Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಬ್ಬರು ಸಾವು, ಐದು ಮಂದಿಗೆ ತೀವ್ರ ಗಾಯ

ಇಬ್ಬರು ಸಾವು, ಐದು ಮಂದಿಗೆ ತೀವ್ರ ಗಾಯ

ಮಂಡ್ಯ: ಎತ್ತಿನಗಾಡಿ, ಟೆಂಪೋಗೆ ಬಸ್ ಢಿಕ್ಕಿ

ವಾರ್ತಾಭಾರತಿವಾರ್ತಾಭಾರತಿ20 March 2016 11:19 PM IST
share
ಇಬ್ಬರು ಸಾವು, ಐದು ಮಂದಿಗೆ ತೀವ್ರ ಗಾಯ

ಮಂಡ್ಯ, ಮಾ.20: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ಸೊಂದು ಎತ್ತಿನಗಾಡಿ ಹಾಗೂ ಗೂಡ್ಸ್ ಟೆಂಪೋಗೆ ಢಿಕ್ಕಿ ಹೊಡೆದು ಇಬ್ಬರು ವ್ಯಕ್ತಿಗಳು ಹಾಗೂ ಒಂದು ಎತ್ತು ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕು ತಳಗವಾದಿ ಗೇಟ್ ಬಳಿ ರವಿವಾರ ಮುಂಜಾನೆ ಸಂಭವಿಸಿದೆ.
ಎತ್ತಿನಗಾಡಿ ಓಡಿಸುತ್ತಿದ್ದ ತಳಗವಾದಿ ಗ್ರಾಮದ ಬೋರೇಗೌಡರ ಪುತ್ರ ಸಿದ್ದೇಗೌಡ (40) ಹಾಗೂ ಟೆಂಪೋ ಚಾಲಕ ಮದ್ದೂರು ತಾಲೂಕಿನ ಸೋಂಪುರ ಗ್ರಾಮದ ವಿನೋದ್ (35) ಸಾವನ್ನಪ್ಪಿದವರು.
ಎತ್ತಿನಗಾಡಿಯಲ್ಲಿದ್ದ ತಳಗವಾದಿ ಗ್ರಾಮದ ಹನುಮಂತು, ಮಹೇಂದ್ರ, ಟೆಂಪೋದಲ್ಲಿದ್ದ ಮದ್ದೂರು ತಾಲೂಕಿನ ಉಪ್ಪಾರದೊಡ್ಡಿಯ ಮಹದೇವ, ಕುಮಾರ, ಕಿರಂಗಂದೂರು ಗ್ರಾಮದ ಶಿವರಾಮು ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಅಪಘಾತದಲ್ಲಿ ಎತ್ತಿನಗಾಡಿಯ ಎರಡು ಎತ್ತುಗಳಲ್ಲಿ ಒಂದು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಂದು ಎತ್ತಿನ ಕಾಲು, ಎರಡು ಕೊಂಬು ಮುರಿದು ಸಾವು ಬದುಕಿನ ನಡುವೆ ನರಳುತ್ತಿದೆ.
ಘಟನೆ ಹಿನ್ನೆಲೆ:  ಮಳವಳ್ಳಿ ತಾಲೂಕಿನ ತಳಗವಾದಿ ಗೇಟ್ ಬಳಿ ಎತ್ತಿನ ಗಾಡಿಯೊಂದಕ್ಕೆ ಕಬ್ಬು ತುಂಬುತ್ತಿದ್ದಾಗ ಮಳವಳ್ಳಿ ಕಡೆಯಿಂದ ಅತಿ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಹಿಂದಿನಿಂದ ಢಿಕ್ಕಿ ಹೊಡೆದ ರಭಸಕ್ಕೆ ಎತ್ತು ಮತ್ತು ಗಾಡಿ ಹಾಗೂ ಗಾಡಿಯಲ್ಲಿದ್ದ ರೈತ ಸಿದ್ದೆಗೌಡ, ಹನುಮಂತು ಸುಮಾರು 20 ಮೀಟರ್ ದೂರ ಹೋಗಿ ಬಿದ್ದಿದ್ದಾರೆ. ಅದರಲ್ಲಿ ಸಿದ್ದೆಗೌಡ ಮತ್ತು ಒಂದು ಎತ್ತು ಮೃತಪಟ್ಟಿತು.
