Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಐಯುಡಿಎಫ್ ಬೆಂಬಲವಿಲ್ಲದೆ ಯಾವುದೇ ಪಕ್ಷ...

ಎಐಯುಡಿಎಫ್ ಬೆಂಬಲವಿಲ್ಲದೆ ಯಾವುದೇ ಪಕ್ಷ ಅಸ್ಸಾಂನಲ್ಲಿ ಸರಕಾರ ರಚಿಸಲು ಸಾಧ್ಯವಿಲ್ಲ : ಬದ್ರುದ್ದೀನ್ ಅಜ್ಮಲ್

ವಾರ್ತಾಭಾರತಿವಾರ್ತಾಭಾರತಿ18 March 2016 2:44 PM IST
share
ಎಐಯುಡಿಎಫ್ ಬೆಂಬಲವಿಲ್ಲದೆ ಯಾವುದೇ ಪಕ್ಷ ಅಸ್ಸಾಂನಲ್ಲಿ ಸರಕಾರ ರಚಿಸಲು ಸಾಧ್ಯವಿಲ್ಲ : ಬದ್ರುದ್ದೀನ್ ಅಜ್ಮಲ್

ಗುವಾಹಟಿ,ಮಾ, 18 : ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್(ಎಐಯುಡಿಎಫ್)ನ ಬೆಂಬಲವಿಲ್ಲದೆ ಯಾವ ಪಕ್ಷಕ್ಕೂ ಅಸ್ಸಾಂನಲ್ಲಿ ಸರಕಾರ ರಚಿಸಲು ಸಾಧ್ಯವಿಲ್ಲವೆಂದುಪಕ್ಷದ ಅಧ್ಯಕ್ಷ ಬದ್ರುದ್ದೀನ್ ಅಜ್ಮಲ್ ಹೇಳಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ತಮ್ಮ ಪಕ್ಷ ರಾಜ್ಯದಲ್ಲಿ ದಿನೇ ದಿನೇ ಪ್ರಬಲಗೊಳ್ಳುತ್ತಿರುವುದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳೆರಡಕ್ಕೂ ತಮ್ಮ ಫ್ರಂಟ್ ಬಗ್ಗೆ ಸ್ವಲ್ಪ ಮಟ್ಟಿನ ಭಯ ಮೂಡಿದೆ ಎಂದರು.ಅಸ್ಸಾಂ ರಾಜ್ಯವನ್ನು ಇನ್ನೊಂದು ಬಾಂಗ್ಲಾದೇಶವನ್ನಾಗಿಸಲು ಎಐಯುಡಿಎಫ್ ಹಾಗೂ ಕಾಂಗ್ರೆಸ್ ಪಕ್ಷಗಳು ಸಂಚು ಹೂಡಿವೆ ಎಂಬ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ಆರೋಪವು ಸಂಪೂರ್ಣವಾಗಿ ಸುಳ್ಳು ಎಂದು ಹೇಳಿದ ಅಜ್ಮಲ್‘‘ನಾವೇಕೆ ಕಾಂಗ್ರೆಸ್ ಪಕ್ಷದೊಂದಿಗೆ ಸಂಚು ಹೂಡಬೇಕು? ಅಕ್ರಮ ವಲಸಿಗರ ವಿಚಾರವನ್ನು ಜೀವಂತವಾಗಿಟ್ಟಿದ್ದು ಕಾಂಗ್ರೆಸ್,’’ಎಂದು ಹೇಳಿದರು.

ಮುಸ್ಲಿಂ ಜನಸಂಖ್ಯೆ ಸಾಕಷ್ಟಿಲ್ಲದ ಪ್ರದೇಶಗಳಲ್ಲಿಯೂ ಎಐಯುಡಿಎಫ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದರ ಹಿಂದೆ ಕಾಂಗ್ರೆಸ್ ಮತಗಳನ್ನು ಒಡೆದು ಬಿಜೆಪಿಗೆ ಸಹಾಯ ಮಾಡುವ ಉದ್ದೇಶವಿದೆಯೆಂಬ ಕಾಂಗ್ರೆಸ್ ಪಕ್ಷದ ಆಪಾದನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು‘‘ನಮಗೆ ಎಲ್ಲಾ 126 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಹಕ್ಕಿದೆ. ಬಿಜೆಪಿ ಅಥವಾ ಕಾಂಗ್ರೆಸ್ಸಿಗೆ ಸಹಾಯ ಮಾಡಿ ನಾವೇಕೆ ನಮ್ಮ ಸಮಯ ಹಾಗೂ ಶಕ್ತಿಯನ್ನು ವ್ಯರ್ಥಗೊಳಿಸಬೇಕು?’’ಎಂದವರು ಪ್ರಶ್ನಿಸಿದರು. ಉತ್ತರ ಅಸ್ಸಾಂನಲ್ಲಿ ತಮ್ಮ ಪಕ್ಷ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಎಂದು ಹೇಳಿದ ಅವರು ಚಹಾ ತೋಟಗಳ ಕಾರ್ಮಿಕರು ಹಾಗೂ ಕೆಲವುಬುಡಕಟ್ಟು ಜನಾಂಗದ ಸದಸ್ಯರು ತಮ್ಮ ಪಕ್ಷದ ಅಭ್ಯರ್ಥಿಗಳಾಗಲಿದ್ದಾರೆ, ಎಂದು ಮಾಹಿತಿ ನೀಡಿದರು.

ತಮ್ಮ ಪಕ್ಷ ಮಧ್ಯ ಅಸ್ಸಾಂನಲ್ಲಿ ಪ್ರಬಲವಾಗಿದೆಯೆಂದು ಹೇಳಿದ ಅವರುಉತ್ತರ ಅಸ್ಸಾಂನಲ್ಲೂ ಎರಡು ಸೀಟು ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಹಾಗೂ ಅಸ್ಸಾಂ ಗಣ ಪರಿಷತ್ ನಡುವಿನ ಮೈತ್ರಿಯ ಬಗ್ಗೆ ಮಾತನಾಡಿದ ಅವರು ಈ ಮೈತ್ರಿಯಿಂದ ಕಾಂಗ್ರೆಸ್ ಹೆಚ್ಚಿನ ಪ್ರಯೋಜನ ಪಡೆಯಲಿದೆಯೆಂದರು.

ಅಲ್ಪಸಂಖ್ಯಾತರ ಹಿತವನ್ನು ಕಾಯಲು ತಮ್ಮ ಪಕ್ಷ ಬದ್ಧವಾಗಿದೆಯೆಂದು ಹೇಳಿದ ಅಜ್ಮಲ್ ಅಕ್ರಮ ವಲಸಿಗರ ಬಗ್ಗೆ ಪ್ರಸ್ತಾಪಿಸುತ್ತಾ ರಾಜ್ಯವನ್ನು 1971ರ ಅನಂತರ ಅಕ್ರಮವಾಗಿ ಪ್ರವೇಶಿಸಿದವರೆಲ್ಲರೂ ಹೊರನಡೆಯಲೇಬೇಕು ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X