Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾನೂನು ಮತ್ತು ನ್ಯಾಯಾಲಯಗಳು

ಕಾನೂನು ಮತ್ತು ನ್ಯಾಯಾಲಯಗಳು

ವಾರ್ತಾಭಾರತಿವಾರ್ತಾಭಾರತಿ18 March 2016 11:24 PM IST
share

ರಾಜ್ಯದಲ್ಲಿನ ವಕೀಲರ ಕಲ್ಯಾಣ ಕಾರ್ಯಕ್ರಮಗಳಿಗಾಗಿ ವಕೀಲರ ಪರಿಷತ್‌ಗೆ 5 ಕೋಟಿ ರೂ., ಅಡ್ವೋಕೇಟ್ ಜನರಲ್ ಕಚೇರಿಯ ಗಣಕೀಕರಣ. ರಾಜ್ಯದ ಎಲ್ಲ್ಲ ಜಿಲ್ಲಾ ನ್ಯಾಯಾಲಯ ಸಂಕೀರ್ಣಗಳಲ್ಲಿ ಕುಡಿಯುವ ನೀರಿನ ಘಟಕಗಳ ಸ್ಥಾಪನೆ. ಕೌಟುಂಬಿಕ ವ್ಯಾಜ್ಯ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಹೊಸದಾಗಿ 22 ಕುಟುಂಬ ನ್ಯಾಯಾಲಯಗಳ ಸ್ಥಾಪನೆ. 2016-17ನೇ ಸಾಲಿನಲ್ಲಿ ಕಾನೂನು ಮತ್ತು ನ್ಯಾಯಾಲಯಗಳ ಇಲಾಖೆಗೆ ಒಟ್ಟಾರೆಯಾಗಿ 671 ಕೋಟಿ ರೂ. ಗಳನ್ನು ಒದಗಿಸಲಾಗಿದೆ.


...........................


ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ 1814 ಕೊಟಿ ರೂ.

ಕರ್ನಾಟಕದಲ್ಲಿ ಕೈಗಾರಿಕೆಯನ್ನು ಉತ್ತೇಜಿಸಲು, ಯೋಜನಾ ಪ್ರಸ್ತಾವನೆಗಳನ್ನು ಅಭಿವೃದ್ಧಿಪಡಿಸಲು ಹಾಗೂ ಮಾರುಕಟ್ಟೆ ಇಂಟಲಿಜೆನ್ಸ್ ಅಭಿವೃದ್ಧಿಪಡಿಸಲು ಇನ್‌ವೆಸ್ಟ್ ಕರ್ನಾಟಕ ಎಂಬ ಲಾಭ ನಿರೀಕ್ಷೆಯಿಲ್ಲದ ಕಂಪನಿಯನ್ನು ರಚಿಸಲಾಗುವುದು.
ಬೆಂಗಳೂರಿನ ಪೀಣ್ಯ ಮತ್ತು ಬೊಮ್ಮಸಂದ್ರ, ಮೈಸೂರು, ಬೆಳಗಾವಿ ಮತ್ತು ಹುಬ್ಬಳ್ಳಿಗಳಲ್ಲಿನ ಭಾರೀ ಕೈಗಾರಿಕಾ ಪ್ರದೇಶಗಳನ್ನು ಮತ್ತು ಎಸ್ಟೇಟ್‌ಗಳನ್ನು ಕೈಗಾರಿಕಾ ಪಟ್ಟಣ ಪ್ರದೇಶಗಳೆಂದು ಘೋಷಿಸಲು ಪ್ರಸ್ತಾಪಿಸಲಾಗಿದೆ.
ಪ್ರಸ್ತುತ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು 175 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಗೋಡಂಬಿ ತಂತ್ರಜ್ಞಾನ ತರಬೇತಿ ಕೇಂದ್ರವನ್ನು ಕುಮಟಾ, ಉತ್ತರ ಕನ್ನಡ ಜಿಲ್ಲೆ ಇಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ.
ಕೈಗಾರಿಕೆಗಳಿಗೆ ಭೂಮಿ ಕಳೆದುಕೊಂಡವರಿಗೆ ಮತ್ತು ಸ್ಥಳೀಯ ಗ್ರಾಮೀಣ ಯುವ ಜನತೆಗೆ, ಉದ್ಯೋಗ ಕೌಶಲ್ಯಗಳನ್ನು ಹೆಚ್ಚಿಸಿ, ಸ್ಥಳೀಯ ಕೈಗಾರಿಕೆಗಳಲ್ಲಿ ಕಾರ್ಯಸ್ಥಳಗಳಲ್ಲಿಯೇ ಉದ್ಯೋಗ ತರಬೇತಿ ನೀಡಿ ಉದ್ಯೋಗ ಒದಗಿಸಲಾಗುವುದು.
 ಮಹಿಳಾ ಉದ್ಯಮ ಶೀಲತೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಮಂಗಳೂರು, ಬಳ್ಳಾರಿ, ಧಾರವಾಡ ಹಾಗೂ ಮೈಸೂರಿನಲ್ಲಿ ಮಹಿಳಾ ಪಾರ್ಕ್‌ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.
ಜಪಾನ್ ದೇಶದ ಆರ್ಥಿಕ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಸಹಯೋಗದೊಂದಿಗೆ ತುಮಕೂರು ಜಿಲ್ಲೆ ವಸಂತ ನರಸಾಪುರದಲ್ಲಿ ‘ಜಪಾನೀಸ್ ಇಂಡಸ್ಟ್ರಿಯಲ್ ಟೌನ್‌ಶೀಪ್’ ಅಭಿವೃದ್ಧಿ.
ಭಾರತ ಸರಕಾರದೊಡನೆ ಶೇ.50 ರಷ್ಟು ವೆಚ್ಚವನ್ನು ಹಂಚಿಕೊಳ್ಳುವುದರೊಡನೆ ಬೆಂಗಳೂರಿನ ಸಮೀಪದಲ್ಲಿ 87 ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ‘ಎಪಿಡಿಡಿಆರ್‌ಎಲ್’ರ ಸ್ಥಾಪನೆ.

