Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪಹರಣಕಾರ ಹಾಗು ಅಪಹೃತ ಒಬ್ಬನೇ !

ಅಪಹರಣಕಾರ ಹಾಗು ಅಪಹೃತ ಒಬ್ಬನೇ !

ಮದುವೆ ಖರ್ಚಿಗಾಗಿ ಅಪಹರಣ ನಾಟಕ ರೂಪಿಸಿ " ಮಾವನ ಮನೆ " ಸೇರಿದ

ವಾರ್ತಾಭಾರತಿವಾರ್ತಾಭಾರತಿ23 March 2016 1:45 PM IST
share
ಅಪಹರಣಕಾರ ಹಾಗು ಅಪಹೃತ ಒಬ್ಬನೇ !

ಹೊಸದಿಲ್ಲಿ, ಮಾ. 23 : ತಾನು ಅಪಹರಣ ಮಾಡಿದ ವ್ಯಕ್ತಿಯ ಮನೆಯವರ ಆರ್ಥಿಕ ಸಮಸ್ಯೆಗೆ ಮನಕರಗಿದ ಅಪಹರಣಕಾರರ ಬಗ್ಗೆ ನೀವು ಕೇಳಿದ್ದೀರಾ ? ಆದರೆ ಇಲ್ಲೊಬ್ಬ ಅಂತಹ ಮೃದು ಮನಸ್ಸಿನ ಅಪಹರಣಕಾರನ ಪ್ರಕರಣವಿದೆ. ಈತನ ಹೆಸರು ಮಹಿಪಾಲ್. ಆದರೆ ಈ ಪ್ರಕರಣದಲ್ಲಿ ಇನ್ನೂ ಒಂದು ವಿಶೇಷವಿದೆ. ಏನೆಂದರೆ, ಇಲ್ಲಿ ಅಪಹರಣಕಾರ ಹಾಗು ಅಪಹೃತ ಎರಡೂ ಈ ಮಹಿಪಾಲನೆ ! 

ತಾನು ಪ್ರೀತಿಸುತ್ತಿದ್ದವಳನ್ನು ಮದುವೆಯಾಗಲು ತನ್ನದೇ ಅಪಹರಣದ ನಾಟಕ ರೂಪಿಸಿ, ಕೊನೆಗೆ ತನ್ನ ತಂದೆಯ ಕಷ್ಟ ಅರಿತು, ಮದುವೆ ಹಾಗು ಹನಿಮೂನ್ ಖರ್ಚು ನೀಗಿಸಲು   ಬೇಡಿಕೆ ಮೊತ್ತ ಕಡಿಮೆ ಮಾಡಿ ಆ ಮೂಲಕ ಪೊಲೀಸರಿಗೆ ತಾನೇ ಸುಳಿವು ನೀಡಿ ಈಗ ಪೊಲೀಸ್  " ಮಾವನ ಮನೆ" ಸೇರಿದ ಕತೆಯಿದು. 

ಸೋಮವಾರ ಮುಂಜಾನೆ ಬ್ಯಾಂಕ್ ಉದ್ಯೋಗಿಯಾಗಿರುವ  ತನ್ನ ತಂದೆಗೆ ಕಾಲ್ ಮಾಡಿದ ಮಹಿಪಾಲ್, ನನ್ನನ್ನು ನಾಲ್ಕು ಮಂದಿ ಅಪಹರಿಸಿ ಕರೆದುಕೊಂಡು ಹೋಗುತ್ತಿದ್ದಾರೆ. ನೀವು ಒಂದು ಲಕ್ಷ ರೂಪಾಯಿ ಕೊಟ್ಟು ಬಿಡಿಸದಿದ್ದರೆ ಅವರು ನನ್ನನ್ನು ಕೊಂದು ಹಾಕುತ್ತಾರೆ . ಈಗಾಗಲೇ ಅವರು ನನ್ನ ಬ್ಯಾಂಕ್ ಅಕೌನ್ಟ್ ನಿಂದ ನಲವತ್ತು ಸಾವಿರ ರೂಪಾಯಿ ತೆಗೆದಿದ್ದಾರೆ ಎಂದು ಹೇಳಿದ. 

ಆದರೆ ಪೊಲೀಸರಿಗೆ ಇಡೀ ಪ್ರಕರಣ ವಿಚಿತ್ರವಾಗಿ ಕಂಡಿತು. ಅಪಹರಣ ಮಾಡಿದವರು ಕೇವಲ ಒಂದು ಲಕ್ಷ ರೂಪಾಯಿ ಕೇಳಿದ್ದು ಇದಕ್ಕೆ ಕಾರಣ. ಮಹಿಪಾಲನ ಬ್ಯಾಂಕ್ ಖಾತೆ ಪರಿಶೀಲಿಸಿದಾಗ ಆತನ ಖಾತೆಯಲ್ಲಿ ಹಲವು ಸಮಯದಿಂದ ಹಣವೇ ಇಲ್ಲದ್ದು ಕಂಡು ಬಂತು. 

ತಕ್ಷಣ ಪ್ರಕರಣ ದಾಖಲಿಸಿದ ಪೊಲೀಸರು ಆತನ ಮೊಬೈಲ್ ನಂಬರ್ ಜಾಡು ಹಿಡಿದು ಹೋದರು. ಆಗ ಆಟ ದಕ್ಷಿಣ ದಿಲ್ಲಿಯ ಶ್ರಿನಿವಾಸಪುರಿ ಎಂಬಲ್ಲಿ ಇದ್ದಾನೆ ಎಂದು ಗೊತ್ತಾಯಿತು. ಆತನ ಪ್ರೇಯಸಿಯ ನಂಬರ್ ಟ್ರ್ಯಾಕ್ ಮಾಡಿದಾಗ ಇಬ್ಬರು ಸತತ ಸಂಪರ್ಕದಲ್ಲಿದ್ದಾರೆ ಎಂದು ತಿಳಿಯಿತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ದಾಳಿ ಮಾಡಿ ಮಹಿಪಾಲನನ್ನು ವಶಕ್ಕೆ ತಗೆದುಕೊಂಡು ಬಂಧಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X