Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀರನ್ನು ಉಳಿಸಲು ಮತ್ತು ಬಹುಬೆಳೆ ಪದ್ಧತಿ...

ನೀರನ್ನು ಉಳಿಸಲು ಮತ್ತು ಬಹುಬೆಳೆ ಪದ್ಧತಿ ಅನುಸರಿಸುವಂತೆ ರೈತರಿಗೆ ಪ್ರಧಾನಿ ಕರೆ

ವಾರ್ತಾಭಾರತಿವಾರ್ತಾಭಾರತಿ19 March 2016 11:47 PM IST
share

ಹೊಸದಿಲ್ಲಿ,ಮಾ.19: ಸತತ ಬರಗಾಲದಿಂದಾಗಿ ಕೃಷಿ ಇಳುವರಿಯು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಲ ಸಂರಕ್ಷಣೆ ಕ್ರಮಗಳಿಗೆ ಕರೆ ನೀಡಿದರಲ್ಲದೆ ಬಹುಬೆಳೆ ಪದ್ಧತಿಯ ಮೇಲೆ ಗಮನ ಕೇಂದ್ರೀಕರಿಸುವಂತೆ ಮತ್ತು ಹೈನುಗಾರಿಕೆ, ಕೋಳಿ ಸಾಕಣೆ ಮತ್ತು ಆಹಾರ ಸಂಸ್ಕರಣೆಯಂತಹ ಕೃಷಿ ಪೂರಕ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಸೂಚಿಸಿದರು.

 ಶನಿವಾರ ಇಲ್ಲಿ ಮೂರು ದಿನಗಳ ಕೃಷಿ ಉನ್ನತಿ ಮೇಳವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, 2014 ಮೇ ತಿಂಗಳಿನಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ತನ್ನ ಸರಕಾರವು ನೂತನ ಬೆಳೆ ವಿಮೆ ಯೋಜನೆ ಮತ್ತು ರೈತರಿಗೆ ಮಣ್ಣು ಆರೋಗ್ಯ ಕಾರ್ಡ್ ಗಳ ವಿತರಣೆ ಸೇರಿದಂತೆ ಕೃಷಿ ಪ್ರಗತಿಗಾಗಿ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ, 2022ರ ವೇಳೆಗೆ ರೈತರ ಆದಾಯವನ್ನು ಇಮ್ಮಡಿಗೊಳಿಸುವುದು ಸರಕಾರದ ಉದ್ದೇಶವಾಗಿದೆ ಎಂದು ಹೇಳಿದರು.
ಸಾಕಷ್ಟು ನೀರು ಮತ್ತು ಫಲವತ್ತಾದ ಭೂಮಿಯನ್ನು ಹೊಂದಿರುವ ಪೂರ್ವ ಭಾಗದ ರಾಜ್ಯಗಳಲ್ಲಿ ಆಧುನಿಕ ತಂತ್ರ ಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಎರಡನೆ ಹಸಿರು ಕ್ರಾಂತಿಗೂ ಅವರು ಕರೆಯನ್ನು ನೀಡಿದರು.
ಕೃಷಿ ಇಳುವರಿ ಮತ್ತು ಆದಾಯವನ್ನು ಹೆಚ್ಚಿಸಲು ಜಲ ಸಂರಕ್ಷಣೆಗೆ ಒತ್ತು ನೀಡಿದ ಅವರು, ನನೆಗುದಿಗೆ ಬಿದ್ದಿರುವ 90 ನೀರಾವರಿ ಯೋಜನೆಗಳನ್ನು ಗುರುತಿಸಿರುವ ತನ್ನ ಸರಕಾರವು ಅವುಗಳ ಪುನಶ್ಚೇತನಕ್ಕೆ ನಿರ್ಧರಿಸಿದೆ. ಇದರಿಂದ 80 ಲಕ್ಷ ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ನೀರಾವರಿ ಯೋಜನೆಗಳಿಗಾಗಿ ಸರಕಾರವು 20,000 ಕೋಟಿ ರೂ.ಗಳನ್ನು ವ್ಯಯಿಸುತ್ತಿದೆ ಎಂದು ಹೇಳಿದರು.
ಈ ಬೇಸಿಗೆಯಲ್ಲಿ ನರೇಗಾ ನಿಧಿಯನ್ನು ಜಲ ಸಂರಕ್ಷಣೆಗಾಗಿ ಕೆರೆಗಳಂತಹ ಸಾರ್ವಜನಿಕ ಆಸ್ತಿ ನಿರ್ಮಾಣಕ್ಕೆ ಬಳಕೆ ಮಾಡಲಾಗುವುದು ಎಂದರು.
ಉತ್ಪಾದನಾ ವೆಚ್ಚ ಕಡಿತ ಮತ್ತು ರೈತರ ಆದಾಯ ಏರಿಕೆಗಾಗಿ ಕಿರು ಮತ್ತು ಹನಿ ನೀರಾವರಿ ಮತ್ತು ದ್ರವ ರಸಗೊಬ್ಬರ ಬಳಕೆಗೆ ಒತ್ತು ನೀಡಿದ ಅವರು,ಜಲ ಕೊಯ್ಲಿಗೆ ಜಲ ಸಂರಕ್ಷಣೆಯಷ್ಟೇ ಮಹತ್ವವಿದೆ. ನೀರನ್ನು ಪೋಲು ಮಾಡುವ ಹಕ್ಕು ನಮಗಿಲ್ಲ. ಪ್ರತಿ ಹನಿ ನೀರಿಗೂ ಹೆಚ್ಚು ಬೆಳೆ ಬೆಳೆಯುವ ಮೂಲಕ ನಾವು ನೀರಿನ ಮಿತವ್ಯಯವನ್ನು ಸಾಧಿಸಬಹುದಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X