Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಾಖಂಡ ಕಾಂಗ್ರೆಸ್ ಬಂಡಾಯ:

ಉತ್ತರಾಖಂಡ ಕಾಂಗ್ರೆಸ್ ಬಂಡಾಯ:

ಪಕ್ಷದಿಂದ ಸಾಕೇತ್ ಬಹುಗುಣರ ಉಚ್ಚಾಟನೆ

ವಾರ್ತಾಭಾರತಿವಾರ್ತಾಭಾರತಿ21 March 2016 11:54 PM IST
share

ಹೊಸದಿಲ್ಲಿ, ಮಾ.21: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹಾಗೂ ಬಂಡಾಯ ಕಾಂಗ್ರೆಸ್ ಶಾಸಕ ವಿಜಯ್ ಬಹುಗುಣರ ಪುತ್ರನನ್ನು ಕಾಂಗ್ರೆಸ್ ಪಕ್ಷವು ಉಚ್ಚಾಟಿಸಿದೆ. ಇದೇ ವೇಳೆ, ದಿಲ್ಲಿಯಲ್ಲಿ ವಸತಿ ಹೂಡಿದ್ದ 9 ಮಂದಿ ಬಂಡುಕೋರ ಕಾಂಗ್ರೆಸ್ ಶಾಸಕರು ಐಶಾರಾಮಿ ಹೊಟೇಲನ್ನು ತೊರೆದು ಭೂಗತರಾಗಿದ್ದಾರೆ.
ಇಂದು ಸಂಜೆ 6:45ರ ವೇಳೆ ಉತ್ತರಾಖಂಡದ 28 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್‌ನ ಬಂಡುಕೋರ ಶಾಸಕರ ಜೊತೆ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರನ್ನು ಭೇಟಿ ಮಾಡಲಿದ್ದಾರೆ. ಅಪರಾಹ್ನ ದಿಲ್ಲಿಯಲ್ಲಿರುವ ಬಹುಗುಣರ ನಿವಾಸದಲ್ಲಿ ಬಂಡುಕೋರರು ಸಭೆ ನಡೆಸುವರೆಂಬ ಮಾತು ಕೇಳಿ ಬರುತ್ತಿದೆ. ಆದರೆ, ಇದುವರೆಗೆ ಸಭೆ ನಡೆದಿಲ್ಲ.
ಇದೇ ವೇಳೆ, ಉತ್ತರಾಖಂಡ ಕಾಂಗ್ರೆಸ್, ವಿಜಯ್ ಬಹುಗುಣರ ಪುತ್ರ ಸಾಕೇತ್‌ರನ್ನು ಪಕ್ಷದಿಂದ 6 ವರ್ಷಗಳ ಕಾಲಕ್ಕೆ ಉಚ್ಚಾಟಿಸಿದೆ. ಬಂಡಾಯದ ಪಿತೂರಿ ಹೆಣೆದವರು ಸಾಕೇತ್ ಬಹುಗುಣ ಎಂಬುದು ಕಾಂಗ್ರೆಸ್‌ನ ಆರೋಪವಾಗಿದೆ.
ತನಗೆ ಬಂಡುಕೋರ ಶಾಸಕರ ಬೆಂಬಲವಿದ್ದು, ಬಹುಮತವಿರುವುದರಿಂದ ಸರಕಾರ ರಚಿಸಲು ಅವಕಾಶ ನೀಡುವಂತೆ ಬಿಜೆಪಿ ಅಹವಾಲು ಮಂಡಿಸಿದೆ. ಮುಖ್ಯಮಂತ್ರಿ ಹರೀಶ್ ರಾವತ್ ವಿಧಾನಸಭೆಯಲ್ಲಿ ನಾಳೆಯೇ ಬಹುಮತ ಸಾಬೀತುಪಡಿಸಬೇಕು. ನಿಗದಿಯಾಗಿರುವಂತೆ ಸೋಮವಾರವಲ್ಲವೆಂದು ಅದು ಒತ್ತಾಯಿಸಿದೆ.

