Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡಿಆರ್‌ಡಿಒದಿಂದ ವಿಕಿರಣ ಮಟ್ಟ ಅಳೆಯುವ...

ಡಿಆರ್‌ಡಿಒದಿಂದ ವಿಕಿರಣ ಮಟ್ಟ ಅಳೆಯುವ ಸೆನ್ಸರ್ ಅಭಿವೃದ್ಧಿ

ವಾರ್ತಾಭಾರತಿವಾರ್ತಾಭಾರತಿ20 March 2016 11:32 PM IST
share

ಜೈಸಲ್ಮೇರ್, ಮಾ.20: ಯಾವುದೇ ಪರಮಾಣು ಅವಘಡದ ಸಂದರ್ಭದಲ್ಲಿ ವಿಕಿರಣದ ಮಟ್ಟವನ್ನು ಪತ್ತೆ ಹಚ್ಚಬಲ್ಲ ಸೆನ್ಸರ್ ಒಂದನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆಯ(ಡಿಆರ್‌ಡಿಒ) ಜೋಧಪುರ ಪ್ರಯೋಗಾಲಯದ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.
‘ಡಿರಾಲ್ಡ್ ನ್ಯೂಕ್ಲಿಯರ್’ ಎಂಬ ಈ ಸೆನ್ಸರನ್ನು ಡ್ರೋನ್‌ನ ಮೇಲೆ ಅಳವಡಿಸಬಹುದಾಗಿದೆ. ಅದು 50 ಮೀ. ಎತ್ತರದಿಂದ ಗಾಮಾ ವಿಕಿರಣವನ್ನು ಪತ್ತೆ ಹಚ್ಚಬಲ್ಲುದು.

ಇದು ಬಹುಶಃ ಈ ರೀತಿ ವಿಕಿರಣಶೀಲ ವಸ್ತುವಿನಿಂದಾಗುವ ವಿಕಿರಣವನ್ನು ಪತ್ತೆಹಚ್ಚಬಲ್ಲ ಏಕೈಕ ಉಪಕರಣವಾಗಿದೆಯೆಂಬ ಜೋಧಪುರದ ರಕ್ಷಣಾ ಪ್ರಯೋಗಾಲಯದ ಖ್ಯಾತ ವಿಜ್ಞಾನಿ ಹಾಗೂ ನಿರ್ದೇಶಕ ಎಸ್.ಆರ್. ವಡೇರಾ ತಿಳಿಸಿದ್ದಾರೆ.
ಉದಾಹರಣೆಗೆ, ಮಾಯಾಪುರಿಯಲ್ಲಿ ರೇಡಿಯೊ ಆಕ್ಟಿವ್ ಸೋರಿಕೆಯೊಂದು ಪತ್ತೆ ಹಚ್ಚಲ್ಪಟ್ಟಿದೆ. ಇಂತಹ ಘಟನೆಗಳಲ್ಲಿ, ಈ ಉಪಕರಣವು ಪ್ರದೇಶದ ಮೇಲೆ ಹಾರಾಟ ನಡೆಸುತ್ತದೆ. ವಿಕಿರಣದ ಮೂಲವನ್ನು ಸುಲಭವಾಗಿ ಪತ್ತೆ ಹಚ್ಚಲು ತಮಗೆ ಸಾಧ್ಯವಾಗುತ್ತದೆಂದು ಅವರು ವಿವರಿಸಿದ್ದಾರೆ.
ರಾಜಸ್ಥಾನದ ಪೋಖ್ರಾನ್ ಮರಳುಗಾಡಿಯಲ್ಲಿ ಭಾರತೀಯ ವಾಯುದಳದ ತ್ರೈವಾರ್ಷಿಕ ಕಾರ್ಯಕ್ರಮ ಐಯರ್ನ್ ಫಿಸ್ಟ್- 2016ರಲ್ಲಿ ‘ಡಿರಾಲ್ಡ್ ನ್ಯೂಕ್ಲಿಯರ್’ ಉಪಕರಣವನ್ನು ಡಿಆರ್‌ಡಿಒ ಪ್ರದರ್ಶಿಸಿತ್ತು.
ಸ್ವದೇಶಿ ನಿರ್ಮಿತವಾದ ಈ ಸೆನ್ಸರ್, ತನ್ನ ವಿದ್ಯುಜ್ಜಾಲದೊಂದಿಗೆ ಕೇವಲ 20-22 ಗ್ರಾಂ ತೂಗುತ್ತದೆ. ಈ ಸಂದರ್ಭದಲ್ಲಿ ಸೆನ್ಸರನ್ನು,ಇನ್ನೊಂದು ಸ್ವದೇಶಿ ನಿರ್ಮಿತ, ಕಣ್ಗಾವಲು ಹಾಗೂ ಗೂಢಚರ್ಯೆಗೆ ಬಳಸುವ ಹಗುರ ಯುಎವಿ, ‘ನೇತ್ರ’ ಡ್ರೋನ್‌ಗೆ ಅಳವಡಿಸಲಾಗಿತ್ತು.
ಈ ಉಪಕರಣದ ವೆಚ್ಚ ಸುಮಾರು 20 ಸಾವಿರ ರೂ. ಭಾರತದ ಹೆಚ್ಚುತ್ತಿರುವ ಪರಮಾಣು ಕಾರ್ಯಕ್ರಮಗಳನ್ನು ಪರಿಗಣಿಸಿದಲ್ಲಿ, ಇಂತಹ ಸೆನ್ಸರ್‌ಗಳ ಅಭಿವೃದ್ಧಿ ಅತ್ಯಂತ ಅಗತ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X