Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉವೈಸಿಯನ್ನು ‘ರಾಜದ್ರೋಹಿ’ ಎಂದು ಕರೆದ...

ಉವೈಸಿಯನ್ನು ‘ರಾಜದ್ರೋಹಿ’ ಎಂದು ಕರೆದ ಪೋಸ್ಟರ್‌ಗಳು ದಿಲ್ಲಿ ನಿವಾಸದ ಮುಂದೆ ಪತ್ತೆ

ವಾರ್ತಾಭಾರತಿವಾರ್ತಾಭಾರತಿ17 March 2016 11:07 PM IST
share

ಹೊಸದಿಲ್ಲಿ, ಮಾ.17: ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಉವೈಸಿಯವರನ್ನು ‘ರಾಜದ್ರೋಹಿ’ ಎಂದು ಬ್ರಾಂಡ್ ಮಾಡಿ ಹಾಗೂ ಅವರು ಭಾರತ ಮಾತೆಯನ್ನು ಅವಮಾನಿಸಿದ್ದಾರೆಂದು ಆರೋಪಿಸಿದ ಪೋಸ್ಟರ್‌ಗಳು ಹೊಸದಿಲ್ಲಿಯ ಅವರ ಅಧಿಕೃತ ಅಶೋಕ ರಸ್ತೆಯ ನಿವಾಸದ ಪ್ರವೇಶ ದ್ವಾರದಲ್ಲಿ ಬುಧವಾರ ಸಂಜೆ ಕಾಣಿಸಿಕೊಂಡಿದೆ.

ಹಿಂದೂ ಸೇನಾದ ಕಾರ್ಯಕರ್ತರು ನಿನ್ನೆ ಸಂಜೆ 7 ಗಂಟೆಯ ವೇಳೆ ಅಂಟಿಸಿದ್ದ ಪೋಸ್ಟರ್‌ಗಳನ್ನು ಪೊಲೀಸರು ತೆರವುಗೊಳಿಸಿದರು.
ಉವೈಸಿ ‘ವಂದೇ ಮಾತರಂ’ ಎನ್ನುವುದಿಲ್ಲವೆಂದು ಬಹಿರಂಗವಾಗಿ ಹೇಳಿಕೆ ನೀಡಿದುದರಿಂದ ರೊಚ್ಚಿಗೆದ್ದ ತಮ್ಮ ಕಾರ್ಯಕರ್ತರು ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ. ಈ ದೇಶದಲ್ಲಿ ರಾಜದ್ರೋಹಿಗಳಿಗೆ ಅವಕಾಶವಿರಬಾರದು ಎಂದು ಹಿಂದೂ ಸೇನಾದ ಅಧ್ಯಕ್ಷ ವಿಷ್ಣು ಗುಪ್ತ ಹೇಳಿದ್ದಾರೆ.
ತಾನು ‘ಭಾರತ್ ಮಾತಾಕೀ ಜೈ’ ಹಾಗೂ ‘ವಂದೇ ಮಾತರಂ’ ಎಂದು ಹೇಳುವುದಿಲ್ಲವೆನ್ನುವ ಮೂಲಕ ಉವೈಸಿ, ದೇಶದ ಮುಸ್ಲಿಮರಿಗೆ ಯಾವ ಸಂದೇಶ ನೀಡಲು ಪ್ರಯತ್ನಿಸುತ್ತಿದ್ದಾರೆ? ಅಂತಹ ಪಾಠಗಳ ಮೂಲಕ ಕೇವಲ ಅವರು ಮುಸ್ಲಿಮರಲ್ಲಿ ರಾಷ್ಟ್ರೀಯತೆ ವಿರೋಧಿ ಭಾವನೆಯನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ. ಅವರು ಸಂಸತ್ತಿನಲ್ಲಿ ಕುಳಿತ್ತಿದ್ದಾರೆ ಹಾಗೂ ಭಾರತದ ನಿವಾಸಿಯಾಗಿದ್ದಾರೆ. ಅಂದ ಮೇಲೆ ಅವರಿಗೆ ‘ಭಾರತ್ ಮಾತಾಕೀ ಜೈ’ ಎನ್ನಲು ಸಮಸ್ಯೆಯೇನು? ಅವರು ದೇಶವನ್ನು ಗೌರವಿಸಲು ನಿರಾಕರಿಸುತ್ತಾರಾದರೆ ಪಾಕಿಸ್ತಾನಕ್ಕೆ ಹೋಗಲಿ ಎಂದು ಗುಪ್ತಾ ಹಿಂದೂಸ್ಥಾನ್ ಟೈಂಸ್‌ಗೆ ತಿಳಿಸಿದ್ದಾರೆ.
ತಮಗೆ ಮಾಹಿತಿ ಬಂದೊಡನೆಯೇ ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದೇವೆ. ಗುಪ್ತಾರನ್ನು ಸ್ಪಷ್ಟೀಕರಣಕ್ಕಾಗಿ ಕರೆಸಲಾಗುವುದೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಯುವ ಜನಾಂಗದಲ್ಲಿ ದೇಶಭಕ್ತಿಯನ್ನು ತುಂಬಬೇಕೆಂಬ ಆರೆಸ್ಸೆಸ್ ವರಿಷ್ಠ ಮೋಹನ ಭಾಗವತ್‌ರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಉವೈಸಿ, ತನ್ನ ಕುತ್ತಿಗೆಗೆ ಚೂರಿಯನ್ನಿರಿಸಿದರೂ ತಾನು ‘ಭಾರತ್ ಮಾತಾಕೀ ಜೈ’ ಎನ್ನಲಾರೆ. ತಾನು ಆ ಘೋಷಣೆ ಕೂಗಲಾರೆ. ತಾವೇನು ಮಾಡುತ್ತೀರಿ ಭಾಗವತ್ ಸಾಹೇಬರೇ ಎಂದು ಈ ಮೊದಲು ಸವಾಲು ಹಾಕಿದ್ದರು.
ಅವರು ಈ ಮಾತನ್ನು ಫೆ.13ರಂದು ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಉದ್ಗೀರ್ ತಹಸೀಲ್‌ನಲ್ಲಿ ನಡೆದ ರ್ಯಾಲಿಯೊಂದರ ವೇಳೆ ಹೇಳಿದ್ದರು.
 ಉವೈಸಿಯವರ ನಿವಾಸದ ಹೊರಗೆ ಪೋಸ್ಟರ್ ಹಚ್ಚಿದವರ ಗುರುತು ಪತ್ತೆಗೆ ತಾವು ಪ್ರಯತ್ನಿಸುತ್ತಿದ್ದೇವೆಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X