Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತಿಮನೆಯವರು ತನ್ನನ್ನು ಒಳಗೆ...

ಪತಿಮನೆಯವರು ತನ್ನನ್ನು ಒಳಗೆ ಸೇರಿಸಿಕೊಳ್ಳಬೇಕೆಂದು ಆಗ್ರಹಿಸಿ ಮನೆಯ ಹೊರಗಡೆ ಧರಣಿ ಕುಳಿತ ಸೊಸೆ!

ವಾರ್ತಾಭಾರತಿವಾರ್ತಾಭಾರತಿ16 March 2016 12:19 PM IST
share
ಪತಿಮನೆಯವರು ತನ್ನನ್ನು ಒಳಗೆ ಸೇರಿಸಿಕೊಳ್ಳಬೇಕೆಂದು ಆಗ್ರಹಿಸಿ ಮನೆಯ ಹೊರಗಡೆ ಧರಣಿ ಕುಳಿತ ಸೊಸೆ!

ಇಂದೋರ್, ಮಾರ್ಚ್.16: ಪತಿ ಮನೆಯ ಚಿತ್ರಹಿಂಸೆಯನ್ನು ಪ್ರತಿಭಟಿಸಿ ಇಲ್ಲೊಬ್ಬ ಸೊಸೆ ಮನೆಯ ಹೊರಗೆ ಧರಣಿಗೇ ಕೂತು ಬಿಟ್ಟಿದ್ದಾರೆ. ಪತಿಮನೆಯವರನ್ನು ತನ್ನನ್ನು ಒಳಗೆ ಸೇರಿಸಿಕೊಳ್ಳಬೇಕು ಮತ್ತು ಆಸ್ತಿಯಲ್ಲಿ ತನ್ನ ಪಾಲು ನೀಡಬೇಕೆಂದು ಧರಣಿ ನಿರತ ಗೃಹಣಿಯ ಅಹವಾಲು ಆಗಿದೆ. ತಾನು ಸತ್ತರೂ ತನ್ನ ಹಕ್ಕು ಸಿಗದೆ ಇಲ್ಲಿಂದ ಕದಲಲಾರೆ ಎಂದು ಹಠಹಿಡಿದು ಮನೆಯಹೊರಗಡೆ ಆಕೆ ಝಂಡಾ ಊರಿದ್ದಾರೆ.

 ಇಂದೋರ್‌ನ ಸ್ನೇಹಲತಾಗಂಜ್‌ನ ಸ್ಕೈ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಅಜಯ್‌ಗೋಖಲೆ ಮತ್ತು ಕುಟುಂಬ ಈ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದು ಅಜಯ್ ಪತ್ನಿ ಅಶ್ವಿನಿ ಧರಣಿ ನಿರತೆ ಗೃಹಣಿಯಾಗಿದ್ದಾರೆ. ಅಶ್ವಿನಿ ಅಲ್ಲಿಗೆ ಬಂದು ತನ್ನ ಮಗಳನ್ನು ಭೇಟಿಯಾಗಲು ಬಯಸಿದ್ದರು. ಆದರೆ ಪತಿಮನೆಯವರು ಅದಕ್ಕೂ ಅವಕಾಶ ನೀಡಿಲ್ಲ. ಇದರಿಂದ ಹತಾಶರಾದ ಮಹಿಳೆ ಧರಣಿ ಆರಂಭಿಸಿಯೇ ಬಿಟ್ಟರು. ಅಶ್ವಿನಿ ತನ್ನ ವಿವಾಹ ಅಜಯ್‌ನೊಂದಿಗೆ 1998ರಲ್ಲಿ ನಡೆದಿದೆ ಎಂದು ಹೇಳುತ್ತಿದ್ದಾರೆ. ಆರಂಭದಿಂದಲೇ ಪತಿಮನೆಯವರು ಕಿರುಕುಳ ಅರಂಭಿಸಿದ್ದರು. 2006ರಲ್ಲಿ ಆಕೆ ಗರ್ಭಿಣಿಯಾಗಿದ್ದಾಗ ಗರ್ಭಪಾತವನ್ನೂ ಮಾಡಿಸಿ ನಂತರ ವಿವಾಹವಿಚ್ಛೇದನಕ್ಕೆ ದೂರು ನೀಡಿದ್ದರು ಎಂದು ಮಹಿಳೆ ಹೇಳುತ್ತಿದ್ದಾರೆ. ಹೀಗೆ ಪರಿತ್ಯಕ್ತೆಯಾಗಿ ಬಹಳ ಸಂಕಷ್ಟವನ್ನು ಅನುಭವಿಸುತ್ತಿರುವ ತನಗೆ ತಿಂಗಳಿಗೆ ಬರೇ ಐದು ಸಾವಿರ ರೂ. ಅಜಯ್ ಖರ್ಚಿಗೆ ನೀಡುವುದು ಇಂದಿನ ದಿನಗಳಲ್ಲಿ ಇದು ಏನೇನೂ ಸಾಲದೆಂದು ಅಶ್ವಿನಿ ಅಲವತ್ತುಕೊಳ್ಳುತ್ತಿದ್ದಾರೆ.

ತನ್ನನ್ನು ಪತಿಮನೆಯವರು ಗೌರವದಿಂದ ತನ್ನನ್ನು ಮನೆಗೆ ಸೇರಿಸಿಕೊಳ್ಳಬೇಕು ಜೊತೆಗೆ ಆಸ್ತಿಯಲ್ಲಿ ತನ್ನ ಭಾಗವನ್ನು ನೀಡಬೇಕು ಇಲ್ಲದಿದ್ದರಿಂದ ಮನೆಯ ಹೊರಗೆ ಧರಣಿ ಕುಳಿತಲ್ಲಿಂದ ಏಳುವ ಪ್ರಶ್ನೆಯೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಅಶ್ವಿನಿಯ ಮಾವ ಶ್ರೀಕೃಷ್ಣ ಗಂಗಾಧರ ಗೋಖಲೆ "ಅಶ್ವಿನಿ ಮತ್ತು ಅವರ ಮಗ ಅಜಯ್‌ರ ವಿವಾಹ ವಿಚ್ಛೇದನದ ಕೇಸು ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಹೈಕೋರ್ಟ್ ಸೂಚನೆಯಂತೆ ಪ್ರತಿತಿಂಗಳು ಅಶ್ವಿನಿಗೆ ಐದು ಸಾವಿರ ರೂಪಾಯಿ ಖರ್ಚಿಗೆ ಕೊಡುತ್ತಿದ್ದೇವೆ. ಅಶ್ವಿನಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ತಿಂಗಳಿಗೆ ಇಪ್ಪತ್ತೈದು ಸಾವಿರ ರೂಪಾಯಿಯ ಬೇಡಿಕೆಯನ್ನು ಇಟ್ಟಿದ್ದಾಳೆ. ಆದರೆ ಹೈಕೋರ್ಟ್ ಈ ಅಪೇಕ್ಷೆಯನ್ನು ನಿರಾಕರಿಸಿದೆ" ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X