Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ 4,497 ಕೋಟಿ ರೂ.

ವಾರ್ತಾಭಾರತಿವಾರ್ತಾಭಾರತಿ18 March 2016 11:23 PM IST
share

ಬಾಲ ಪೋಷಕ ಯೋಜನೆಯ ಅಡಿಯಲ್ಲಿ 3.6 ಕೋಟಿ ರೂ.ಗಳ ವೆಚ್ಚದಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 25 ಸಾವಿರ ಮಕ್ಕಳಿಗೆ 180 ದಿನಗಳ ಅವಧಿಗೆ ಪ್ರತಿದಿನ 2 ಗ್ರಾಂಗಳ ಸ್ಪಿರುಲಿನಾವನ್ನು ಒದಗಿಸಲು ಉದ್ದೇಶಿಸಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಿಂದುಳಿದ ತಾಲೂಕುಗಳಲ್ಲಿನ ಗರ್ಭಿಣಿ ಮತ್ತು ಬಾಣಂತಿಯರಿಗೆ ಮೈಕ್ರೋನ್ಯೂಟ್ರಿಯಂಟ್ಸ್‌ಗಳನ್ನು ಒದಗಿಸಲು 42 ಕೋಟಿ ರೂ.ವೆಚ್ಚದಲ್ಲಿ ಮಾತೃಪುಷ್ಠಿವರ್ಧಿನಿ ಯೋಜನೆಯನ್ನು ಜಾರಿಗೊಳಿಸಲಾಗುವುದು.
ಅಂಗನವಾಡಿ ಮಕ್ಕಳಿಗೆ ಈಗ ನೀಡುತ್ತಿರುವ ಕೆನೆರಹಿತ ಹಾಲಿನ ಬದಲಾಗಿ, ಕ್ಷೀರಭಾಗ್ಯ ಯೋಜನೆಯಡಿ 42.50 ಕೋಟಿ ರೂ.ಗಳ ಹೆಚ್ಚುವರಿ ವೆಚ್ಚದಲ್ಲಿ ಕೆನೆಸಹಿತ ಹಾಲನ್ನು ನೀಡಲು ಉದ್ದೇಶಿಸಿದೆ.
 ಕಟ್ಟಡಗಳನ್ನು ಹಾಗೂ ಎಸ್‌ಡಿಪಿ ಅಡಿಯಲ್ಲಿ 500 ಅಂಗನವಾಡಿ ಕಟ್ಟಡಗಳನ್ನು ಅಂದರೆ ಒಟ್ಟು 4 ಸಾವಿರ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.
ಬಾಲ ಸ್ನೇಹಿ ಕೇಂದ್ರಗಳ ಯೋಜನೆ ಅಡಿ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಶಿಶು ಸ್ನೇಹಿ ಕೇಂದ್ರಗಳನ್ನಾಗಿ ಪರಿವರ್ತಿಸಲು ಉದ್ದೇಶಿಸಿದ್ದು, ಒಂದು ಕೇಂದ್ರಕ್ಕೆ 10 ಸಾವಿರ ರೂ.ಗಳನ್ನು ನೀಡಲಾಗುವುದು.
 
