Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾನ್-ಸಿಆರ್‌ಝೆಡ್‌ನ 4 ಬ್ಲಾಕ್‌ಗಳಿಂದ...

ನಾನ್-ಸಿಆರ್‌ಝೆಡ್‌ನ 4 ಬ್ಲಾಕ್‌ಗಳಿಂದ ಮರಳು ಪೂರೈಕೆಗೆ ಅವಕಾಶ! ವೈಯಕ್ತಿಕ ಮನೆ ಕಟ್ಟುವವರಿಗೆ ಪ್ರಥಮ ಆದ್ಯತೆ:

ವಾರ್ತಾಭಾರತಿವಾರ್ತಾಭಾರತಿ17 March 2016 5:01 PM IST
share
ನಾನ್-ಸಿಆರ್‌ಝೆಡ್‌ನ 4 ಬ್ಲಾಕ್‌ಗಳಿಂದ ಮರಳು ಪೂರೈಕೆಗೆ ಅವಕಾಶ! ವೈಯಕ್ತಿಕ ಮನೆ ಕಟ್ಟುವವರಿಗೆ ಪ್ರಥಮ ಆದ್ಯತೆ:

ಮಂಗಳೂರು, ಮಾ. 17: ದ.ಕ. ಜಿಲ್ಲೆಯಲ್ಲಿ ನಾನ್ ಸಿಆರ್‌ಝೆಡ್ ವ್ಯಾಪ್ತಿಯ ನಾಲ್ಕು ಮರಳು ದಿಣ್ಣೆಗಳಿಂದ (ಬ್ಲಾಕ್) ಟೆಂಡರು ಸಲ್ಲಿಸಿರುವ ಗುತ್ತಿಗೆದಾರರಿಗೆ ಮರಳು ಸಾಗಾಟಕ್ಕೆ ಅವಕಾಶ ನೀಡಲಾಗಿದ್ದು, ಪ್ರಮುಖವಾಗಿ ವೈಯಕ್ತಿಕ ಮನೆ ಕಟ್ಟುವವ ದ.ಕ. ಜಿಲ್ಲೆಯಲ್ಲಿಯವರಿಗೆ ಮರಳು ಪೂರೈಕೆ ಮಾಡಲು ಆದ್ಯತೆ ನೀಡುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ತಿಳಿಸಿದ್ದಾರೆ.
ಮರಳು ಸಾಗಾಟ ಸಂಬಂಧ ಬಿಡ್ಡುದಾರರ ಪ್ರಿಬಿಡ್ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಸಜಿಪಪಡುವಿನ 2 ಬ್ಲಾಕ್‌ಗಳು, ಬರಿಮಾರು ಹಾಗೂ ಸಜಿಪ ಮುನ್ನೂರಿನ ತಲಾ ಒಂದು ಬ್ಲಾಕ್‌ಗಳಿಂದ ಸ್ಟಾಕ್ ಯಾರ್ಡ್‌ಗೆ ಮರಳನ್ನು ಶೇಖರಿಸಿ ಅಲ್ಲಿಂದ ಜಿಲ್ಲೆಯಲ್ಲಿ ಮರಳು ಸಾಗಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಒಂದು ಕ್ಯೂಬಿಕ್ ಮೀಟರ್ ಅಳತೆಯ ಮರಳಿಗೆ 403 ರೂ. ಹಾಗೂ ರಾಜಧನ ಸೇರಿ ಒಟ್ಟು 625 ರೂ. (ಸಾಗಾಟ ವೆಚ್ಚವನ್ನು ಹೊರತುಪಡಿಸಿ) ಗಳನ್ನು ನಿಗದಿಪಡಿಸಲಾಗಿದೆ. (ಒಂದು ಕ್ಯೂಬಿಕ್ ಮೀಟರ್ ಅಂದರೆ 1.7 ಟನ್) ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ 19 ಬ್ಲಾಕ್‌ಗಳನ್ನು ಗುರುತಿಸಾಲಾಗಿದ್ದು, ಎನ್‌ಐಟಿಕೆಯ ತಜ್ಞರ ಅಧ್ಯಯನ ಮೇರೆಗೆ ಆ ಬ್ಲಾಕ್‌ಗಳನ್ನು 16ಕ್ಕೆ ಇಳಿಕೆ ಮಾಡಲಾಗಿದೆ. ಜನವರಿ 15ರಿಂದ ಅಲ್ಲಿ ಮರಳು ಸಾಗಾಟ ನಿಷೇಧಿಸಲಾಗಿದ್ದು, ಕೇಂದ್ರದ ಪರಿಸರ ಇಲಾಖೆ ಹಾಗೂ ಎನ್‌ಜಿಟಿಯಿಂದ ಅನುಮತಿ ದೊರಕಿದ ಬಳಿಕವಷ್ಟೆ ಆ ಬ್ಲಾಕ್‌ಗಳಲ್ಲಿ ಮರಳು ಸಾಗಾಟಕ್ಕೆ ಅವಕಾಶ ದೊರೆಯಲಿದೆ. ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ನಡೆಯುವ ಈ ಪ್ರಕ್ರಿಯೆ ಮರಳುಗಾರಿಕೆಯಲ್ಲ. ಬದಲಾಗಿ ಮೀನುಗಾರಿಕೆಗೆ ಮತ್ತು ನಾಡ ದೋಣಿಗಳು ಮುಕ್ತವಾಗಿ ಸಂಚರಿಸುವ ನಿಟ್ಟಿನಲ್ಲಿ ಮರಳು ದಿಣ್ಣೆಗಳನು ತೆರವುಗೊಳಿಸುವುದಾಗಿದೆ. ಉಳಿದಂತೆ ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ 38 ಬ್ಲಾಕ್‌ಗಳಲ್ಲಿ ಈ ಹಿಂದೆ 23 ಬ್ಲಾಕ್‌ಗಳಿಗೆ ಟೆಂಡರ್ ಕರೆಯಲಾಗಿತ್ತು. 11 ಮಂದಿ ಟೆಂಡರ್‌ನಲ್ಲಿ ಭಾಗವಹಿಸಿದ್ದು, ಅಂತಿಮವಾಗಿ ಐದು ಬ್ಲಾಕ್‌ಗಳನ್ನು ಗುರುತಿಸಲಾಗಿತ್ತು. ಅದರಲ್ಲಿ ಒಂದನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ಇದೀಗ ನಾಲ್ಕು ಬ್ಲಾಕ್‌ಗಳಲ್ಲಿ ಮರಳುಗಾರಿಕೆಗೆ ಅವಕಾಶವಿದೆ.
ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಈ ಹಿಂದಿನ ಟೆಂಡರ್‌ನಲ್ಲಿದ್ದ ಕೆಲವೊಂದು ನಿಯಮಗಳನ್ನು ಸರಳಗೊಳಿಸಿ 30 ಬ್ಲಾಕ್‌ಗಳಿಗೆ ಶಾರ್ಟ್ ಟೆಂಡರ್ ಕರೆಯಲಾಗಿದ್ದು, 23 ಕೊನೆಯ ದಿನವಾಗಿರುತ್ತದೆ ಎಂದು ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಪಿಡಬ್ಲುಡಿ ಕಾರ್ಯನಿರ್ವಾಹಕ ಇಂಜಿನಯರ್ ಗಣೇಶ್ ಅರಳೀಕಟ್ಟೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ನಾಗೇಂದ್ರ ಉಪಸ್ಥಿತರಿದ್ದರು.

30 ಕಡೆಗಳಲ್ಲಿ ಸಿಸಿ ಕ್ಯಾಮಾರಾ
ಅಕ್ರಮ ಮರಳು ಸಾಗಾಟವನ್ನು ನಿಯಂತ್ರಣ ಹಾಗೂ ನಿಷೇಧಿಸುವ ನಿಟ್ಟಿನಲ್ಲಿ ಜಿಲ್ಲೆಯ ಚೆಕ್‌ಪೋಸ್ಟ್‌ಗಳು ಸೇರಿದಂತೆ 35 ಲಕ್ಷ ರೂ.ಗಳಲ್ಲಿ 30 ಕಡೆಗಳಲ್ಲಿ ಸಿಸಿ ಕ್ಯಾಮಾರಾ ಅಳವಡಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಪ್ರಕ್ರಿಯೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X