Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಪಾಯಕಾರಿ ವ್ಯಕ್ತಿಗಳ ಕೈಯಲ್ಲಿ...

ಅಪಾಯಕಾರಿ ವ್ಯಕ್ತಿಗಳ ಕೈಯಲ್ಲಿ ಅಂಬೇಡ್ಕರ್: ಡಾ.ವಿಶ್ವನಾಥ್ ಆತಂಕ

ವಾರ್ತಾಭಾರತಿವಾರ್ತಾಭಾರತಿ19 March 2016 11:54 PM IST
share
ಅಪಾಯಕಾರಿ ವ್ಯಕ್ತಿಗಳ ಕೈಯಲ್ಲಿ ಅಂಬೇಡ್ಕರ್: ಡಾ.ವಿಶ್ವನಾಥ್ ಆತಂಕ

ಕಲ್ಯಾಣಪುರ, ಮಾ.19: ಡಾ.ಬಿ.ಆರ್.ಅಂಬೇಡ್ಕ್ ಅವರು ಅಪಾಯಕಾರಿ ವ್ಯಕ್ತಿಗಳು ಹಾಗೂ ಪಕ್ಷದ ಕೈಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಬಳಸಿಕೊಂಡೇ ದೇಶದ ಬಹುಸಂಖ್ಯಾತ ಜನರ ಮೇಲೆ ಪ್ರಹಾರ ನಡೆಸುವ ಹುನ್ನಾರವನ್ನು ಈ ವ್ಯಕ್ತಿಗಳು ನಡೆಸುತ್ತಿದ್ದಾರೆ ಎಂದು ಮಂಗಳೂರು ವಿವಿಯ ಡಾ.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ವಿಶ್ವನಾಥ್ ಹೇಳಿದ್ದಾರೆ.

ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಸಮಾನ ಅವಕಾಶ ಕೇಂದ್ರ (ಎಸ್ಸಿ/ಎಸ್ಟಿ ಸೆಲ್)ವು, ಮಂಗಳೂರು ವಿವಿ ಡಾ.ಅಂಬೇಡ್ಕರ್ ಅಧ್ಯಯನ ಕೇಂದ್ರ, ಸಾಮಾಜಿಕ ಪ್ರತ್ಯೇಕತೆ ಮತ್ತು ಒಳಗೊಳ್ಳುವ ನೀತಿಯ ಅಧ್ಯಯನ ಕೇಂದ್ರ ಹಾಗೂ ಬೆಂಗಳೂರಿನ ಭಾರತ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಕಾನೂನು ಶಾಲೆಗಳ ಸಹಯೋಗದೊಂದಿಗೆ ಇಂದು ಕಾಲೇಜಿ ನಲ್ಲಿ ಆಯೋಜಿಸಿದ್ದ ‘ಡಾ. ಅಂಬೇಡ್ಕರ್: ಭಾರತದ ಬೆಳಕು’ ಕಾರ್ಯಾಗಾರದಲ್ಲಿ ದಿಕ್ಸೂಚಿ ಭಾಷಣದಲ್ಲಿ ಅವರು ಮಾತನಾಡುತ್ತಿದ್ದರು.

ಸ್ವಾತಂತ್ರಾ ನಂತರ ಅಂಬೇಡ್ಕರ್ ಅವರನ್ನು ನಾವು ಮೂರು ಕಾಲಘಟ್ಟದಲ್ಲಿ ಅವಲೋಕಿಸ ಬಹುದು. ಮೊದಲ ಕಾಲಘಟ್ಟ ದೇಶಕ್ಕೆ ಸ್ವಾತಂತ್ರ ಸಿಕ್ಕಿದಂದಿನಿಂದ ಅವರು ಸಾಯುವವರೆಗೆ (1956). ಈ ಕಾಲಘಟ್ಟದಲ್ಲಿ ಸಮಾಜ ಮತ್ತು ಸರಕಾರ ಅವರನ್ನು ಅತ್ಯಂತ ನಿರ್ಲಕ್ಷದಿಂದ ನಡೆಸಿ ಕೊಂಡಿತು. ಹಿಂದು ಕೋಡ್‌ಬಿಲ್ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರಿಗೆ ಯಾವುದೇ ರಾಜಕೀಯ ಸ್ಥಾನ ಮಾನ ನೀಡಲಿಲ್ಲ.