ಕಳೆದ ವಾರ ವಿಧಾನಸಭೆಯಲ್ಲಿ ಹಣಕಾಸು ಮಸೂದೆ ಅಥವಾ ರಾಜ್ಯ ಬಜೆಟನ್ನು ಮತಕ್ಕೆ ಹಾಕಿದಾಗ ರಾವತ್ ಸರಕಾರವು ಅಲ್ಪಮತದ್ದಾಗಿತ್ತು. ಆದುದರಿಂದ ಸರಕಾರ ಕೆಳಗಿಳಿಯಬೇಕು ಅಥವಾ ಅದನ್ನು ಉಚ್ಚಾಟಿಸಬೇಕೆಂದು ಬಿಜೆಪಿ ಹಾಗೂ ಬಂಡುಕೋರ ಶಾಸಕರು ರಾಷ್ಟ್ರಪತಿಗೆ ಹೇಳಲಿದ್ದಾರೆ. ಹಣಕಾಸು ಮಸೂದೆಯೊಂದು ವಿಫಲವಾದರೆ, ಸರಕಾರವೊಂದು ಉರುಳುತ್ತದೆ.
ಹಣಕಾಸು ಮಸೂದೆಯನ್ನು ಮತಕ್ಕೆ ಹಾಕಬೇಕು ಹಾಗೂ ಭೌತಿಕವಾಗಿ ಮತಗಳ ಎಣಿಕೆ ನಡೆಸಬೇಕೆಂದು ಕಾಂಗ್ರೆಸ್ ಬಂಡುಕೋರರ ಬೆಂಬಲದೊಂದಿಗೆ ಬಿಜೆಪಿ ಆಗ್ರಹಿಸಿತ್ತು. ಆದರೆ, ವಿಧಾನಸಭಾಧ್ಯಕ್ಷರು ಅದಕ್ಕೆ ಅವಕಾಶ ನೀಡದೆ, ಧ್ವನಿಮತದಿಂದ ಮಸೂದೆ ಮಂಜೂರಾಗಿದೆಯೆಂದು ಘೋಷಿಸಿದ್ದರು.
9 ಮಂದಿ ಬಂಡುಕೋರರನ್ನು ಪಕ್ಷಾಂತರ ವಿರೋಧಿ ಕಾಯ್ದೆಯನ್ವಯ ಸದನದಿಂದ ಅಮಾನ್ಯಗೊಳಿಸಬೇಕೆಂದು ಕಾಂಗ್ರೆಸ್ ಹೇಳುತ್ತಿದೆ. ಪ್ರತ್ಯೇಕ ಗುಂಪಾಗಿ ಮಾನ್ಯ ಮಾಡಬೇಕಾದಲ್ಲಿ ಒಂದು ಪಕ್ಷದ ಮೂರನೆ ಎರಡರಷ್ಟು ಸದಸ್ಯರು ಈ ಪ್ರಕರಣದಲ್ಲಿ 24 ಮಂದಿ ಕಾಂಗ್ರೆಸ್ ಸದಸ್ಯರು ಪಕ್ಷದಿಂದ ಹೊರಗೆ ಬರಬೇಕಾಗುತ್ತದೆ.
70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ 36. ಪಕ್ಷದ 9 ಮಂದಿ ಶಾಸಕರು ಬಂಡಾಯವೆದ್ದಿರುವುದರಿಂದು ಸರಕಾರ ಅಲ್ಪ ಮತಕ್ಕಿಳಿದಿದೆ. ಅದಕ್ಕೆ ಪಿಡಿಎಫ್‌ನ 6 ಮಂದಿ ಶಾಸಕರ ಬೆಂಬಲವಿದೆ.
ಉತ್ತರಾಖಂಡ ವಿಧಾನಸಭಾಧ್ಯಕ್ಷರು ಕಾಂಗ್ರೆಸ್ ಬಂಡುಕೋರ ಶಾಸಕರಿಗೆ ಶೋಕಾಸ್ ನೋಟಿಸ್‌ಗಳನ್ನು ಹೊರಡಿಸಿದ್ದರು. ಆದರೆ, ಅವರು ವಾರಾಂತ್ಯದಲ್ಲಿ ಗುರ್ಗಾಂವ್‌ನ ಲೀಲಾ ಹೊಟೇಲ್‌ನಲ್ಲಿ ತಂಗಿದ್ದುದರಿಂದ, ಡೆಹ್ರಾಡೂನ್‌ನ ಅವರ ಮನೆಗಳ ಹೊರಗೆ ನೋಟಿಸ್‌ಗಳನ್ನು ಅಂಟಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X