Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಭಿವ್ಯಕ್ತಿ ಸ್ವಾತಂತ್ರವೆಂದರೆ ದೇಶವನ್ನು...

ಅಭಿವ್ಯಕ್ತಿ ಸ್ವಾತಂತ್ರವೆಂದರೆ ದೇಶವನ್ನು ನಾಶಪಡಿಸುವ ಸ್ವಾತಂತ್ರವಲ್ಲ: ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ20 March 2016 11:33 PM IST
share
ಅಭಿವ್ಯಕ್ತಿ ಸ್ವಾತಂತ್ರವೆಂದರೆ ದೇಶವನ್ನು ನಾಶಪಡಿಸುವ ಸ್ವಾತಂತ್ರವಲ್ಲ: ಬಿಜೆಪಿ

ಹೊಸದಿಲ್ಲಿ, ಮಾ.20: ಅಭಿವ್ಯಕ್ತಿ ಸ್ವಾತಂತ್ರವು ದೇಶವನ್ನು ನಾಶಗೊಳಿಸುವ ಹಕ್ಕು ನೀಡುವುದಿಲ್ಲವೆಂದು ಬಿಜೆಪಿಯಿಂದು ಹೇಳಿದೆ. ರಾಷ್ಟ್ರೀಯತೆಯ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಈ ವಿಚಾರವನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣೆಯು ತನ್ನ ರಾಜಕೀಯ ನಿರ್ಣಯಗಳಲ್ಲಿ ಅಳವಡಿಸಿಕೊಂಡಿದೆ.

ನಿನ್ನೆ ನಡೆದ ಕಾರ್ಯಕಾರಣಿಯ ಉದ್ಘಾಟನಾ ಭಾಷಣದಲ್ಲಿ ಬಿಜೆಪಿ ಅಧಕ್ಷ ಅಮಿತ್ ಶಾ, ದೇಶದ ಮೇಲೆ ಯಾವುದೇ ದಾಳಿಯನ್ನು ಬಿಜೆಪಿ ಸಹಿಸದು ಎಂದಿದ್ದರು. ಆ ಬಳಿಕ ಕಾರ್ಯಕಾರಿಣಿಯ ಎರಡು ದಿನಗಳ ಅಧಿವೇಶನದಲ್ಲೂ ರಾಷ್ಟ್ರೀಯತೆಯ ಕುರಿತು ವ್ಯಾಖ್ಯಾನ ಕೇಂದ್ರ ಸ್ಥಾನ ಪಡೆದಿತ್ತು.

ಅಭಿವ್ಯಕ್ತಿ ಸ್ವಾತಂತ್ರ ಹಾಗೂ ರಾಷ್ಟ್ರೀಯತೆಗಳು ಒಟ್ಟಾಗಿಯೇ ಇರುತ್ತವೆ. ಸಂವಿಧಾನವು ಭಿನ್ನಮತ ಹಾಗೂ ವಿರೋಧವನ್ನು ಅಭಿವ್ಯಕ್ತಿಸಲು ಸಂಪೂರ್ಣ ಸ್ವಾತಂತ್ರ ನೀಡಿದೆ. ಆದರೆ ದೇಶದ ವಿನಾಶಕ್ಕೆ ಅದು ಸ್ವಾತಂತ್ರ ನೀಡಿಲ್ಲವೆಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಸಭೆಯ ಕುರಿತು ಪತ್ರಕರ್ತರಿಗೆ ವಿವರ ನೀಡುತ್ತ ಹೇಳಿದರು. ರಾಷ್ಟ್ರೀಯತೆಯ ಸಿದ್ಧಾಂತವು ನಮ್ಮ ನಂಬಿಕೆ ಹಾಗೂ ತತ್ತ್ವಜ್ಞಾನಕ್ಕೆ ಮಾರ್ಗದರ್ಶಿಯಾಗಿದೆಯೆಂದು ಅವರು ಸ್ಪಷ್ಟಪಡಿಸಿದರು

ಕಾರ್ಯಕಾರಿಣಿಯಲ್ಲಿ ಮಾತನಾಡಿದ ನಾಯಕರೆಲ್ಲರೂ ಇತ್ತೀಚಿನ ಜೆಎನ್‌ಯು ವಿವಾದದ ಕುರಿತು ಕಾಂಗ್ರೆಸನ್ನು ನೆಲಕ್ಕೊರಸುವ ಹುರುಪಿನಲ್ಲಿದ್ದರು.

ಸಭೆಯು ‘ಭಾರತ್ ಮಾತಾಕೀ ಜೈ’ ಘೋಷಣೆಯ ಕುರಿತಾಗಿಯೂ ಚರ್ಚಿಸಿತೇ ಎಂಬ ಪ್ರಶ್ನೆಗೆ, ಇದೊಂದು ಚರ್ಚಾತೀತ ವಿಷಯವೆಂದು ಬಿಜೆಪಿ ನಂಬಿದೆ. ಜನರಿಗೆ ಈ ಘೋಷಣೆಯ ಬಗ್ಗೆ ಯಾವುದೇ ಸಮಸ್ಯೆಯಿಲ್ಲ. ಅದನ್ನು ತಾವು ನಿನ್ನೆ ಕೋಲ್ಕತಾದಲ್ಲಿ ಕಂಡಿದ್ದೇವೆಂದು ಜೇಟ್ಲಿ, ನಿನ್ನೆ ಕ್ರಿಕೆಟ್ ಪಂದ್ಯದಲ್ಲಿ ಭಾರತವು ಪಾಕಿಸ್ತಾನ ತಂಡವನ್ನು ಸೋಲಿಸಿದಾಗ ಮೊಳಗಿದ ಘೋಷಣೆಯನ್ನು ತನ್ನ ಮಾತಿಗೆ ಸಮರ್ಥನೆಯಾಗಿ ನೀಡಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಈಗ ರಾಜಕೀಯ ಶಕ್ತಿ ಕಳೆದುಕೊಂಡಿದೆ. ಅದರ ಸ್ಥಾನಮಾನ ಕುಸಿದಿದೆ. ಬಿಹಾರ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡುಗಳಂತಹ ರಾಜ್ಯಗಳಲ್ಲಿ ಅದು ಯಾವುದೇ ಮೈತ್ರಿ ಕೂಟದ ‘ಬಾಲ’ವಾಗಿರುವುದರಲ್ಲೇ ತೃಪ್ತಿ ಕಾಣುತ್ತಿದೆಯೆಂದು ಟೀಕಿಸಿದರು.

ಕಾಂಗ್ರೆಸ್ ಸರಕಾರ ಬಂಡಾಯ ಎದುರಿಸುತ್ತಿರುವ ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರಗಳಲ್ಲಿ ಸರಕಾರ ರಚನೆಯ ಬಗ್ಗೆ ಕಾರ್ಯಕಾರಿಣಿ ಚರ್ಚಿಸಿಲ್ಲ.

ಆದಾಗ್ಯೂ, ಪಕ್ಷದ ನಿರ್ಣಯವು ಜಮ್ಮು-ಕಾಶ್ಮೀರದಲ್ಲಿ :ಆಡಳಿತದ ಕಾರ್ಯಸೂಚಿಯನ್ನು’ ಒತ್ತಿ ಹೇಳಿದೆಯೆಂದು ಜೇಟ್ಲಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X