ಎರಡನೆ ಕಾಲಘಟ್ಟ 1956ರಿಂದ 1989ರಲ್ಲಿ ವಿ.ಪಿ.ಸಿಂಗ್ ಪ್ರಧಾನ ಮಂತ್ರಿಯಾಗುವವರೆಗೆ. ಈ ಸಮಯದಲ್ಲಿ ಅವರ ವಿಚಾರಧಾರೆ, ಅವರ ಚಿಂತನೆಗಳು ಜನರನ್ನು ತಲುಪದಂತೆ, ಜನರ ಮನಸ್ಸಿನಿಂದ ಅಳಿಸುವಂತೆ ಮಾಡುವ ಹುನ್ನಾರ ವಿವಿಧ ರಾಜಕೀಯ ಪಕ್ಷಗಳಿಂದ ನಡೆಯಿತು. ಅವರ ರಾಜಕೀಯ, ಅರ್ಥವ್ಯವಸ್ಥೆ, ಜಾತಿ, ಧರ್ಮಗಳ ಕುರಿತು ಬರೆದಿರುವುದು ಜನರಿಗೆ ತಲುಪದಂತೆ ನೋಡಿಕೊಳ್ಳಲಾಯಿತು.

ಮೂರನೆ ಕಾಲಘಟ್ಟದಲ್ಲಿ ವಿ.ಪಿ.ಸಿಂಗ್ ಪ್ರಧಾನಿಯಾದ ಬಳಿಕ ಇಡೀ ವ್ಯವಸ್ಥೆಯನ್ನು ಬದಲಿಸಿದರು. ಅಂಬೇಡ್ಕರ್ ಅವರ ವಿಚಾರಧಾರೆ, ಚಿಂತನೆ, ಸಾಹಿತ್ಯ ಜನಸಾಮಾನ್ಯರನ್ನು ತಲುಪು ವಂತೆ ನೋಡಿಕೊಂಡರು. 1991ರಲ್ಲಿ ಅಂಬೇ ಡ್ಕರ್‌ಗೆ ‘ಭಾರತರತ್ನ’ ಪ್ರದಾನಿಸಿದ ಮೇಲೆ ಅಂಬೇಡ್ಕರ್ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ಧೋರಣೆ ಒಮ್ಮಿಂದೊಮ್ಮೆಗೆ ಬದಲಾಗಿ ಅವರನ್ನು ಆರಾಧಿಸತೊಡಗಿದವು. ಅವರು ನಮ್ಮವ ರೆಂದು ಪ್ರತಿಪಾದಿಸಲು ಮೇಲಾಟವೇ ನಡೆಯ ತೊಡಗಿತು ಎಂದು ಡಾ.ವಿಶ್ವನಾಥ್ ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಡಾ. ಅಂಬೇಡ್ಕರ್ ಅಭಿಯಾನದ ಸಲಹಾ ಸಮಿತಿಯ ಸದಸ್ಯ ಪ್ರೊ.ಕೆ.ಫಣಿರಾಜ್ ಮಾತನಾಡಿದರು.

ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ.ನೇರಿ ಕರ್ನೇಲಿಯೊ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಬೆಂಗಳೂರಿನ ಹಿರಿಯ ಚಿಂತಕ ಶಿವಸುಂದರ್ ಹಾಗೂ ಡಾ.ಅಂಬೇಡ್ಕರ್ ಅಭಿಯಾನದ ಸಂಚಾಲಕ ಪ್ರದೀಪ್ ರಾಮವತ್, ವಿದ್ಯಾರ್ಥಿನಿ ನಯನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಿಲಾಗ್ರಿಸ್ ಕಾಲೇಜು ಸಮಾನ ಅವಕಾಶ ಕೇಂದ್ರದ ನಿರ್ದೇಶಕ ಪ್ರೊ.ಸಿರಿಲ್ ಮೆಥಾಯಸ್ ಸ್ವಾಗತಿಸಿದರು. ಅರ್ಪಣಾ ಕಾರ್ಯಕ್ರಮ ನಿರ್ವಹಿಸಿದರು. ಅಮಿತಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X