Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಗಣಿತ, ವಿಜ್ಞಾನಗಳಲ್ಲಿ ನಗರದ...

ರಾಜ್ಯದಲ್ಲಿ ಗಣಿತ, ವಿಜ್ಞಾನಗಳಲ್ಲಿ ನಗರದ ವಿದ್ಯಾರ್ಥಿಗಳನ್ನು ಮೀರಿಸಿದ ಹಳ್ಳಿಹೈದರು

ವಾರ್ತಾಭಾರತಿವಾರ್ತಾಭಾರತಿ17 March 2016 11:50 PM IST
share
ರಾಜ್ಯದಲ್ಲಿ ಗಣಿತ, ವಿಜ್ಞಾನಗಳಲ್ಲಿ ನಗರದ ವಿದ್ಯಾರ್ಥಿಗಳನ್ನು ಮೀರಿಸಿದ ಹಳ್ಳಿಹೈದರು

ಬೆಂಗಳೂರು,ಮಾ.17: ರಾಷ್ಟ್ರೀಯ ಸರಾಸರಿಗೆ ಹೋಲಿಸಿದರೆ ಕರ್ನಾಟಕದ ಗ್ರಾಮೀಣ ವಿದ್ಯಾರ್ಥಿಗಳು 10ನೆ ತರಗತಿಯ ಇಂಗ್ಲಿಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ನಗರ ಪ್ರದೇಶಗಳ ವಿದ್ಯಾರ್ಥಿಗಳಿಗಿಂತ ಉತ್ತಮ ಸಾಧನೆಯನ್ನು ಪ್ರದರ್ಶಿಸುತ್ತಾರೆ ಎಂದು ಇದೇ ಮೊದಲ ಬಾರಿಗೆ ನಡೆಸಲಾದ ರಾಷ್ಟ್ರೀಯ ಸಾಧನೆ ಸಮೀಕ್ಷೆಯು ಹೇಳಿದೆ. ಇದು ಪ್ರಮುಖ ವಿಷಯಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ನಗರ ಮತ್ತು ಪಟ್ಟಣಗಳ ವಿದ್ಯಾರ್ಥಿಗಳಿಗಿಂತ ಹಿಂದಿರುತ್ತಾರೆ ಎಂಬ ಪ್ರಚಲಿತ ಭಾವನೆಯ ಬುಡಕ್ಕೇ ಪೆಟ್ಟು ನೀಡಿದೆ.

ಇಂಗ್ಲಿಷ್‌ನಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ರಾಷ್ಟ್ರೀಯ ಸರಾಸರಿ 244ಕ್ಕೆ ಹೋಲಿಸಿದರೆ 259 ಅಂಕಗಳನ್ನು ಗಳಿಸಿದ್ದಾರೆ. ನಗರ ಪ್ರದೇಶಗಳ ವಿದ್ಯಾರ್ಥಿಗಳೂ 259 ಅಂಕಗಳನ್ನು ಗಳಿಸಿರುವರಾದರೂ ರಾಷ್ಟ್ರೀಯ ಸರಾಸರಿಯಾದ 263ಕ್ಕಿಂತ ಹಿಂದುಳಿದಿದ್ದಾರೆ. ಗಣಿತದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು 267 ಅಂಕಗಳನ್ನು (ರಾ.ಸರಾಸರಿ 247) ಗಳಿಸಿದ್ದರೆ, ನಗರ ವಿದ್ಯಾರ್ಥಿಗಳು 256 ಅಂಕಗಳನ್ನು (ರಾ.ಸರಾಸರಿ 255) ಗಳಿಸಿದ್ದಾರೆ.

ವಿಜ್ಞಾನ ಮತ್ತು ಸಮಾಜ ವಿಜ್ಞಾನದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಅನುಕ್ರಮವಾಗಿ 268(ರಾಸ.247 ಮತ್ತು 268(ರಾ.ಸ.247) ಅಂಕಗಳನ್ನು ಗಳಿಸಿದ್ದರೆ, ನಗರ ವಿದ್ಯಾರ್ಥಿಗಳ ಸಾಧನೆ ವಿಜ್ಞಾನದಲ್ಲಿ 261(ರಾ.ಸ.257) ಮತ್ತು ಸಮಾಜ ವಿಜ್ಞಾನದಲ್ಲಿ 260(ರಾ.ಸ.257) ಆಗಿದೆ.

ಹರ್ಯಾಣ,ಮೇಘಾಲಯ,ನಾಗಾಲ್ಯಾಂಡ್‌ಮತ್ತು ಜಮ್ಮು-ಕಾಶ್ಮೀರಗಳಲ್ಲಿ ಪರಿಸ್ಥಿತಿ ಇದಕ್ಕೆ ವಿರುದ್ಧವಾಗಿದೆ. ಈ ರಾಜ್ಯಗಳಲ್ಲಿ ನಗರ ಪ್ರದೇಶಗಳ ವಿದ್ಯಾರ್ಥಿಗಳು ಗ್ರಾಮೀಣ ವಿದ್ಯಾರ್ಥಿಗಳಿಗಿಂತ ಉತ್ತಮ ಸಾಧನೆ ಪ್ರದರ್ಶಿಸಿದ್ದಾರೆ. ಇಂಗ್ಲಿಷ್ ಭಾಷಾ ವಿಷಯದಲ್ಲಿ ಈ ಅಂತರ ಎದ್ದು ಕಾಣುತ್ತಿದೆ.
ಒಟ್ಟಾರೆಯಾಗಿ ಕರ್ನಾಟಕದ ವಿದ್ಯಾರ್ಥಿಗಳು(ನಗರಮತ್ತು ಗ್ರಾಮೀಣ) ಇಂಗ್ಲಿಷ್‌ನಲ್ಲಿ 259,ಗಣಿತ 260,ವಿಜ್ಞಾನ 266 ಮತ್ತು ಸಮಾಜ ವಿಜ್ಞಾನದಲ್ಲಿ 266 ಅಂಕಗಳನ್ನು ಗಳಿಸುವ ಮೂಲಕ ಈ ಎಲ್ಲ ವಿಷಯಗಳ ರಾಷ್ಟ್ರೀಯ ಸರಾಸರಿ(250)ಗಿಂತ ಹೆಚ್ಚಿನ ಸಾಧನೆಯನ್ನು ಮೆರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X