Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಸಂಚಾರಿ ಪೊಲೀಸರ ಕರ್ತವ್ಯ...

ಮಂಗಳೂರು : ಸಂಚಾರಿ ಪೊಲೀಸರ ಕರ್ತವ್ಯ ಪಾಲನೆ ಬಗ್ಗೆ ಆಯುಕ್ತರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ17 March 2016 5:05 PM IST
share

ಮಂಗಳೂರು, ಮಾ. 17: ನಗರದಲ್ಲಿ ಸಂಚಾರ ನಿರ್ವಹಣೆಯಲ್ಲಿರುವ ಪೊಲೀಸರು (ಕೆಲವರು) ಸಣ್ಣ ಪುಟ್ಟ ಅಪಘಾತಗಳು ಸಂಭವಿಸಿದ ಸಂದರ್ಭ ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ ವಹಿಸುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರು ಪತ್ರಕರ್ತರ ಗುಂಪೊಂದು ಇಂದು ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ್ ಹಾಗೂ ಸಹಾಯಕ ಪೊಲೀಸ್ ಆಯುಕ್ತ (ಸಂಚಾರ) ಉದಯ ನಾಯಕ್ ಅವರಿಗೆ ಮನವಿ ಸಲ್ಲಿಸಿತು.
ಸಂಚಾರ ಪೊಲೀಸ್ ಸಿಬ್ಬಂದಿಗಳ ಕೊರತೆಯ ಹೊರತಾಗಿಯೂ ನಗರದಲ್ಲಿ ಸಂಚಾರ ಸುವ್ಯವಸ್ಥೆಯನ್ನು ಸುಗಮವಾಗಿಸುವಲ್ಲಿ ಪೊಲೀಸರು ಬಹಳಷ್ಟು ಶ್ರಮ ವಹಿಸುತ್ತಿದ್ದರೂ ಕೆಲವೊಂದು ಸಿಬ್ಬಂದಿ ಕರ್ತವ್ಯದ ವೇಳೆ ತಮ್ಮ ಕಣ್ಣೆದುರೇ ಅಪಘಾತ, ಅಹಿತಕರ ಘಟನೆಗಳು ನಡೆದರೂ ಮೂಕ ಪ್ರೇಕ್ಷಕರಾಗಿರುತ್ತಾರೆ. ಕನಿಷ್ಠ ಸೌಜನ್ಯವನ್ನೂ ಪ್ರದರ್ಶಿಸಲು ಮುಂದಾಗದಿರುವುದರಿಂದ ಸಾರ್ವಜನಿಕರು ಸಂಚಾರ ವ್ಯವಸ್ಥೆಯನ್ನೇ ದೂರುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಬುಧವಾರ (ಮಾರ್ಚ್ 16)ದಂದು ಸಂಜೆ 3.30ರ ಸುಮಾರಿಗೆ ಸುದ್ದಿಗಾಗಿ ಪತ್ರಕರ್ತೆಯೊಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿ ಜ್ಯೋತಿ (ಅಂಬೇಡ್ಕರ್ ವೃತ್ತ) ಬಳಿಯಿಂದ ಸಾಗುತ್ತಿರುವಾಗ ಅಲ್ಲಿ ಸಿಗ್ನಲ್ ಬಳಿ ರಿಕ್ಷಾವೊಂದು ಆಕೆಯ ವಾಹನಕ್ಕೆ ತಾಗಿದ ಪರಿಣಾಮ ಆಕೆ ದ್ವಿಚಕ್ರವಾಹನದೊಂದಿಗೆ ಬಿದ್ದು ಸಣ್ಣ ಪುಟ್ಟ ಗಾಯಕ್ಕೊಳಗಾಗಿದ್ದರು. ಈ ಸಂದರ್ಭ ರಿಕ್ಷಾ ಚಾಲಕ ನೆಲಕ್ಕುರುಳಿದ ಯುವತಿಯ ಬಗ್ಗೆ ಗಮನ ಕೊಡದೆ ಬದಲಾಗಿ ಆಕೆಗೆ ಬೈಗುಳದ ಮಾತುಗಳನ್ನಾಡಿ ಅಲ್ಲಿಂದ ತೆರಳಿದ್ದ. ಇಷ್ಟೆಲ್ಲಾ ಘಟನೆ ನಡೆಯುತ್ತಿರುವಾಗ ಅಲ್ಲೇ ಇದ್ದ ಸಂಚಾರ ಪೊಲೀಸ್ ಸಿಬ್ಬಂದಿ ಕೂಡಾ ಕನಿಷ್ಠ ಸೌಜನ್ಯಕ್ಕಾದರೂ ಯುವತಿಯ ವಾಹನ ಅಡ್ಡ ಬಿದ್ದಲ್ಲಿ ಬಂದು ಮಾತನಾಡುವ ಕೆಲಸ ಮಾಡಿಲ್ಲ. ಅಲ್ಲೇ ಇದ್ದ ಯುವಕನೊಬ್ಬ ಬಿದ್ದ ದ್ವಿಚಕ್ರ ವಾಹನವನ್ನು ಎತ್ತಿ ಯುವತಿಗೆ ಸಹಕರಿಸಿದ್ದಾನೆ. ಇಂತಹ ಘಟನೆಗಳು ನಗರದಲ್ಲಿ ಸಾಕಷ್ಟು ಸಂಭವಿಸುತ್ತಿರುತ್ತವೆ. ಇಂತಹ ಸಂದರ್ಭಗಳಲ್ಲಿ ಕರ್ತವ್ಯದಲ್ಲಿರುವ ಸಂಚಾರ ಪೊಲೀಸರು ಘಟನೆಯ ವಿವರ ಪಡೆದು ವಾಹನಗಳ ಸಂಖ್ಯೆಗಳನ್ನು ನಮೂದಿಸಿಕೊಂಡು ಕ್ರಮ ಕೈಗೊಳ್ಳುವುದು ಅಥವಾ ಪರಸ್ಪರ ಮಾತುಕತೆಯ ಮೂಲಕ ಧೈರ್ಯ ತುಂಬುವ ಕೆಲಸವನ್ನಾದರೂ ಮಾಡಬೇಕು. ಈ ಬಗ್ಗೆ ಸಿಬ್ಬಂದಿಗೆ ತರಬೇತಿಯನ್ನು ನೀಡುವ ಕ್ರಮ ಕೈಗೊಳ್ಳಬೇಕು ಎಂದು ಪತ್ರಕರ್ತ ಮಿತ್ರರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಮನವಿಗೆ ತಕ್ಷಣ ಪ್ರತಿಕ್ರಿಯಿಸಿದ ಆಯುಕ್ತ ಎಂ. ಚಂದ್ರಶೇಖರ್, ನಿರ್ದಿಷ್ಟ ಪ್ರಕರಣದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಲ್ಲದೆ, ಸಿಬ್ಬಂದಿಗೆ ತರಬೇತಿಯನ್ನು ನೀಡುವ ಭರವಸೆಯನ್ನೂ ನೀಡಿದರು.
ಮನವಿ ಸ್ವೀಕರಿಸಿರುವ ಎಸಿಪಿ ಉದಯ ನಾಯಕ್ ಕೂಡಾ ಪೂರಕವಾಗಿ ಸ್ಪಂದಿಸಿದ್ದು, ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X