Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜ್ಯುವೆಲ್ಲರಿ ವ್ಯಾಪಾರಿಗಳ ಮುಷ್ಕರ 20ನೆ...

ಜ್ಯುವೆಲ್ಲರಿ ವ್ಯಾಪಾರಿಗಳ ಮುಷ್ಕರ 20ನೆ ದಿನಕ್ಕೆ

ವಾರ್ತಾಭಾರತಿವಾರ್ತಾಭಾರತಿ21 March 2016 11:35 PM IST
share

ಹೊಸದಿಲ್ಲಿ,ಮಾ.21: ಬೆಳ್ಳಿಯೇತರ ಆಭರಣಗಳಿಗೆ ಶೇ.1ರಷ್ಟು ಅಬಕಾರಿ ಸುಂಕವನ್ನು ವಿಧಿಸುವ ಪ್ರಸ್ತಾಪವನ್ನು ಕೇಂದ್ರ ಸರಕಾರ ಕೈಬಿಡಬೇಕೆಂದು ಆಗ್ರಹಿಸಿ ಆಭರಣ ಹಾಗೂ ಚಿನ್ನದ ವ್ಯಾಪಾರಿಗಳ ಒಂದು ಬಣವು ನಡೆಸುತ್ತಿರುವ ಮುಷ್ಕರವು ಸೋಮವಾರ 20ನೆ ದಿನವನ್ನು ಪ್ರವೇಶಿಸಿದೆ. ಆದಾಗ್ಯೂ ಕೆಲವು ಪ್ರಮುಖ ಜ್ಯುವೆಲ್ಲರಿ ವ್ಯಾಪಾರಿಗಳ ಸಂಘಟನೆಗಳು ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ಭೇಟಿಯಾದ ಬಳಿಕ ಮುಷ್ಕರವನ್ನು ಕೈಬಿಡಲು ನಿರ್ಧರಿಸಿದೆ.

 
 ಅಬಕಾರಿ ಅಧಿಕಾರಿಗಳು ತಮಗೆ ಕಿರುಕುಳ ನೀಡುವುದಿಲ್ಲವೆಂಬ ಬಗ್ಗೆ ಕೇಂದ್ರ ಸರಕಾರ ಭರವಸೆ ನೀಡಿರುವ ಹೊರತಾಗಿಯೂ ಹೊಸದಿಲ್ಲಿಯ ಹಲವು ಪ್ರಮುಖ ಜ್ಯುವೆಲ್ಲರಿ ಮಳಿಗೆಗಳು ಹಾಗೂ ಅಂಗಡಿಗಳು ಇಂದು ಕೂಡಾ ಮುಚ್ಚಿದ್ದವು. ಈ ಮಧ್ಯೆ ದೇಶದ ವಾಣಿಜ್ಯ ರಾಜಧಾನಿ ಮುಂಬೈ, ರಾಜಸ್ಥಾನದ ಜೈಪುರ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಜ್ಯುವೆಲ್ಲರಿ ವ್ಯಾಪಾರಿಗಳು ಮುಷ್ಕರವನ್ನು ಮುಂದುವರಿಸಿರುವ ಬಗ್ಗೆ ವರದಿಗಳು ಬಂದಿವೆ.
 ಅಖಿಲ ಭಾರತ ಸರಾಫ ಒಕ್ಕೂಟದ ಉಪಾಧ್ಯಕ್ಷ ಸುರೀಂದರ್‌ಕುಮಾರ್ ಜೈನ್ ಇಂದು ಹೇಳಿಕೆಯೊಂದನ್ನು ನೀಡಿ, ಕೇಂದ್ರ ಸರಕಾರವು ಪ್ರಸ್ತಾಪಿತ ಅಬಕಾರಿ ಸುಂಕ ಕೈಬಿಡುವವರೆಗೂ ಹೊಸದಿಲ್ಲಿಯಲ್ಲಿ ಚಿನ್ನಾಭರಣ ವ್ಯಾಪಾರಿಗಳು ಮುಷ್ಕರವನ್ನು ಮುಂದುವರಿಸಲಿದ್ದಾರೆಂದು ಘೋಷಿಸಿದ್ದಾರೆ.
ಹೊಸದಿಲ್ಲಿಯ ಚಾಂದಿನಿ ಚೌಕ್‌ನಲ್ಲಿ ಜ್ಯುವೆಲ್ಲರಿ ವ್ಯಾಪಾರಿಗಳು, ಆಭರಣಗಳ ಕುಶಲಕರ್ಮಿಗಳು ಹಾಗೂ ಚಿನ್ನದ ವ್ಯಾಪಾರಿಗಳು ಧರಣಿ ನಡೆಸುತ್ತಿದ್ದಾರೆಂದು ಅವರು ತಿಳಿಸಿದರು.

 ಈ ಮಧ್ಯೆ ಅಖಿಲ ಭಾರತ ರತ್ನಗಳು ಹಾಗೂ ಆಭರಣ ವ್ಯಾಪಾರಿಗಳ ಒಕ್ಕೂಟ (ಜಿಜೆಎಫ್), ಭಾರತೀಯ ಚಿನ್ನ-ಬೆಳ್ಳಿ ಹಾಗೂ ಜ್ಯುವೆಲ್ಲರಿ ವ್ಯಾಪಾರಿಗಳ ಸಂಘ (ಐಬಿಬಿಜೆ) ಹಾಗೂ ರತ್ನಗಳ ಜ್ಯುವೆಲ್ಲರಿ ರಫ್ತು ಉತ್ತೇಜನಾ ಮಂಡಳಿ, ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿದುಬಂದಿದೆ.ಶನಿವಾರ ಈ ಸಂಘಟನೆಗಳ ಪ್ರತಿನಿಧಿಗಳು ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X