Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಮಾಂಸ ತಿಂದ ಆರೋಪ: ರಾಜಸ್ಥಾನ...

ಗೋಮಾಂಸ ತಿಂದ ಆರೋಪ: ರಾಜಸ್ಥಾನ ವಿವಿಯಲ್ಲಿ ನಾಲ್ವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಥಳಿತ

ವಾರ್ತಾಭಾರತಿವಾರ್ತಾಭಾರತಿ16 March 2016 11:45 PM IST
share
ಗೋಮಾಂಸ ತಿಂದ ಆರೋಪ: ರಾಜಸ್ಥಾನ ವಿವಿಯಲ್ಲಿ ನಾಲ್ವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಥಳಿತ

ಜೈಪುರ, ಮಾ.16: ಹಾಸ್ಟೆಲ್ ಕೊಠಡಿಯಲ್ಲಿ ಗೋಮಾಂಸ ಬೇಯಿಸುತ್ತಿದ್ದಾರೆಂಬ ಗಾಳಿ ಸುದ್ದಿಯ ಹಿನ್ನೆಲೆಯಲ್ಲಿ ರಾಜಸ್ಥಾನದ ಖಾಸಗಿ ವಿಶ್ವವಿದ್ಯಾನಿಲಯವೊಂದರಲ್ಲಿ ನಾಲ್ವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಥಳಿಸಲಾಗಿದೆ. ಬಳಿಕ ಥಳಿತ ಕ್ಕೊಳಗಾದ ವಿದ್ಯಾರ್ಥಿಗಳನ್ನೇ ಪೊಲೀಸರು ಬಂಧಿಸಿದ ಘಟನೆಯೂ ನಡೆದಿದೆ.

ಜೈಪುರದಿಂದ ಸುಮಾರು 300 ಕಿ.ಮೀ. ದೂರದ ಚಿತ್ತೋರ್‌ಗಡದ ಮೇವಾಡ್ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ಈ ಘಟನೆ ನಡೆದಿದೆಯೆಂದು ಆರೋಪಿಸಲಾಗಿದೆ.

ನಾಲ್ವರು ಯುವಕರ ಮೇಲೆ ನಡೆದ ದಾಳಿಯನ್ನು ತಡೆಯಲು ಪೊಲೀಸರನ್ನು ಕರೆಸಲಾಗಿತ್ತು. ಕೆಲವು ಬಲಪಂಥೀಯ ಕಾರ್ಯಕರ್ತರು ವಿವಿಯ ಆವರ ಣಕ್ಕೆ ಬಂದು ಘೋಷಣೆಗಳನ್ನು ಕೂಗಿದರೆಂದು ವರದಿಯಾಗಿದೆ. ಪರಿಸ್ಥಿತಿ ಹದ್ದು ಮೀರುವ ಮೊದಲೇ ಅದನ್ನು ನಿಯಂತ್ರಿಸಲಾಯಿತೆಂದು ಪೊಲೀಸರು ತಿಳಿಸಿದ್ದಾರೆ. ಬೇಯಿಸಲಾಗುತ್ತಿದ್ದ ಮಾಂಸವನ್ನು ವಿಧಿವಿಜ್ಞ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆಯೆಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಮ್ಮಲ್ಲಿ ದೇಶಾದ್ಯಂತದ-23 ರಾಜ್ಯಗಳ - ವಿದ್ಯಾರ್ಥಿಗಳಿ ದ್ದಾರೆ. ಇದೊಂದು ಮಿನಿ ಭಾರತದಂತಿದೆ. ವಿದ್ಯಾರ್ಥಿಗಳು ವಿವಿಧ ಸಾಮಾಜಿಕ-ಸಾಂಸ್ಕೃತಿಕ ಹಿನ್ನೆಲೆಯವರಾಗಿರುವ ಕಾರಣ ಇಂತಹ ಸಣ್ಣ ಘರ್ಷಣೆಗಳು ಕೆಲವೊಮ್ಮೆ ನಡೆಯುತ್ತವೆಯೆಂದು ವಿಶ್ವವಿದ್ಯಾನಿಲಯದ ಮಾಧ್ಯಮ ಸಮನ್ವಯಾಧಿಕಾರಿ ಹರೀಶ್ ಗುರ್ನಾನಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ ಎಲ್ಲ ವಿದ್ಯಾರ್ಥಿಗಳ ವಿವರಗಳನ್ನು ತಾಳೆ ನೋಡುವಂತೆ ಕೋಲ್ಕತಾದ ಕಾಲೇಜುಗಳಿಗೆ ಸೂಚಿಸಲಾಗಿದೆಯೆಂಬ ವರದಿಯೊಂದರ ಬಳಿಕ, ತನ್ನ ಸೂಚನೆಯನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆಯೆಂದು ಗೃಹ ಸಚಿವಾಲಯದ ಮೂಲಗಳು ನಿನ್ನೆ ಸ್ಪಷ್ಟೀಕರಣ ನೀಡಿದ್ದವು.

ಕಾಲೇಜುಗಳಲ್ಲಿ ತಮ್ಮ ವಿದ್ಯಾರ್ಥಿಗಳನ್ನು ಸಂಶಯದಿಂದ ಹಾಗೂ ಹಗೆತನದಿಂದ ನಡೆಸಿಕೊಳ್ಳಲಾಗುತ್ತಿದೆಯೆಂಬ ಭಾವನೆ ಜಮ್ಮು-ಕಾಶ್ಮೀರದ ಜನರಲ್ಲಿದೆಯೆಂದು ಫೆಬ್ರವರಿಯಲ್ಲಿ ರಾಜ್ಯ ಸರಕಾರಗಳಿಗೆ ಕಳುಹಿಸಲಾಗಿದ್ದ ಸೂಚನೆಯೊಂದರಲ್ಲಿ ತಿಳಿಸಲಾಗಿತ್ತು. ಅದನ್ನು ಎನ್‌ಡಿಟಿವಿ ನೋಡಿದೆ.

ಉದಾಹರಣೆಗೆ, ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳಿಗೆ ವಾಸ್ತವ್ಯ ಹುಡುಕಲು ಕಷ್ಟವಾಗುತ್ತಿದೆಯೆಂಬ ಅವರ ಕುಟುಂಬಗಳ ದೂರಿನ ಹಿನ್ನೆಲೆಯಲ್ಲಿ ‘ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳ ಸುರಕ್ಷೆಯನ್ನು ಖಚಿತಪಡಿಸುವಂತೆ’ ರಾಜ್ಯಗಳಿಗೆ ಸೂಚಿಸಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರಿ ವಿದ್ಯಾರ್ಥಿಗಳನ್ನು ನಿಭಾಯಿಸುವಲ್ಲಿ ‘ಅತ್ಯಂತ ಎಚ್ಚರಿಕೆ ಹಾಗೂ ಸೂಕ್ಷ್ಮತೆಯನ್ನು’ ತೋರಿಸುವಂತೆಯೂ ಸೂಚನೆಯಲ್ಲಿ ಹೇಳಲಾಗಿದೆ.

...

 ಭದ್ರತಾ ಸಂಸ್ಥೆಗಳ ಮೂಲಕ ಭಾರತಾದ್ಯಂತ ಕಾಶ್ಮೀರಿ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದ್ದು, ಆ ಮೂಲಕ ಅವರನ್ನು ‘ಅಸುರಕ್ಷಿತರನ್ನಾಗಿಸುತ್ತಿದೆ’.
- ಉಮರ್ ಅಬ್ದುಲ್ಲಾ, ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X