Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಎಸ್‌ಎನ್‌ಎಲ್- ಗ್ರಾಮ ಪಂಚಾಯತ್ ನಡುವಿನ...

ಬಿಎಸ್‌ಎನ್‌ಎಲ್- ಗ್ರಾಮ ಪಂಚಾಯತ್ ನಡುವಿನ ವಿವಾದ ;ಗ್ರಾಹಕರ ದೂರವಾಣಿ ಸಂಪರ್ಕ ಸ್ಥಗಿತ

ನೆಕ್ಕಿಲಾಡಿ ಗ್ರಾಮ ಪಂಚಾಯತ್ ಗ್ರಾಹಕರ ಪರದಾಟ

ವಾರ್ತಾಭಾರತಿವಾರ್ತಾಭಾರತಿ16 March 2016 7:33 PM IST
share

ಮಂಗಳೂರು.ಮಾ.16:ಬಿಎಸ್‌ಎನ್‌ಎಲ್ ಹಾಗೂ ಗ್ರಾಮ ಪಂಚಾಯತ್ ನಡುವಿನ ಸಮಸ್ಯೆಯಿಂದ ಗ್ರಾಮಸ್ಥರು ತೊಂದರೆ ಅನುಭವಿಸುವಂತಹ ಪರಿಸ್ಥಿತಿ ನೆಕ್ಕಿಲಾಡಿ -34ನೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.ಪ್ರಸಕ್ತ ಇಲ್ಲಿನ ಗ್ರಾಮಸ್ಥರು ಕಳೆದ ಒಂದುವಾರದಿಂದ ಬಿಎಸ್‌ಎನ್‌ಎಲ್ ದೂರವಾಣಿ ಸಂಪರ್ಕದಿಂದ ವಂಚಿತರಾಗಿರುವ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

       ಕಳೆದ ಒಂದು ವಾರದ ಹಿಂದೆ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಂಪರ್ಕಕ್ಕಾಗಿ ನೀರಿನ ಪೈಪ್ ಅಳವಡಿಸಲು ಕಾಮಗಾರಿ ಆರಂಭಗೊಂಡಿತ್ತು.ಈ ಸಂದರ್ಭದಲ್ಲಿ ಬಿಎಸ್‌ಎನ್‌ಎಲ್ ಮೂಲಕ ದೂರವಾಣಿ ಸಂಪರ್ಕಕ್ಕಾಗಿ ನೆಲದ ಅಡಿಯಲ್ಲಿ ಅಳವಡಿಸಿರುವ ಕೇಬಲ್‌ಗಳು ತುಂಡಾಗಿದೆ.ಇದರಿಂದಾಗಿ ನೆಕ್ಕಿಲಾಡಿಯ ಗ್ರಾಮದ ಹಲವಾರು ಗ್ರಾಮಸ್ಥರ ಸ್ಥಿರ ದೂರವಾಣಿಗಳು ನಿಷ್ಕ್ರೀಯಗೊಂಡಿತ್ತು .ಈ ಬಗ್ಗೆ ಬಿಎಸ್‌ಎನ್‌ಎಲ್ ಗ್ರಾಹಕ ಸೇವಾ ವಿಭಾಗಕಕ್ಕೆ ಗ್ರಾಹಕರು ದೂರು ನೀಡಿ ಒಂದು ವಾರ ಕಳೆದರೂ ಸಮಸ್ಯೆ ಪರಿಹಾರವಾಗಿಲ್ಲ.ನಿಷ್ಕ್ರೀಯ ಗೊಂಡ ಸ್ಥಿರ ದೂರವಾಣಿ ಸಂಪರ್ಕಗಳು ಇನ್ನೂ ಸುಸ್ಥಿತಿಗೆ ಮರಳಿಲ್ಲ ಎಂದು ಗ್ರಾಹಕರು ಇಲಾಖೆಯ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

   ನೆಕ್ಕಿಲಾಡಿ ಗ್ರಾಮ ಪಂಚಾಯತ್‌ನಿಂದ ಬಿಎಸ್‌ಎನ್‌ಎಲ್ ವಿರುದ್ಧ ಆರೋಪ:-ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಕ್ಕಿಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಸ್ಕರ್ ಅಲಿ ಅವರ ಹೇಳಿಕೆಯ ಪ್ರಕಾರ,ನೆಕ್ಕಿಲಾಡಿ ಗ್ರಾಮ ಪಂಚಾಯತ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ತ್ವರಿತವಾಗಿ ಕಾಮಗಾರಿ ಕೈ ಗೊಳ್ಳಲು ನಿರ್ಧರಿಸಲಾಗಿತ್ತು.ಈ ಸಂದರ್ಭದಲ್ಲಿ ಟೆಲಿಕಾಂ ಇಲಾಖೆಯವರಿಗೆ ಸೂಚನೆ ನೀಡಲಾಗಿತ್ತು.ಅವರ ಬಳಿ ಕೇಬಲ್ ಅಳವಡಿಸಿದ ಪ್ರದೇಶದ ನಕ್ಷೆಯನ್ನು ಕೋರಲಾಗಿತ್ತು.ಆದರೆ ಬಿಎಸ್‌ಎನ್‌ಎಲ್‌ನ ಅಧಿಕಾರಿಗಳು ಗ್ರಾಮ ಪಂಚಾಯತ್‌ನ ಸೂಚನೆಯನ್ನು ಸರಿಯಾಗಿ ಪಾಲಿಸಿಲ್ಲ,ಮಾಹಿತಿಯನ್ನು ನೀಡಿಲ್ಲ ಇದರಿಂದಾಗಿ ಸಮಸ್ಯೆ ಉಂಟಾಗಿದೆ ಎನ್ನುತ್ತಾರೆ.

