Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇವಾರ್ ವಿವಿಯಲ್ಲಿದ್ದುದು ಗೋಮಾಂಸವಲ್ಲ!:...

ಮೇವಾರ್ ವಿವಿಯಲ್ಲಿದ್ದುದು ಗೋಮಾಂಸವಲ್ಲ!: ಬಂಧಿತ ವಿದ್ಯಾರ್ಥಿಗಳಿಗೆ ಜಾಮೀನು

ವಾರ್ತಾಭಾರತಿವಾರ್ತಾಭಾರತಿ17 March 2016 11:54 PM IST
share
ಮೇವಾರ್ ವಿವಿಯಲ್ಲಿದ್ದುದು ಗೋಮಾಂಸವಲ್ಲ!: ಬಂಧಿತ ವಿದ್ಯಾರ್ಥಿಗಳಿಗೆ ಜಾಮೀನು

ಜೈಪುರ, ಮಾ.17: ರಾಜಸ್ಥಾನದ ಮೇವಾರ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ಗೋಮಾಂಸ ಬೇಯಿಸುತ್ತಿದ್ದ ಆರೋಪದಲ್ಲಿ ಮಂಗಳವಾರ ಬಂಧಿಸಲ್ಪಟ್ಟಿದ್ದ ನಾಲ್ವರು ಕಾಶ್ಮೀರಿ ಪದವಿ ವಿದ್ಯಾರ್ಥಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಬೇಯಿಸುತ್ತಿದ್ದುದು ಗೋಮಾಂಸವಲ್ಲವೆಂದು ತಜ್ಞರ ಮಂಡಳಿಯೊಂದು ಖಚಿತಪಡಿಸಿದ ಬಳಿಕ, ಚಿತ್ತೋರ್‌ಗಡದ ಗಂಗ್ರಾರ್ ಉಪ ವಿಭಾಗೀಯ ದಂಡಾಧಿಕಾರಿಯ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ.

ಆರೋಪಿ ವಿದ್ಯಾರ್ಥಿಗಳಾದ ಶಾಕಿಬ್ ಅಶ್ರಫ್, ಹಿಲಾಲ್ ಫಾರೂಕ್,ಮುಹಮ್ಮದ್ ಮಕ್ಬೂಲ್ ಹಾಗೂ ಶೌಕತ್ ಅಲಿ ಎಂಬವರು ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಗೋಮಾಂಸ ಬೇಯಿಸುತ್ತಿದ್ದಾರೆಂಬ ಗಾಳಿ ಸುದ್ದಿ ಸೋಮವಾರ ರಾತ್ರಿ ಹರಡಿತ್ತು. ಶೇ. 100 ಸಸ್ಯಾಹಾರಿ ಸಂಸ್ಥೆ ಎನ್ನಲಾಗಿರುವ ಮೇವಾರ ವಿವಿಯ ಮುಂದೆ ಕೆಲಸದವರು ಸೇರಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಪೊಲೀಸರು 21ರಿಂದ 27ರ ಹರೆಯದ ನಾಲ್ವರು ವಿದ್ಯಾರ್ಥಿಗಳನ್ನು ಮರುದಿನ ಐಪಿಸಿ ಸೆ.152ರನ್ವಯ ಬಂಧಿಸಿದ್ದರು

ಮಾಂಸವನ್ನು ಹಾಸ್ಟೆಲ್‌ಗೆ ತಂದು ಬೇಯಿಸಿದುದರಲ್ಲಿ ಆರೋಪಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಯಿತು.ಹಾಸ್ಟೆಲ್‌ನಿಂದ ಸಂಗ್ರಹಿಸಲಾದ ಮಾಂಸದ ಮಾದರಿಯ ಪರೀಕ್ಷೆಗಾಗಿ ಪಶುವೈದ್ಯಕೀಯ ಸಮಿತಿಯೊಂದನ್ನು ರಚಿಸಲಾಯಿತು. ಆದರೆ, ಅದು ಗೋಮಾಂಸವಲ್ಲವೆಂದು ಸಮಿತಿ ತೀರ್ಮಾನಕ್ಕೆ ಬಂದಿದೆ. ಅವರು ಸ್ಥಳೀಯ ಅಂಗಡಿಯೊಂದರಿಂದ 300 ಗ್ರಾಂಗಳಷ್ಟು ಬೇರೆ ಯಾವುದೋ ಮಾಂಸ ಖರೀದಿಸಿದ್ದರೆಂಬುದು ತನಿಖೆಯಿಂದ ತಿಳಿದು ಬಂದಿದೆಯೆಂದು ಗಂಗ್ರಾರ್ ಠಾಣಾಧಿಕಾರಿ ಲಾಭುರಾಮ್ ಬಷ್ಣೋಯಿ ತಿಳಿಸಿದ್ದಾರೆ.

ಸಂಸ್ಥೆಯ ಎರಡು ವಿದ್ಯಾರ್ಥಿ ಗುಂಪುಗಳ ನಡುವಿನ ದ್ವೇಷದಿಂದಾಗಿ ಇಡೀ ಪ್ರಕರಣ ನಡೆದಿದೆ. ತಾವು ಎರಡೂ ಗುಂಪುಗಳಿಗೆ ಕೌನ್ಸಿಲಿಂಗ್ ಮಾಡುತ್ತಿದ್ದೇವೆ ಹಾಗೂ ಘಟನೆಯ ಕುರಿತು ಪರಿಶೀಲಿಸಲು ತನಿಖಾ ಸಮಿತಿಯೊಂದನ್ನು ರಚಿಸಿದ್ದೇವೆಂದು ವಿವಿಯ ಪಿಆರ್‌ಒ, ಹರೀಶ್ ಗುರ್ನಾನಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X