Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾ-ನೇಪಾಳ ರೈಲು ಮಾರ್ಗ ಉಭಯ ಪ್ರಧಾನಿಗಳ...

ಚೀನಾ-ನೇಪಾಳ ರೈಲು ಮಾರ್ಗ ಉಭಯ ಪ್ರಧಾನಿಗಳ ನಡುವೆ ಒಪ್ಪಂದ

ಸರಕಿಗಾಗಿ ಭಾರತವನ್ನೇ ಸಂಪೂರ್ಣ ಅವಲಂಬಿಸುವುದನ್ನು ನಿವಾರಿಸಿಕೊಳ್ಳಲು ನೇಪಾಳ ಕ್ರಮ

ವಾರ್ತಾಭಾರತಿವಾರ್ತಾಭಾರತಿ21 March 2016 7:21 PM IST
share
ಚೀನಾ-ನೇಪಾಳ ರೈಲು ಮಾರ್ಗ ಉಭಯ ಪ್ರಧಾನಿಗಳ ನಡುವೆ ಒಪ್ಪಂದ

ಬೀಜಿಂಗ್, ಮಾ. 21: ಚೀನಾ ಮತ್ತು ನೇಪಾಳಗಳನ್ನು ಟಿಬೆಟ್‌ನ ಮೂಲಕ ಸಂಪರ್ಕಿಸುವ ರೈಲು ಮಾರ್ಗವೊಂದನ್ನು ನಿರ್ಮಿಸಬೇಕೆನ್ನುವ ನೇಪಾಳದ ಪ್ರಧಾನಿ ಕೆ.ಪಿ. ಒಲಿ ಅವರ ಮನವಿಗೆ ಚೀನಾ ಸೋಮವಾರ ಒಪ್ಪಿಗೆ ನೀಡಿದೆ.

ಸುತ್ತಲೂ ಭೂಮಿಯಿಂದ ಆವರಿಸಲ್ಪಟ್ಟಿರುವ ನೇಪಾಳವು ಸಂಪೂರ್ಣವಾಗಿ ಭಾರತವನ್ನು ಅವಲಂಬಿಸುವುದನ್ನು ತಪ್ಪಿಸುವುದಕ್ಕಾಗಿ ಆ ದೇಶದ ಪ್ರಧಾನಿ ಈ ಕ್ರಮವನ್ನು ತೆಗೆದುಕೊಂಡಿದ್ದಾರೆ.

ಅದೇ ವೇಳೆ, 10 ಒಪ್ಪಂದಗಳಿಗೆ ಸಹಿ ಹಾಕುವ ಮೂಲಕ ನೇಪಾಳ ಮತ್ತು ಚೀನಾಗಳು ತಮ್ಮ ನಡುವಿನ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಸಿಕೊಂಡಿವೆ.
ಏಳು ದಿನಗಳ ಭೇಟಿಗಾಗಿ ರವಿವಾರ ಚೀನಾಕ್ಕೆ ಆಗಮಿಸಿದ ಒಲಿ ಅವರಿಗೆ ಕೆಂಪು ಹಾಸಿನ ಸ್ವಾಗತ ನೀಡಲಾಯಿತು. ಗ್ರೇಟ್ ಹಾಲ್ ಆಫ್ ದ ಪೀಪಲ್‌ನಲ್ಲಿ ಚೀನಾ ಪ್ರಧಾನಿ ಲಿ ಕೆಕಿಯಂಗ್ ನೇಪಾಳ ಪ್ರಧಾನಿಯನ್ನು ಸ್ವಾಗತಿಸಿದರು. ಅವರು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ರನ್ನೂ ಭೇಟಿಯಾದರು.

ಇತ್ತೀಚೆಗೆ ಪ್ರತಿಭಟನಾನಿರತ ಭಾರತ ಮೂಲದ ಮದೇಸಿ ಜನಾಂಗೀಯರು ಭಾರತದೊಂದಿಗೆ ನೇಪಾಳ ಹೊಂದಿರುವ ಗಡಿದಾಟನ್ನು ಮುಚ್ಚಿದ್ದರು. ಇದರಿಂದ ಆರು ತಿಂಗಳ ಕಾಲ ನೇಪಾಳಕ್ಕೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗಿ ಆ ದೇಶ ಭಾರೀ ಸಮಸ್ಯೆಯನ್ನು ಎದುರಿಸಿತ್ತು. ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿತ್ತು.

ಇಂಥದೇ ಪರಿಸ್ಥಿತಿ ಮರುಕಳಿಸುವುದನ್ನು ತಪ್ಪಿಸುವ ಉದ್ದೇಶದಿಂದ, ಚೀನಾದಿಂದ ಬರುವ ಸರಕು ಪೂರೈಕೆ ಮಾರ್ಗಗಳನ್ನು ಹೆಚ್ಚಿಸುವ ನಿರೀಕ್ಷೆಗಳನ್ನು ಇಟ್ಟುಕೊಂಡು ನೇಪಾಳ ಪ್ರಧಾನಿ ಚೀನಾ ಪ್ರವಾಸ ಕೈಗೊಂಡಿದ್ದರು.

ಮಾತುಕತೆಯ ವೇಳೆ, ಉಭಯ ನಾಯಕರು ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಸಮಗ್ರವಾಗಿ ಮರುಪರಿಶೀಲನೆ ನಡೆಸಿದರು ಹಾಗೂ ಉಭಯ ದೇಶಗಳ ನಡುವೆ ನಿಧಾನವಾಗಿ ಬಲಗೊಳ್ಳುತ್ತಿರುವ ಸಂಬಂಧದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಮಾತುಕತೆಯ ವೇಳೆ, ಟಿಬೆಟ್‌ವರೆಗಿರುವ ಚೀನಾದ ರೈಲು ಮಾರ್ಗವನ್ನು ನೇಪಾಳದವರೆಗೆ ವಿಸ್ತರಿಸುವ ಪ್ರಸ್ತಾಪವನ್ನು ನೇಪಾಳದ ಪ್ರಧಾನಿ ಮಂಡಿಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೀನಾ ವಿದೇಶ ಸಚಿವಾಲಯದ ಉಪ ಮುಖ್ಯಸ್ಥ ಹೂ ಯಂಕಿ, ರೈಲು ಹಳಿಯನ್ನು ಟಿಬೆಟ್‌ನ ಶಿಗಟ್ಸೆ ನಗರದಿಂದ ನೇಪಾಳದ ಗಡಿಯಲ್ಲಿರುವ ಗಿರೊಂಗ್‌ವರೆಗೆ ವಿಸ್ತರಿಸುವ ಯೋಜನೆಯನ್ನು ಚೀನಾ ಹೊಂದಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X