Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಿದ...

ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಿದ ಪೊಲೀಸರು, ಹಲವರು ಆಸ್ಪತ್ರೆಗೆ ದಾಖಲು

ಹೈದರಾಬಾದ್ ವಿವಿ ವಿವಾದ: ಪೊಲೀಸ್ ಬಲದೊಂದಿಗೆ ವಿವಿ ಪ್ರವೇಶಿಸಿದ ಕುಲಪತಿ ಅಪ್ಪಾರಾವ್

ವಾರ್ತಾಭಾರತಿವಾರ್ತಾಭಾರತಿ22 March 2016 10:17 PM IST
share

ಹೈದರಾಬಾದ್,ಮಾ.22: ಪಿಎಚ್‌ಡಿ ವಿದ್ಯಾರ್ಥಿ ರೋಹಿತ ವೇಮುಲಾರ ಆತ್ಮಹತ್ಯೆ ವಿರುದ್ಧ ಪ್ರತಿಭಟನೆಯು ಉತ್ತುಂಗದಲ್ಲಿದ್ದಾಗ ರಜೆಯ ಮೇಲೆ ತೆರಳಿದ್ದ ಹೈದರಾಬಾದ್ ಕೇಂದ್ರೀಯ ವಿವಿಯ ಕುಲಪತಿ ಪ್ರೊ.ಅಪ್ಪಾ ರಾವ್ ಪೊಡಿಲೆ ಅವರು ಭಾರೀ ಪೊಲೀಸ್ ಪಡೆಯ ಜೊತೆಗೆ ಮಂಗಳವಾರ ಕರ್ತವ್ಯಕ್ಕೆ ಮರಳಿ ಹಾಜರಾಗಿದ್ದಾರೆ.

ಈ ಸಂದರ್ಭದಲ್ಲಿ ಅವರ ವಿರುದ್ಧ ಪ್ರತಿಭಟನೆ ನಡೆಸಿದ ನೂರಾರು ವಿದ್ಯಾರ್ಥಿಗಳ ಮೇಲೆ ಪೊಲೀಸರು ಯದ್ವಾತದ್ವಾ ಲಾಠಿ ಬೀಸಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಸುಮಾರು 20 ಮಂದಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪ್ಪಾ ರಾವ್ ಮಂಗಳವಾರ ಬೆಳಿಗ್ಗೆ ಸುದ್ದಿಗೋಷ್ಠಿಯನ್ನು ಕರೆದಿದ್ದರು. ಆದರೆ ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ಅದನ್ನು ರದ್ದುಗೊಳಿಸಬೇಕಾಯಿತು.

ಕುಲಪತಿ ಮರಳಬಾರದುಎನ್ನುವುದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ನಾವು ರೋಹಿತ್ ವೇಮುಲಾರನ್ನು ಕಳೆದುಕೊಂಡಿದ್ದೇವೆ. ಅಪ್ಪಾ ರಾವ್ ತಪ್ಪಿತಸ್ಥರಲ್ಲೋರ್ವರಾಗಿದ್ದಾರೆ. ವೇಮುಲಾ ಆತ್ಮಹತ್ಯೆ ಮಾಡಿಕೊಂಡು ಎರಡು ತಿಂಗಳುಗಳೇ ಕಳೆದು ಹೋಗಿವೆ, ಆದರೆ ಈವರೆಗೂ ಯಾವುದೇ ಕ್ರಮವನ್ನು ಕೈಗೊಳ್ಳಲಾಗಿಲ್ಲ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಆದರೆ ಬುಧವಾರ ಪೊಲೀಸ್ ಪಡೆಯ ಬೆಂಬಲದ ಜೊತೆಗೆ ಅಪ್ಪಾರಾವ್ ಕರ್ತವ್ಯಕ್ಕೆ ಹಾಜರಾದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿಗಳ ಮಧ್ಯೆ ತೀವ್ರ ತಿಕ್ಕಾಟ ನಡೆಯಿತು. ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಅಪ್ಪಾರಾವ್ ಪರವಾಗಿ ನಿಂತು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಅಪ್ಪಾರಾವ್ ನಿವಾಸದ ಮೇಲೆ ಅವರೇ ದಾಳಿ ನಡೆಸಿ, ಅದನ್ನು ಅಮಾಯಕರ ತಲೆಗೆ ಕಟ್ಟಿದ್ದಾರೆ ಎಂದೂ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಬುಧವಾರ ಹೈದರಾಬಾದ್ ವಿವಿಗೆ ಜೆಎನ್‌ಯು ವಿದ್ಯಾರ್ಥಿ ಸಂಘದ ನಾಯಕ ಕನ್ಹಯ್ಯಾ ಅವರ ಪ್ರಸ್ತಾವಿತ ಭೇಟಿ ಕುರಿತ ಪ್ರಶ್ನೆಗೆ ಅಪ್ಪಾ ರಾವ್, ಸಭೆಗೆ ನಾನು ಅನುಮತಿಯನ್ನು ನೀಡಿಲ್ಲ. ಇಂತಹ ಅನುಮತಿಯನ್ನು ಕೋರಿ ಯಾರೂ ಪತ್ರವನ್ನೂ ಸಲ್ಲಿಸಿಲ್ಲ ಎಂದು ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X