Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ದ.ಕ.: ಮರಳುದಂಧೆಗೆ ಬಿದ್ದಿಲ್ಲ ಕಡಿವಾಣ

ದ.ಕ.: ಮರಳುದಂಧೆಗೆ ಬಿದ್ದಿಲ್ಲ ಕಡಿವಾಣ

ಶುಕೂರ್ ಮಲ್ಪೆಶುಕೂರ್ ಮಲ್ಪೆ20 March 2016 11:39 PM IST
share
ದ.ಕ.: ಮರಳುದಂಧೆಗೆ ಬಿದ್ದಿಲ್ಲ ಕಡಿವಾಣ

ಅಧಿಕಾರಿಗಳ ನಿರ್ಲಕ್ಷವೇ ಇದಕ್ಕೆ ಕಾರಣ: ಸಾರ್ವಜನಿಕರ ಆರೋಪ

ಮಂಗಳೂರು, ಮಾ.20: ಅಕ್ರಮ ಮರಳು ಗಾರಿಕೆಗೆ ಜಿಲ್ಲಾಡಳಿತ ಕಡಿ ವಾಣ ಹಾಕಿದ್ದರೂ ಜಿಲ್ಲೆಯ ಕೆಲವು ಭಾಗ ಗಳಲ್ಲಿ ಈ ದಂಧೆ ನಿರಾತಂಕವಾಗಿ ತಡೆ ಯುತ್ತಿದೆ. ಜಿಲ್ಲೆಯ ಅರ್ಕುಳ, ಅಡ್ಯಾ್ ಮತ್ತು ಹರೇಕಳ ಬೈತಾರ್ ವ್ಯಾಪ್ತಿಯ ಪ್ರದೇಶಗಳ ನೇತ್ರಾವತಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ಸಾಗಿದೆ.

ಹರೇಕಳದ ಬೈತಾರ್‌ನ ನೇತ್ರಾವತಿ ಹೊಳೆಯಲ್ಲಿ ಸಂಜೆಯಾಗುತ್ತಿದ್ದಂತೆ ಸುಮಾರು 100ಕ್ಕೂ ಅಧಿಕ ದೋಣಿ ಗಳು ನದಿಗೆ ಇಳಿಯಲು ಆರಂಭಿಸು ತ್ತಿವೆ. ಈ ದೋಣಿಗಳು ರಾತ್ರಿಯಿಂದ ಬೆಳಗ್ಗಿನ ಜಾವದವರೆಗೆ ನದಿಯಲ್ಲಿ ಮರಳುಗಾರಿಕೆ ನಡೆಸಿ, ಇಲ್ಲಿಂದ ಸಂಗ್ರ ಹಿಸಲಾದ ಮರಳನ್ನು ಟಿಪ್ಪರ್ ಮೂಲಕ ಬಾವಲಿಗುರಿ, ನಡುಪದವು, ಮುಡಿು ಮತ್ತು ಕೆದಂಬಾಡಿಗಳಿಗೆ ಕೊಂಡೊಯ್ದು ರಾಶಿ ಹಾಕಲಾಗುತ್ತವೆ.

ಮಾರನೆಯ ದಿನ ರಾತ್ರಿ ಹೊತ್ತಿನಲ್ಲಿ ಈ ಪ್ರದೇಶಗಳಲ್ಲಿ ಬೃಹತ್ ಗಾತ್ರದ ಟ್ರಕ್‌ಗಳು ಮರಳು ತುಂಬಿಸಲು ಸಿದ್ಧವಾಗಿ ನಿಂತಿರುತ್ತವೆ. ಈ ಟ್ರಕ್‌ಗಳ ಮೂಲಕ ಮರಳು ತುಂಬಿಸಿ ನಿರಾತಂಕವಾಗಿ ಕೇರಳಕ್ಕೆ ಸಾಗಾಟ ಮಾಡಲಾಗುತ್ತದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಹಲವು ತಿಂಗಳುಗಳಿಂದ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಬಗ್ಗೆ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ದಾಳಿ ನಡೆಸಿ ಅಕ್ರಮ ಮರಳನ್ನು ವಶಕ್ಕೆ ಪಡೆಯುತ್ತಿಲ್ಲ. ಮಾ.18ರಂದು ಸ್ಥಳೀಯರೊಬ್ಬರು ನೀಡಿದ್ದ ಮಾಹಿತಿಯ ಆಧಾರದ ಮೇಲೆ ಗಣಿ ಇಲಾಖೆಯ ಅಧಿಕಾರಿಯೊಬ್ಬರು ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರೂ ಸಂಬಂಧಪ ಟ್ಟವರ ಮೇಲೆ ಕ್ರಮಕೈಗೊಳ್ಳದೆ ವಾಪಸಾಗಿದ್ದಾರೆ. ಅಧಿಕಾರಿಗಳ ಬೆಂಬಲದಿಂದಲೇ ಇಂತಹ ಮರಳು ಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ ಎನ್ನುವುದು ಸ್ಥಳೀಯರ ಆರೋಪ.

ಅರ್ಕುಳ ಮತ್ತು ಅಡ್ಯಾರ್‌ಗಳಲ್ಲೂ ಅಕ್ರಮ ಮರಳು ದಂಧೆ ನಿರಾತಂಕವಾಗಿ ನಡೆಯುತ್ತಿದೆ. ಆದರೆ ಈ ಎರಡೂ ಪ್ರದೇಶಗಳಿಂದ ಹೆಚ್ಚಾಗಿ ಬೆಂಗಳೂರಿನ ಕಡೆಗೆ ಮರಳು ಸಾಗಾಟವಾಗುತ್ತದೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಗುತ್ತಿಗೆದಾರರು ಮರಳು ಖರೀದಿಗೆ ಬಂದರೆ ದಂಧೆಕೋರರು ಕೊಡುವುದಿಲ್ಲ. ಬೆಂಗಳೂರು ಮತ್ತು ಕೇರಳಕ್ಕೆ ಮಾರಾಟ ಮಾಡಿದರೆ ಹೆಚ್ಚಿನ ದರ ಸಿಗುತ್ತದೆ ಎಂಬುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಒಂದು ಟಿಪ್ಪರ್ ಲೋಡ್‌ಗೆ 10ರಿಂದ 12 ಸಾವಿರ ರೂ.ವರೆಗೆ ದರ ನೀಡುತ್ತೇವೆ ಎಂದರೂ ಸ್ಥಳೀಯರಿಗೆ ಮರಳು ಪೂರೈಸುವುದಿಲ್ಲ ಎಂಬುದು ಸ್ಥಳೀಯರ ಆರೋಪ.

share
ಶುಕೂರ್ ಮಲ್ಪೆ
ಶುಕೂರ್ ಮಲ್ಪೆ
Next Story
X