Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಕಾಸವೊಂದೇ ಮೋದಿ ಮಂತ್ರ: ರಾಜನಾಥ್

ವಿಕಾಸವೊಂದೇ ಮೋದಿ ಮಂತ್ರ: ರಾಜನಾಥ್

ವಾರ್ತಾಭಾರತಿವಾರ್ತಾಭಾರತಿ20 March 2016 11:28 PM IST
share
ವಿಕಾಸವೊಂದೇ ಮೋದಿ ಮಂತ್ರ: ರಾಜನಾಥ್

ಹೊಸದಿಲ್ಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿಂದು ತನ್ನ ಅಭಿವೃದ್ಧಿಯ ಮಂತ್ರವನ್ನು ಪುನರುಚ್ಛರಿಸಿದ್ದಾರೆ. ಆದರೆ, ಸರಕಾರವನ್ನು ಈ ಹಾದಿಯಿಂದ ಬದಿಗೆ ಸರಿಸಲು ಪ್ರಯತ್ನಗಳು ನಡೆಯುತ್ತಿವೆಯೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಪಕ್ಷಕ್ಕೆ ಜ್ಞಾಪಿಸಿದ್ದಾರೆ.

ಕೆಲವು ಶಕ್ತಿಗಳು ಅಭಿವೃದ್ಧಿಯ ಹಾದಿಯಿಂದ ತಮ್ಮನ್ನು ತಳ್ಳಲು ಪ್ರಯತ್ನಿಸುತ್ತಿವೆ. ಪಕ್ಷದ ಸದಸ್ಯರು ಅವರ ಪ್ರಭಾವಕ್ಕೊಳಗಾಗದೆ ದೃಢವಾಗಿ ನಿಲ್ಲಬೇಕು. ಅಭಿವೃದ್ಧಿ ಕಾರ್ಯ ನಡೆಸುವ ತಮ್ಮ ಪ್ರಯತ್ನವನ್ನು ಹಾಳುಗೆಡವಲು ಮತ್ತೆ ಮತ್ತೆ ಪ್ರಯತ್ನಗಳು ನಡೆಯುತ್ತಿರುವ ಹೊರತಾಗಿಯೂ ತಾವು ತಮ್ಮ ಕಾರ್ಯಸೂಚಿಗೆ ಅಂಟಿಕೊಳ್ಳಬೇಕೆಂದು ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮೋದಿಯವರ ಸಮಾರೋಪ ಭಾಷಣವನ್ನುಲ್ಲೇಖಿಸುತ್ತ ಅವರು ಮಾಧ್ಯಮಗಳಿಗೆ ತಿಳಿಸಿದರು.
ವಿಪಕ್ಷವು ತಮ್ಮನ್ನು ಋಣಾತ್ಮಕ ರಾಜಕೀಯದತ್ತ ಎಳೆಯುತ್ತಿದೆ. ಆದರೆ, ತಾವು ತಮ್ಮ ಕಾರ್ಯಸೂಚಿಯ ಮೇಲೆ ಗಮನ ಕೇಂದ್ರೀಕರಿಸುವ ಅಗತ್ಯವಿದೆ. ವಿಪಕ್ಷಗಳ ಋಣಾತ್ಮಕ ರಾಜಕೀಯದ ಬಲೆಯೊಳಗೆ ಸಿಲುಕಬೇಡಿರೆಂದು ಪ್ರಧಾನಿ ಸಭೆಯಲ್ಲಿ ಹೇಳಿದ್ದರೆನ್ನಲಾಗಿದೆ.
ವಿಕಾಸ, ವಿಕಾಸ, ವಿಕಾಸ, ಇದಕ್ಕೆ ತನ್ನ ಗಮನ. ಇದು ದೇಶದ ಎಲ್ಲ ಸಮಸ್ಯೆಗಳಿಗೆ ಏಕೈಕ ಪರಿಹಾರವೆಂದು ಪ್ರಧಾನಿ ಅಭಿಪ್ರಾಯಿಸಿದರೆಂದು ರಾಜನಾಥ್ ತಿಳಿಸಿದರು.
ಕಾರ್ಯಾಚರಣೆಯಲ್ಲಿ ಸೃಜನಶೀಲತೆಯಿರಲಿ. ಪ್ರತಿ ಕಾರ್ಯಕರ್ತ ದೇಶಾದ್ಯಂತದ ಗ್ರಾಮಗಳಿಗೆ ತಲುಪಬೇಕು ಎಂದ ಪ್ರಧಾನಿ, ಮುಖ್ಯವಾಗಿ ದುರ್ಗಮ ಪ್ರದೇಶಗಳಲ್ಲೂ ಪಕ್ಷದ ಸಂಘಟನೆ ವಿಸ್ತಾರವಾದ ಕ್ರಮವನ್ನು ಶ್ಲಾಘಿಸಿದರೆಂದು ಅವರು ಹೇಳಿದರು.
65 ವರ್ಷಗಳಿಂದ ವಿದ್ಯುತ್ ವಂಚಿತವಾಗಿದ್ದ ಹಳ್ಳಿಗಳಿಗೆ ವಿದ್ಯುತ್ ಒದಗಿಸಲು ತಾವು ಯಶಸ್ವಿಯಾಗಿದ್ದೇವೆ. ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಭ್ರಷ್ಟಾಚಾರದ ಆರೋಪ ಕೇಳಿಬಂದಿಲ್ಲ. ಎಲ್ಲ ಕಾರ್ಯಕರ್ತರೂ ಸಮಾನವಾಗಿ ‘ಬೇಟಿ ಬಚಾವೊ ಬೇಟಿ ಪಡಾವೊ’ ಇತ್ಯಾದಿ ಕಾರ್ಯಕ್ರಮಗಳ ಪ್ರಚಾರ ಮಾಡುತ್ತಿದ್ದಾರೆಂದು ಮೋದಿ ಹೇಳಿದರೆಂದು ರಾಜನಾಥ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X