          ಭೂಮಿಯಲ್ಲಿ ಅಂತರ್ಗತ ಕೇಬಲ್ ಅಳವಡಿಸುವ ಸಂದರ್ಭದಲ್ಲಿ 5ಅಡಿ ಕೆಳಗೆ ಹೊಂಡತೋಡಿ ಅಳವಡಿಸಬೇಕು.ಕೇಬಲ್ ಎಲ್ಲಿ ಅಳವಡಿಸಲಾಗಿದೆ ಆ ಪ್ರದೇಶದಲ್ಲಿ ಸೂಚನಾ ಫಲಕ ಅಳವಡಿಸಬೇಕು ಮತ್ತು ಗ್ರಾಮ ಪಂಚಾಯತ್ ಪ್ರದೇಶದಲ್ಲಿ ಕೇಬಲ್ ಅಳವಡಿಸಿದ ಪ್ರದೇಶಗಳ ನಕ್ಷೆಯನ್ನು ಗ್ರಾಮ ಪಂಚಾಯತ್‌ಗೆ ನೀಡಬೇಕಾಗಿತ್ತು.ಆದರೆ ಈ ಯಾವ ನಿಯಮವನ್ನು ಬಿಎಸ್‌ಎನ್‌ಎಲ್‌ನ ಅಧಿಕಾರಿಗಳು ಪಾಲಿಸಿಲ್ಲ.ಕೇವಲ 2 ಅಡಿ ಆಳದ ಗುಂಡಿ ತೋಡಿ ಕೇಬಲ್ ಅಳವಡಿಸಿದ್ದಾರೆ.ಕೆಲವು ಕಡೆ ಈ ಕೇಬಲ್ ಮೇಲಕ್ಕೆ ಎದ್ದು ಕಾಣುತ್ತಿವೆ. ಆ ಕಾರಣದಿಂದ ಕುಡಿಯುವ ನೀರಿನ ಪೈಪ್ ಅಳವಡಿಸುವ ಸಂದರ್ಭದಲ್ಲಿ ಕೆಲವು ಕಡೆ ಕೇಬಲ್‌ಗಳಿಗೆ ಹಾನಿಯಾಗಿರುವ ಕಾರಣದಿಂದ ಗ್ರಾಹಕರಿಗೆ ತೊಂದರೆಯಾಗಿರುವ ಸಾಧ್ಯತೆ ಇದೆ.ಈ ಬಗ್ಗೆ ಬಿಎಸ್‌ಎನ್‌ಎಲ್ ಗಮನಹರಿಸಬೇಕಾಗಿದೆ .ಸಮಸ್ಯೆ ಪರಿಹಾರ ಮಾಡುವ ಬದಲು ಈ ಬಗ್ಗೆ ಬಿಎಸ್‌ಎನ್‌ಎಲ್‌ನ ಅಧಿಕಾರಿಗಳು ಗ್ರಾಮ ಪಂಚಾಯತ್‌ಗೆ 2ಲಕ್ಷ ರೂ ಪರಿಹಾರ ನೀಡಬೇಕೆಂದು ನೊಟೀಸು ಜಾರಿ ಮಾಡಿದ್ದಾರೆ ಎಂದು ಅಸ್ಕರ್ ಅಲಿ ತಿಳಿಸಿದ್ದಾರೆ.

 ‘‘ನಾನು ಬಿಎಸ್‌ಎನ್‌ಎಲ್ ಬಳಕೆದಾರ.ಕಳೆದ ಹತ್ತು ದಿನಗಳಿಂದ ನನ್ನ ಉದ್ಯಮದ ದೂರವಾಣಿ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ.ಈ ಬಗ್ಗೆ ದೂರವಾಣಿ ಇಲಾಖೆಗೆ ದೂರು ನೀಡಿದಾಗ ದೂರು ದಾಖಲಾಗಿದೆ.ಸರಿಪಡಿಸುವ ಬಗ್ಗೆಯೂ ಭರವಸೆ ನೀಡಲಾಗಿತ್ತು ಆದರೆ ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ.ಇದರಿಂದ ನನ್ನ ಉದ್ಯಮಕ್ಕೂ ಸಮಸ್ಯೆಯಾಗಿದೆ ’’ಎಂದು ನೆಕ್ಕಿಲಾಡಿಯ ದೂರವಾಣಿ ಬಳಕೆದಾರ ಕೆ.ಪಿ.ಸತ್ಯಂ ಪತ್ರಿಕೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X