Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯು ವಿವಾದ: ತನಿಖಾ ಸಮಿತಿಯ ವರದಿ...

ಜೆಎನ್‌ಯು ವಿವಾದ: ತನಿಖಾ ಸಮಿತಿಯ ವರದಿ ಒಪ್ಪದಿರಲು ವಿದ್ಯಾರ್ಥಿಗಳ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ17 March 2016 11:52 PM IST
share
ಜೆಎನ್‌ಯು ವಿವಾದ: ತನಿಖಾ ಸಮಿತಿಯ ವರದಿ ಒಪ್ಪದಿರಲು ವಿದ್ಯಾರ್ಥಿಗಳ ನಿರ್ಧಾರ

ಹೊಸದಿಲ್ಲಿ, ಮಾ.17: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ಸಂಸತ್ ಭವನ ದಾಳಿಯ ಅಪರಾಧಿ ಅಫ್ಝಲ್ ಗುರುವನ್ನು ಬೆಂಬಲಿಸಿ ಫೆ.9ರಂದು ನಡೆದಿದ್ದ ಕಾರ್ಯಕ್ರಮದಲ್ಲಿ ವಹಿಸಿದ್ದ ಪಾತ್ರದ ಬಗ್ಗೆ ವಿವರಣೆ ನೀಡುವಂತೆ ಶೋಕಾಸ್ ನೋಟಿಸ್ ನೀಡಲಾಗಿರುವ ವಿದ್ಯಾರ್ಥಿಗಳು, ವಿವಿಯ ತನಿಖಾ ಮಂಡಳಿಯೊಂದರ ವರದಿಯನ್ನು ಒಪ್ಪದಿರಲು ನಿರ್ಧರಿಸಿದ್ದಾರೆ. ಅದರಂತೆಯೇ ತಾವು ಉತ್ತರವನ್ನು ಕಳುಹಿಸಲಿದ್ದೇವೆಂದು ಅವರು ಹೇಳಿದ್ದಾರೆ.

ದಿಲ್ಲಿಯಲ್ಲಿ ಬುಧವಾರ ತಡರಾತ್ರಿಯವರೆಗೆ ನಡೆದ ಜೆಎನ್‌ಯು ವಿದ್ಯಾರ್ಥಿ ಮಂಡಳಿಯ ಸಭೆಯೊಂದರಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ವಿಚಾರಣಾ ವರದಿಯ ನ್ಯಾಯ ಬದ್ಧವಲ್ಲದ ತನಿಖಾ ಪ್ರಕ್ರಿಯೆಯನ್ನು ಆಧರಿಸಿದೆ. ಆದುದರಿಂದ ತಾವು ಅದನ್ನು ಅಂಗೀಕರಿಸಲು ನಿರಾಕರಿಸಿದ್ದೇವೆ. ಅದೇ ರೀತಿಯಲ್ಲಿ ಶೋಕಾಸ್ ನೋಟಿಸ್‌ಗೆ ತಾವು ಉತ್ತರ ನೀಡಲಿದ್ದೇವೆಂದು ಮಂಡಳಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.

ಅವರು, ವಿವಿಯ ನಿಯಮ ಹಾಗೂ ಶಿಸ್ತು ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆಂದು ವಿವಿಯ ಉನ್ನತ ಸಮಿತಿಯೊಂದು ತೀರ್ಮಾನಿಸಿದ ಬಳಿಕ, ಅವರ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದೆಂಬುದನ್ನು ವಿವರಿಸುವಂತೆ ಕೇಳಿ ಮಾ.14ರಂದು 12 ಮಂದಿ ವಿದ್ಯಾರ್ಥಿಗಳಿಗೆ ಶೋಕಾಸ್ ನೋಟಿಸ್ ತಿಳಿಸಿವೆ.

ವಿಚಾರಣೆ ಪೂರ್ಣಗೊಂಡಾಗ ಇಬ್ಬರು ವಿದ್ಯಾರ್ಥಿಗಳು ಜೈಲಿನಲ್ಲಿದ್ದರು. ಇನ್ನೊಬ್ಬಾಕೆ, ಈ ಮೊದಲು ಅಮಾನತುಗೊಳಿಸಲಾಗಿರುವ ಐಶ್ವರ್ಯ ಅಧಿಕಾರಿ ಎಂಬ ವಿದ್ಯಾರ್ಥಿನಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೆ, ಸಮಿತಿಯ ವರದಿಯಲ್ಲಿ ಆಕೆಯ ಹೆಸರಿನ ಉಲ್ಲೇಖವಿಲ್ಲ. ಇದೊಂದು ಭಾರೀ ಪಕ್ಷಪಾತದ ಹಾಗೂ ಅಪ್ರಜಾಸತ್ತಾತ್ಮಕ ತನಿಖೆಯಾಗಿದೆಯೆಂದು ವಿದ್ಯಾರ್ಥಿ ಸಮಿತಿಯ ಸದಸ್ಯರು ಆರೋಪಿಸಿದ್ದಾರೆ.

ಈ ವಿಷಯದಲ್ಲಿ ಕಾನೂನು ಸಲಹೆ ಪಡೆಯಲು ವಿದ್ಯಾರ್ಥಿಗಳು ಹೆಚ್ಚಿನ ಸಮಯಾವಕಾಶ ಕೋರಿದುದರಿಂದ ಶೋಕಾಸ್ ನೋಟಿಸ್‌ಗೆ ಉತ್ತರಿಸುವ ಗಡುವನ್ನು ಉಪಕುಲಪತಿ ಮಾ.18ರ ತನಕ ವಿಸ್ತರಿಸಿದ್ದಾರೆಂದು ವಿವಿಯ ಹಿರಿಯಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೋಟಿಸ್‌ಗೆ ಅವರು ಉತ್ತರ ನೀಡಿದ ಬಳಿಕ ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸಲಾಗುವುದೆಂದು ಅವರು ಹೇಳಿದ್ದಾರೆ.

ಮಾ.11ರಂದು ಸಲ್ಲಿಸಲಾಗಿರುವ ಐವರು ಸದಸ್ಯರ ಸಮಿತಿಯ ವರದಿಯು, ವಿದ್ಯಾರ್ಥಿಗಳು ಹಾಗೂ ಆಡಳಿತದ ತಪ್ಪುಗಳನ್ನು ಬೆಟ್ಟು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X