ಬಹುಪೌಷ್ಟಿಕ ಆಹಾರದ ಕೊರತೆಯಿರುವ ಮಕ್ಕಳ ಪೌಷ್ಟಿಕಾಂಶದ ಮಟ್ಟವನ್ನು ಸುಧಾರಣೆ ಮಾಡಲು ಹಾಗೂ ಅವರನ್ನು ಸಾಮಾನ್ಯ ಮಗುವಿನ ಮಟ್ಟಕ್ಕೆ ತರುವಂತೆ ಮಾಡಲು ಪ್ರಸ್ತುತ ನೀಡುತ್ತಿರುವ 750 ರೂ.ಗಳಿಗೆ ಬದಲಾಗಿ 2 ಸಾವಿರ ರೂ.ಗಳಿಗೆ ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಉದ್ದೇಶಕ್ಕೆ ಹೆಚ್ಚುವರಿಯಾಗಿ 3.12 ಕೋಟಿ ರೂ.ಒದಗಿಸಲಾಗಿದೆ. ಸ್ತ್ರೀ ಶಕ್ತಿ ಸಮೃದ್ಧಿ ಯೋಜನೆ ಅಡಿಯಲ್ಲಿ ಕರ್ನಾಟಕ ಸಹಕಾರ ಸಂಘ ಅಧಿನಿಯಮ, 1960ರ ಅಡಿ ಜಿಲ್ಲಾ ಸ್ತ್ರೀ ಶಕ್ತಿ ಗುಂಪುಗಳನ್ನು ನೋಂದಾಯಿಸಲು ಉದ್ದೇಶಿಸಿದ್ದು, ಇದಕ್ಕೆ 30 ಲಕ್ಷ ರೂ. ಒದಗಿಸಲಾಗುವುದು.
ರಸ್ತೆ ಪಕ್ಕದಲ್ಲಿ ಸಣ್ಣ ವ್ಯಾಪಾರ ನಡೆಸುತ್ತಿರುವ 10 ಸಾವಿರ ಮಹಿಳೆಯರಿಗೆ ಸಮೃದ್ಧಿ ಯೋಜನೆ ಅಡಿಯಲ್ಲಿ 10 ಕೋಟಿ ರೂ.ಗಳ ಸಹಾಯ ಧನವನ್ನು ನೀಡಲಾಗುವುದು.
ಶಿಶು ಕೇಂದ್ರೀಕೃತ ಯೋಜನೆಯಡಿ ಬುದ್ಧಿಮಾಂದ್ಯ ಮಕ್ಕಳ ಶಾಲೆಗಳಿಗೆ ಪ್ರತಿ ಮಗುವಿಗೆ ನೀಡುತ್ತಿರುವ ಅನುದಾನವನ್ನು ವಸತಿ ಶಾಲೆಗಳಲ್ಲಿ 5 ಸಾವಿರದಿಂದ 5,600ಕ್ಕೆ ಮತ್ತು ವಸತಿ ರಹಿತ ಶಾಲೆಗಳಿಗೆ 4 ಸಾವಿರದಿಂದ 4,800ಕ್ಕೆ ಪರಿಷ್ಕರಣೆ ಮಾಡಲಾಗುವುದು.
ಸ್ತ್ರೀ ಶಕ್ತಿ ಗುಂಪುಗಳ ಮಹಿಳೆಯರಿಗೆ ಕರ್ನಾಟಕ ರಾಜ್ಯ ಉದ್ಯೋಗ ತರಬೇತಿ ಇಲಾಖೆಯಿಂದ ನಡೆಸುವ ತರಬೇತಿ ಕಾರ್ಯಕ್ರಮಗಳ ಮೂಲಕ ತರಬೇತಿ ನೀಡಿ ಇವರನ್ನು ಸ್ವತಂತ್ರ ಉದ್ಯಮಿಗಳನ್ನಾಗಿ ರೂಪಿಸಲು ಸ್ತ್ರೀ ಶಕ್ತಿ ಕೌಶಲ್ಯ ಯೋಜನೆಯನ್ನು ಜಾರಿಗೆ ತರಲು ಉದ್ದೇಶಿಸಿದ್ದು, ಇದಕ್ಕೆ 2.50 ಕೋಟಿ ರೂ.ಒದಗಿಸಲಾಗುವುದು.
ಎಚ್‌ಐವಿ ಸೋಂಕಿತ ಸಂತ್ರಸ್ತೆಯರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಪ್ರತಿ ಫಲಾನುಭವಿಗೆ 40 ಸಾವಿರ ರೂ.ಸಾಲವಾಗಿ ಹಾಗೂ 10 ಸಾವಿರ ರೂ. ಸಹಾಯಧನವಾಗಿ ಧನಶ್ರೀ ಯೋಜನೆಯಡಿ ನೀಡಲು 5 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಒಟ್ಟಾರೆಯಾಗಿ 4,497 ಕೋಟಿ ರೂ. ಗಳನ್ನು ಒದಗಿಸಲಾಗಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X