೆ ವೇಗ ನೀಡಲು ಗಟ್ಟಿ ತಳಹದಿಯೊಂದನ್ನು ಸ್ಥಾಪಿಸು ವುದಕ್ಕಾಗಿ ರಾಷ್ಟ್ರೀಯ ಮಹಿಳಾ ನೀತಿಯನ್ನು ನವೀಕರಿಸುತ್ತಿದೆ ಯೆಂದು ಕೇಂದ್ರ ಸಚಿವೆ ಮೇನಕಾ ಗಾಂಧಿ ಹೇಳಿದ್ದಾರೆ.

ಲಿಂಗ ಸಮಾನತೆಯನ್ನು ಖಚಿತಪಡಿಸುವುದು, ಮಹಿಳಾ ಸಬಲೀಕರಣಕ್ಕೆ ಉತ್ತೇಜನ ನೀಡುವುದು ಹಾಗೂ ಮಹಿಳೆಯರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರದ ವಿರುದ್ಧ ಹೋರಾಡುವುದು, ಒಳಗೊಂಡ ಸಮಾಜ ಹಾಗೂ ಅಭಿವೃದ್ಧಿಯನ್ನು ಸಾಧಿಸುವ ನಮ್ಮ ರಾಷ್ಟ್ರೀಯ ನಂಬಿಕೆಯಲ್ಲಿ ಅಡಕವಾಗಿದೆಯೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ನಿನ್ನೆ ತಿಳಿಸಿದ್ದಾರೆ.

ನಾವು ಮಹಿಳೆಯರ ಮುನ್ನಡೆಗಾಗಿ ಸಾಧ್ಯವಿರುವ ಕಾಯ್ದೆ ಹಾಗೂ ನೀತಿ ಚೌಕಟ್ಟುಗಳನ್ನು ಅಳವಡಿಸಿಕೊಂಡಿದ್ದೇವೆ. ಸಾಮಾಜಿಕ ಪಕ್ಷಪಾತ ಹಾಗೂ ಏಕತಾನತೆಗಳ ವಿರುದ್ಧ ಹೋರಾಡಲು ಜಾಗೃತಿ ಹಾಗೂ ಮನಸ್ಸಿಗೆ ಸುಲಭವಾಗಿ ಗ್ರಾಹ್ಯವಾಗುವಂತಹ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆಂದು ಮಹಿಳೆಯರ ಸ್ಥಾನಮಾನದ ಕುರಿತ ಆಯೋಗದ (ಸಿಎಸ್‌ಡಬ್ಲು) 60ನೆ ಅಧಿವೇಶನದ ದುಂಡುಮೇಜಿನ ಕಲಾಪವೊಂದರಲ್ಲಿ ಮೇನಕಾ ಹೇಳಿದ್ದಾರೆ. 17 ತಾಳಿಕೆಯ ಅಭಿವೃದ್ಧಿ ಗುರಿಗಳಲ್ಲಿ ಮಾಡಿರುವ ನಮ್ಮ ಬದ್ಧತೆಯ ವೇಗ ವರ್ಧನೆಗಾಗಿ ಗಟ್ಟಿ ತಳಹದಿಯನ್ನು ರಚಿಸಲು ಭಾರತವು ರಾಷ್ಟ್ರೀಯ ಮಹಿಳಾ ನೀತಿಯನ್ನು ನವೀಕರಿಸುತ್ತಿದೆಯೆಂದು ಅವರು ತಿಳಿಸಿದ್ದಾರೆ.

ತಾಳಿಕೆಯ ಅಭಿವೃದ್ದಿಗೆ ಹೊಸ ಜಾಗತಿಕ ಕಾರ್ಯಸೂಚಿಯ ಜಾರಿಯನ್ನು ನಾವು ಆರಂಭಿಸಿರುವಂತೆಯೇ, ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣವನ್ನು ಸಾಕಾರಗೊಳಿಸಲು ಸಾಧ್ಯವಾಗುವ ಸ್ಥಿತಿಯ ಈಗಾಗಲೇ ಭಾರತದಲ್ಲಿದೆಯೆಂದು ಮೇನಕಾ ಹೇಳಿದ್ದಾರೆ.

ನಿನ್ನೆ ಆರಂಭವಾಗಿ ಮಾ.24ರವರೆಗೆ ನಡೆಯಲಿರುವ ಸಿಎಸ್‌ಡಬ್ಲು, ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣಗಳ ಬಗ್ಗೆ ಈ ವರೆಗಿನ ಸಾಧನೆಯನ್ನು ಪರಾಮರ್ಶಿಸಲು ಹಾಗೂ ಹೊಸ ಕ್ರಮಗಳ ಯೋಜನೆ ರೂಪಿಸಲು ವಿಶ್ವಾದ್ಯಂತದಿಂದ ವಿಶ್ವಸಂಸ್ಥೆಯ ವ್ಯವಸ್ಥೆ, ಸದಸ್ಯ ರಾಷಟ್ಗೆಗಳು ಹಾಗೂ ನಾಗರಿಕ ಸಮಾಜದ ಪ್ರತಿನಿಧಿಗಳನ್ನು ಒಟ್ಟಿಗೆ ಸೇರಿಸಲಿದೆ.

ಸಿಎಸ್‌ಡಬ್ಲುಗಾಗಿ ನಗರದಾದ್ಯಂತ 400ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ. ಮಹಿಳಾ ಸಬಲೀಕರಣ ಹಾಗೂ ತಾಳಿಕೆಯ ಅಭಿವೃದ್ಧಿ ಕಾರ್ಯಕ್ರಮಗಳು ಆದ್ಯ ವಿಷಯವಾಗಿದೆ. 2015ರ ಸೆಪ್ಟಂಬರ್‌ನಲ್ಲಿ 2030 ಕಾರ್ಯಸೂಚಿ ಅಳವಡಿಸಿದ ಬಳಿಕ ಇದು ಆಯೋಗದ ಮೊದಲ ಅಧಿವೇಶನವಾಗಿದೆ.

ಸ್ವಚ್ಛ ಭಾರತ ಅಭಿಯಾನ, ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಮಾರ್ಟ್ ಸಿಟೀಸ್ ಹಾಗೂ ಜನಧನ್ ಯೋಜನೆಗಳಂತಹ ಸರಕಾರದ ಮಹತ್ತ್ವಾಕಾಂಕ್ಷಿ ಕಾರ್ಯಕ್ರಮಗಳನ್ನು ಈಗಾಗಲೇ ಜಾರಿಗೊಳಿಸಿಲಾಗಿದೆ. ಈ ಮೂಲಕ ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಗಳನ್ನು ಸಾಧ್ಯವಾಗಿಸುವ ರಾಷ್ಟ್ರೀಯ ಸಾಂಸ್ಥಿಕ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆಯೆಂದು ಮೇನಕಾ ದುಂಡು ಮೇಜಿನ ಕಲಾಪದಲ್ಲಿ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X