Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಡಿಗರ ಸಾಹಿತ್ಯ ಹೋರಾಟಗಳಿಗೆ ಸ್ಫೂರ್ತಿ:...

ಅಡಿಗರ ಸಾಹಿತ್ಯ ಹೋರಾಟಗಳಿಗೆ ಸ್ಫೂರ್ತಿ: ಶರಣಪ್ಪ ಗಬ್ಬೂರ್

ವಾರ್ತಾಭಾರತಿವಾರ್ತಾಭಾರತಿ20 March 2016 11:33 PM IST
share

ಬೆಂಗಳೂರು, ಮಾ. 20: ಗೋಪಾಲಕೃಷ್ಣ ಅಡಿಗರು ಸಮಾಜದಲ್ಲಿ ನಡೆಯುತ್ತಿದ್ದ ಅನ್ಯಾಯ, ಅಸಮಾನತೆ, ಅಧರ್ಮಗಳ ಕುರಿತು ಕಾವ್ಯ, ಕಾದಂಬರಿಗಳನ್ನು ರಚಿಸುವುದರ ಮೂಲಕ ಜನರನ್ನು ಜಾಗೃತಿಗೊಳಿಸುತ್ತಾ ಅಂದಿನ ಹೋರಾಟಗಳಿಗೆ ಸ್ಫೂರ್ತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಲೇಖಕ ಶರಣಪ್ಪ ಗಬ್ಬೂರ್ ಅಭಿಪ್ರಾಯಿಸಿದ್ದಾರೆ.

ರವಿವಾರ ನಗರದ ಕಬ್ಬನ್‌ಪಾರ್ಕ್‌ನಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಅಕ್ಷಯ ಫೌಂಡೇಷನ್ ಸಹಯೋಗದೊಂದಿಗೆ ಆಯೋಜಿಸಿದ್ದ ಗೋಪಾಲಕೃಷ್ಣ ಅಡಿಗರ ಸಾಹಿತ್ಯ ಕುರಿತು ಮಾತನಾಡಿದ ಅವರು, ಸ್ವಾತಂತ್ರ ಪೂರ್ವದಲ್ಲಿ ಸಮಾಜವನ್ನು ವಸ್ತುನಿಷ್ಠವಾಗಿ ಗ್ರಹಿಸಿ ವಾಸ್ತವತೆಯನ್ನು ಆಧರಿಸಿ ಅಡಿಗರು ಸಾಹಿತ್ಯವನ್ನು ರಚಿಸಿದ್ದಾರೆ ಎಂದರು.

ತಮ್ಮ ಸಾಹಿತ್ಯ ವಿಮರ್ಶೆ ಮೂಲಕ ಹೊಸ ರೂಪದ ಸಾಹಿತ್ಯವನ್ನು ರಚಿಸಿ ಜನರನ್ನು ಜಾಗೃತಗೊಳಿಸುವ ಪ್ರಯತ್ನವನ್ನು ಅಡಿಗರು ಮಾಡಿದ್ದರು. ಆದುದರಿಂದಲೇ ಇಂದಿಗೂ ಅವರ ಸಾಹಿತ್ಯ ಅತ್ಯಂತ ಪ್ರಸ್ತುತವಾಗಿದೆ ಎಂದು ಶರಣಪ್ಪ ಗಬ್ಬೂರು ಇದೇ ವೇಎ ಪ್ರತಿಪಾದಿಸಿದರು.

ಕವಿಯಾಗಲು ಬಯಸುವಂತಹವರು ಮೊದಲು ತಮ್ಮ ಸುತ್ತಲಿನ ಪರಿಸರವನ್ನು ಪ್ರೀತಿಸಬೇಕು. ಅದನ್ನು ಕುರಿತು ಸಾಹಿತ್ಯವನ್ನು ರಚಿಸುವಂತಾಗಬೇಕು. ಅದರ ಹಿನ್ನೆಲೆಯಲ್ಲಿ ನೋಡುವುದಾದರೆ ಅಡಿಗರು ತಮ್ಮ ಸಾಹಿತ್ಯದಲ್ಲಿ ಹೆಚ್ಚಾಗಿ ತಮ್ಮ ಸುತ್ತಲಿನ ಪರಿಸರದ ಕುರಿತೆ ಬರೆದಿದ್ದಾರೆ. ಅವರ ಸಾಹಿತ್ಯವನ್ನು ನೋಡಿದರೆ ಅವರಿಗೆ ಪರಿಸರದ ಮೇಲಿನ ಕಾಳಜಿ ಎಷ್ಟಿತ್ತು ಎಂಬುದು ಅರ್ಥವಾಗುತ್ತದೆ ಎಂದರು.

ಅಡಿಗರು ಹೆಚ್ಚಾಗಿ ಯುವಜನರನ್ನು ವೈಯುಕ್ತಿಕ ಕ್ರಾಂತಿಯತ್ತ ತರುವ ಒಲವು ಹೊಂದಿದ್ದರು. ಅದಕ್ಕಾಗಿ ಅವರು ಸಾಹಿತ್ಯವನ್ನು ರಚಿಸಿ ಯುವಜನರನ್ನು ಪ್ರೋತ್ಸಾ ಹಿಸುತ್ತಿದ್ದರು. ಸಂದರ್ಭಕ್ಕೆ ತಕ್ಕಂತೆ ಸಾಹಿತ್ಯವನ್ನು ರಚಿಸುವುದ ಮೂಲಕ ಹೊಸ ವಿಚಾರಗಳನ್ನು ಯುವಜನರಿಗೆ ನೀಡುತ್ತಿದ್ದವರಲ್ಲಿ ಮೊದಲಿಗರಾಗಿದ್ದರು ಎಂದು ಅವರು ಬಣ್ಣಿಸಿದರು.

ಇತ್ತೀಚಿನ ದಿನಗಳಲ್ಲಿ ಜನರಿಗೆ ಜಾಗೃತಿ ಮೂಡಿಸಬೇಕಾದ ಯುವಕರೇ ಇಂದು ದಾರಿ ತಪ್ಪುತ್ತಿದ್ದಾರೆ. ಆದುದರಿಂದ ಇವತ್ತಿನ ಯುವಜನರಿಗೆ ಅಗತ್ಯವಾದ ಸಾಹಿತ್ಯವನ್ನು ಯುವ ಕವಿಗಳು ನೀಡಬೇಕು ಮತ್ತು ಅದನ್ನು ಓದುವಂತೆ ಯುವಜನರಲ್ಲಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ನಮ್ಮ ಅನುಭವಗಳೊಂದಿಗೆ ಸಮಾಜವನ್ನು ನೋಡಬೇಕು. ಯಾರೆ ಆದರೂ ಬೆಳೆಯಲು ಅವರಿಗೆ ಇತರರಿಂದ ಪ್ರೇರಣೆ ಮತ್ತು ಸ್ಫೂರ್ತಿ ಅಗತ್ಯ. ಆದುದರಿಂದ ಸಾಹಿತ್ಯವನ್ನು ರಚಿಸುವಂತಹ ಯುವ ಕವಿಗಳಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X