ಅನಂತರ, ಅದೇ ಬಸ್ ಮದ್ದೂರು ಕಡೆಯಿಂದ ಮಳವಳ್ಳಿ ಕಡೆಗೆ ಬರುತ್ತಿದ್ದ ಬಾಳೆಮಂಡಿಗೆ ಸೇರಿದ ಟೆಂಪೋವೊಂದಕ್ಕೆ ಢಿಕ್ಕಿ ಹೊಡೆದ ರಭಸಕ್ಕೆ ಟೆಂಪೋ ಮುಂಭಾಗ ಸಂಪೂರ್ಣ ಜಖಂಗೊಂಡು ಸುಮಾರು 15 ಮೀಟರ್ ದೂರ ಹೋಗಿ ಬಿದ್ದಿದೆ. ಅದರಲ್ಲಿದ್ದ ಚಾಲಕ ವಿನೋದ್ ಸಾವನ್ನಪ್ಪಿದ್ದು, ಇನ್ನೊಬ್ಬ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ರಿಕ್ತ ಜನರಿಂದ ರಸ್ತೆ ತಡೆ: ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಹಳ್ಳಿಗಳ ಸಾವಿರಾರು ಜನರು ಸ್ಥಳಕ್ಕೆ ಬಂದು ರಸ್ತೆತಡೆ ನಡೆಸಿ ಬಸ್ಸಿನ ಚಾಲಕನ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಮೃತರ ಕುಟುಂಬದವರಿಗೆ ಬಸ್ ಮಾಲಕರಿಂದ ಪರಿಹಾರ ಕೊಡಿಸಬೇಕೆಂದು ಆಗ್ರಹಿಸಿದರು.
   ಜಿಲ್ಲಾಧಿಕಾರಿಗಳು, ಶಾಸಕರು ಬರುವವರೆಗೂ ಶವ ಎತ್ತುವುದಿಲ್ಲವೆಂದು ಪಟ್ಟು ಹಿಡಿದ ಜನರು ಮತ್ತು ಮೃತ ಕುಟುಂಬದವರನ್ನು ಡಿವೈಎಸ್ಪಿ ಆರ್.ಶಿವಕುಮಾರ್ ಮನವೊಲಿಸಿ ಶವಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಯಶಸ್ವಿಯಾದರು. ಆದರೆ, ಅಪಘಾತ ನಡೆದ ಸ್ಥಳದಲ್ಲಿ ಮಧ್ಯಾಹ್ನದವರೆಗೂ ಗಾಯಗೊಂಡ ಎತ್ತು ನರಳಾಡುತ್ತಿರುವ ದೃಶ್ಯ ಮನಕಲಕುವಂತಿತ್ತು.

ಸ್ಥಳಕ್ಕೆ ತಹಶೀಲ್ದಾರ್ ಎಂ.ಎಲ್.ಶಿವಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕೆಯಾಗಿ ಕೆ.ಎಂ.ದೊಡ್ಡಿ, ಮಳವಳ್ಳಿ ಗ್ರಾಮಾಂತರ ಹಾಗೂ ಪುರ ಪೊಲೀಸ್ ಠಾಣೆಯ ಪೊಲೀಸರು ಮತ್ತು ಜಿಲ್ಲಾ ಸಶಸ್ತ್ರ ಪಡೆಯ ಪೊಲೀಸರನ್ನು ಕರೆಸಿ ಕೊಳ್ಳಲಾಗಿತ್ತು. ಬಸ್ ಚಾಲಕ ಪರಾರಿಯಾಗಿದ್ದು, ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X