Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ ಸರಕಾರದಿಂದ ಮಕ್ಕಳಿಗಿಂತ ...

ಮಹಾರಾಷ್ಟ್ರ ಸರಕಾರದಿಂದ ಮಕ್ಕಳಿಗಿಂತ ಜಾನುವಾರುಗಳಿಗೆ ಹೆಚ್ಚು ಅನುದಾನ: ಬೊಂಡೆ

ವಾರ್ತಾಭಾರತಿವಾರ್ತಾಭಾರತಿ22 March 2016 11:54 PM IST
share

ಮುಂಬೈ, ಮಾ.22: ಮಹಾರಾಷ್ಟ್ರ ಸರಕಾರವು ಅನಾಥಾಲಯಗಳು ಹಾಗೂ ಸರಕಾರಿ ಶಿಶು ಮಂದಿರಗಳಲ್ಲಿ ವಾಸಿಸುವ ಮಕ್ಕಳಿಗಾಗಿ ನೀಡುವುದಕ್ಕಿಂತ ಹೆಚ್ಚು ನಿಧಿಯನ್ನು ಮೇವು ಶಿಬಿರಗಳಲ್ಲಿರುವ ಜಾನುವಾರುಗಳ ಕಲ್ಯಾಣಕ್ಕಾಗಿ ಮಂಜೂರು ಮಾಡುತ್ತಿದೆಯೆಂದು ಬಿಜೆಪಿ ಶಾಸಕರೊಬ್ಬರು ಆರೋಪಿಸಿದ್ದಾರೆ.

ರಾಜ್ಯ ಸರಕಾರವು ಒಂದು ಜಾನುವಾರಿನ ಘೋಷಣೆಗಾಗಿ ಮೇವು ಶಿಬಿರಕ್ಕೆ ರೂ. 70 ನೀಡುತ್ತದೆ. ಆದರೆ, ಅನಾಥಾಲಯ ಹಾಗೂ ಸರಕಾರಿ ಶಿಶು ಮಂದಿರಗಳಲ್ಲಿರುವ ಮಕ್ಕಳ ಆಹಾರಕ್ಕಾಗಿ ದಿನಕ್ಕೆ ತಲಾ ಕೇವಲ ರೂ. 30 ಪಾವತಿಸುತ್ತಿದೆ. ಸರಕಾರವು ಮಕ್ಕಳ ಮನೆಗಳಿಗೆ ಅನುದಾನವನ್ನು ತಿಂಗಳಿಗೆ ಈಗಿರುವ ರೂ. 900ರಿಂದ ಕನಿಷ್ಠ ರೂ. 1,500ಕ್ಕೆ ಏರಿಸಬೇಕೆಂದು ಅಮರಾವತಿ ಜಿಲ್ಲೆಯ ಮೋರ್ಶಿ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಬೊಂಡೆ ಆಗ್ರಹಿಸಿದ್ದಾರೆ.
ಬರಗಾಲ ಪೀಡಿತ ಲಾತೂರು, ಉಸ್ಮಾನಾಬಾದ್ ಹಾಗೂ ಬೀಡ್ ಜಿಲ್ಲೆಗಳಲ್ಲಿ ಕಳೆದ ವರ್ಷ ಆಗಸ್ಟ್‌ನಿಂದ ಸುಮಾರು 255 ಮೇವು ಶಿಬಿರಗಳು ಕಾರ್ಯಾಚರಿಸುತ್ತಿವೆ. ಅವುಗಳಿಗೆ ರಾಜ್ಯದ ಬೊಕ್ಕಸದಿಂದ ಸುಮಾರು ರೂ. 60 ಕೋಟಿ ಖರ್ಚು ಮಾಡಲಾಗುತ್ತಿದೆ.
ರಾಜ್ಯದಲ್ಲಿ ಒಟ್ಟು 1,105 ಮಕ್ಕಳ ಮನೆಗಳಿದ್ದು, ಅವುಗಳಲ್ಲಿ 1,062ನ್ನು ವಿವಿಧ ನೋಂದಾಯಿತ ಸರಕಾರೇತರ ಸಂಘಟನೆಗೂ (ಎನ್‌ಜಿಒ) ನಡೆಸುತ್ತಿವೆ.
ಸರಕಾರವು ಪ್ರತಿ ಸಾಮಾನ್ಯ ಮಗುವಿಗೆ ತಿಂಗಳಿಗೆ ರೂ. 900ನ್ನು (ದಿನಕ್ಕೆ ರೂ.30) ಆಹಾರಕ್ಕಾಗಿ ನೀಡುತ್ತಿದ್ದರೆ, ವಿಶೇಷ ಮಕ್ಕಳಿಗೆ ತಿಂಗಳಿಗೆ ರೂ. 990(ದಿನಕ್ಕೆ ರೂ.33) ನೀಡುತ್ತಿದೆಯೆಂದು ಬೊಂಡೆ ಹೇಳಿದ್ದಾರೆ.
ಇಂತಹ ಮಕ್ಕಳನ್ನು ಪಾಲಿಸುತ್ತಿರುವ ಸರಕಾರೇತರ ಸಂಘಟನೆಗಳು ಮೂರು ವರ್ಷಗಳಿಂದ ಅನುದಾನ ಪಡೆದಿಲ್ಲವೆಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಮಕ್ಕಳ ಮನೆಗಳಿಗೆ ಬಾಕಿಯಿರುವ ಹಣ ಪಾವತಿಸಲು ತಮ್ಮ ಇಲಾಖೆ ರೂ. 156 ಕೋಟಿ ಕೇಳಿತ್ತು. ಆದರೆ, ಹಣಕಾಸು ಇಲಾಖೆ ಈ ವರೆಗೆ ಅದನ್ನು ಮಂಜೂರು ಮಾಡಿಲ್ಲವೆಂದು ಅವರು ಹೇಳಿದ್ದಾರೆ.
ಆದಾಗ್ಯೂ, ಎನ್‌ಜಿಒಗಳು ದತ್ತಿ ಆಯುಕ್ತರಲ್ಲಿ ನೋಂದಣಿಯಾಗಿರುವ ಕಾರಣ ಅದು ಸ್ವಂತ ನಿಧಿಯನ್ನು ಎತ್ತುವಳಿ ಮಾಡಬಹುದೆಂದು ನಿರೀಕ್ಷಿಸಲಾಗಿದೆ. ಅವುಗಳಿಗೆ ಸಮಾಜದಿಂದ ನಿಧಿ ಸಂಗ್ರಹಿಸುವ ಅಧಿಕಾರವಿದೆ. ಸರಕಾರದ ಸಹಾಯವು ಕೇವಲ ಈ ಸಾಮಾಜಿಕ ಉದ್ದೇಶಕ್ಕಾಗಿ ಬೆಂಬಲ ನೀಡಲಷ್ಟೇ ಇರುತ್ತದೆ. ಅವು ಸರಕಾರದ ಅನುದಾನವನ್ನು ಅವಲಂಬಿಸಬಾರದು. ವಾಸ್ತವವಾಗಿ ಮಕ್ಕಳಿಗೆ ಸೌಲಭ್ಯ ಕಲ್ಪಿಸಲು ನಿಧಿ ಎತ್ತುವಳಿಯು ಎನ್‌ಜಿಒಗಳ ಹೊಣೆಗಾರಿಕೆಯಾಗಿದೆಯೆಂದು ಹಣಕಾಸು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X