 ಶೇ.50 ದರದಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಕೆಐಎಡಿಬಿ-ಕೆಎಸ್‌ಎಸ್‌ಐಡಿಸಿಯಿಂದ ಶೆಡ್ ಮತ್ತು ಭೂಮಿಯನ್ನು ಹಂಚಿಕೆ ಮಾಡಲಾಗುವುದು. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 3 ಕೋಟಿ ರೂ. ಸರಕಾರಿ ಅನುದಾನದೊಡನೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉದ್ಯಮಿಗಳ ಸಂಘದ ಮೂಲಕ ಕೌಶಲ್ಯ, ಇಡಿಪಿ ತರಬೇತಿ ಕೇಂದ್ರದ ಅಭಿವೃದ್ಧಿ.

ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಂದ ಹೊರಬರುತ್ತಿರುವ ಕೌಶಲ್ಯಪೂರ್ಣ ಮಾನವ ಸಂಪನ್ಮೂಲವನ್ನು ನೆಲೆಗೊಳಿಸಲು, ರಾಜ್ಯದಾದ್ಯಂತ ಜಿಟಿಟಿಸಿ ಉಪ ಕೇಂದ್ರಗಳಲ್ಲಿ ಶ್ರೇಷ್ಟತಾ ಕೇಂದ್ರಗಳನ್ನು (ಸಿಒಇ) ಸ್ಥಾಪಿಸಲು ಉದ್ದೇಶಿಸಲಾಗಿದೆ. ವಾಸದ ಮತ್ತು ಕೆಲಸದ ಶೆಡ್‌ಗಳನ್ನು ನಿರ್ಮಿಸಲು ನೇಕಾರರಿಗೆ ಹಲವಾರು ಯೋಜನೆಗಳ ಅಡಿಯಲ್ಲಿ ನೀಡಲಾದ 17 ಕೋಟಿ ರೂ.ಗಳ ಸಾಲ ಮತ್ತು ಬಡ್ಡಿಯ ಮನ್ನಾ.
ಕೈಮಗ್ಗ ಮತ್ತು ವಿದ್ಯುತ್ ವಗ್ಗಗಳ ನೇಕಾರರಿಗೆ ಸಹಕಾರ ಬ್ಯಾಂಕ್‌ಗಳು ಮತ್ತು ಸಂಘಗಳ ಮೂಲಕ ಶೇ.1ರ ಬಡ್ಡಿ ದರದಲ್ಲಿ 2 ಲಕ್ಷ ರೂ.ಗಳವರೆಗೆ ಸಾಲ ಮತ್ತು ಶೇ.3 ರ ಬಡ್ಡಿ ದರದಲ್ಲಿ 2ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ.
ಗ್ರಾಮೀಣ ಪ್ರದೇಶಗಳಲ್ಲಿರುವ ಸಣ್ಣ ಪ್ರಮಾಣದ ವಿದ್ಯುತ್ ಮಗ್ಗಗಳ ಘಟಕಗಳಿಗೆ 50% ಸಹಾಯಧನದೊಡನೆ ಸೌರಶಕ್ತಿ ಉಪಕರಣಗಳ ನೀಡಿಕೆ.
ಭಾರತ ಸರಕಾರದ ವಿದ್ಯುತ್ ಮಗ್ಗಗಳ ಆಧುನೀಕರಣ ಯೋಜನೆಯಡಿಯಲ್ಲಿ ವಿದ್ಯುತ್ ಮಗ್ಗಗಳನ್ನು ಉನ್ನತೀಕರಿಸಲು ರಾಜ್ಯ ಸರಕಾರದ ವತಿಯಿಂದ ಪ್ರತಿ ಮಗ್ಗಕ್ಕೆ 10,000 ರೂ.ಗಳ ಕೊಡುಗೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X