Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳ್ನಾಡಿನಲ್ಲಿ ಎಡಪಕ್ಷಗಳುಮತ್ತು...

ತಮಿಳ್ನಾಡಿನಲ್ಲಿ ಎಡಪಕ್ಷಗಳುಮತ್ತು ವಿಜಯ್‌ಕಾಂತ್‌ರ ಡಿಎಂಡಿಕೆ ಮೈತ್ರಿ!

ವಾರ್ತಾಭಾರತಿವಾರ್ತಾಭಾರತಿ23 March 2016 4:52 PM IST
share
ತಮಿಳ್ನಾಡಿನಲ್ಲಿ ಎಡಪಕ್ಷಗಳುಮತ್ತು ವಿಜಯ್‌ಕಾಂತ್‌ರ ಡಿಎಂಡಿಕೆ ಮೈತ್ರಿ!

ಚೆನ್ನೈ, ಮಾಚ್.23: ಮೈತ್ರಿಗೆ ಕರುಣಾನಿಧಿ ನೀಡಿದ ಆಹ್ವಾನವನ್ನು ತಿರಸ್ಕರಿಸಿದ ವಿಜಯ್‌ಕಾಂತ್‌ರ ಪಕ್ಷ ಡಿಎಂಡಿಕೆ ಪಕ್ಷ ಎಡಪಕ್ಷಗಳ ಮೈತ್ರಿಯೊಂದಿಗೆ ಸ್ಪರ್ಧಿಸಲಿದೆ. ಕ್ಯಾಪ್ಟನ್ ವಿಜಯ್‌ಕಾಂತ್ ನೇತೃತ್ವದ ದೇಶೀಯ ಮೂರ್‌ಪೋಕ್ ದ್ರಾವಿಡ ಕಳಗಂ(ಡಿಎಂಡಿಕೆ) ಜನಕ್ಷೇಮ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿ ಚುನಾವಣೆಯನ್ನು ಎದುರಿಸಲಿದೆ ಎಂದು ವಿಜಯ್‌ಕಾಂತ್ ಘೋಷಿಸಿದ್ದಾರೆ. ಒಟ್ಟು 234 ಸ್ಥಾನಗಳಲ್ಲಿ 124 ಸ್ಥಾನಗಳಲ್ಲಿ ಡಿಎಂಡಿಕೆ ಅಭ್ಯರ್ಥಿಗಳನ್ನು ನಿಲ್ಲಿಸಿದರೆ ಮಿತ್ರಕೂಟದ ಉಳಿದವರು 110 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ. ಡಿಎಂಕೆ ಮತ್ತು ಬಿಜೆಪಿ ಮುಂದಿಟ್ಟ ನಡೆಗಳನ್ನು ನಿರ್ಲಕ್ಷಿಸಿ ವಿಜಯ್‌ಕಾಂ ಜನಕ್ಷೇಮ ಮೈತ್ರಿಕೂಟದ ಭಾಗವಾಗಿದ್ದಾರೆ. ಸಿಪಿಐಎಂ, ಸಿಪಿಐ, ವೈಕೋರ ಎಂಡಿಎಂಕೆ, ವಿಡುದಲೈ ಚಿರುತೆಗಳ್ ಪಕ್ಷಗಳು ಜನಕ್ಷೇಮ ಮೈತ್ರಿಕೂಟದಲ್ಲಿರುವ ಪಕ್ಷಗಳಾಗಿವೆ.

ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ವಿಜಯ್ ಕಾಂತ್ ಯೋಚಿಸಿದ್ದರು. ಆದರೆ ಮೈತ್ರಿಕೂಟದ ಭಾಗವಾಗುವುದಿಲ್ಲವೆಂದು ವಿಜಯ್‌ಕಾಂತ್‌ಗೆ ಮುಖ್ಯಮಂತ್ರಿಯಾಗುವ ಯೋಗ್ಯತೆಯಿದೆಯೆಂದೂ ಪತ್ನಿ ಪೇಮಲತ ಬಹಿರಂಗವಾಗಿ ಪ್ರಕಟಿಸಿದ್ದರು. ಹೆಚ್ಚು ಊಹಾಪೋಹಗಳಿಗೆ ಇದು ಆಸ್ಪದವಾಗಿತ್ತು. ಈನಡುವೆ ವಿಜಯ್‌ಕಾಂತ್ ತನ್ನ ತೀರ್ಮಾನವನ್ನು ಪ್ರಕಟಿಸಿದ್ದಾರೆ. ಹಳೆಯ ಬಾವಿಗೆ ಬೀಳಲಿದ್ದಾರೆಂದು ವಿಜಯ್‌ಕಾಂತ್ ಮೈತ್ರಿಯ ಕುರಿತು ಈ ಹಿಂದೆ ಕರುಣಾ ನಿಧಿ ಘೋಷಿಸಿದ್ದರು. ಆದರೆ ವಿಜಯ್‌ಕಾಂತ್ ಹೊಸ ತೀರ್ಮಾನ ಡಿಎಂಕೆಗೆ ತಿರುಗೇಟಾಗಿ ಪರಿಣಮಿಸಿದೆ.

ಎಐಎಡಿಎಂಕೆ ಮತ್ತು ಡಿಎಂಕೆ ಪರಸ್ಪರ ಕಠಿಣ ಸ್ಪರ್ಧೆ ನಡೆಸಲಿವೆ ಎಂದು ಸಮೀಕ್ಷೆಗಳು ಹೇಳಿವೆ. ಎಐಎಡಿಎಂಕೆ ಶೇ.33ರಷ್ಟು ವೋಟು ಗಳಿಸುವಾಗ ಶೆ.30-31ರಷ್ಟು ವೋಟುಗಳನ್ನು ಡಿಎಂಕೆ ವೋಟುಗಳಿಸಲಿದೆಎಂದು ಸರ್ವೇ ತಿಳಿಸಿದೆ. ಈ ಪರಿಸ್ಥಿತಿಯಲ್ಲಿ ವಿಜಯ್‌ಕಾಂತ್‌ಗೆ ಶೆ.8%ರಷ್ಟು ವೋಟುಗಳಿಸಲು ಸಾಧ್ಯವಾಗಲಿದೆ ಎಂದು ಅದು ಹೇಳಿದೆ. ಆದ್ದರಿಂದ ಎಡಪಕ್ಷಗಳು ಮತ್ತು ವಿಜಯ್‌ಕಾಂತ್ ಸೇರಿ ಚುನಾವಣೆಗೆ ಸ್ಪರ್ಧಿಸಿದರೆ ತಮಿಳ್ನಾಡಿನ ರಾಜಕೀಯದಲ್ಲಿಅಲ್ಲೋಲಕಲ್ಲೋಲ ವುಂಟಾಗಲಿದೆ ಎಂದು ಹೇಳಲಾಗುತ್ತಿದೆ.

2011ರ ಚುನಾವಣೆಯಲ್ಲಿ ಅಣ್ಣಾಡಿಎಂಕೆಯ ಭಾಗವಾಗಿ ಸ್ಪರ್ಧಿಸಿದ್ದ ಡಿಎಂಡಿಕೆ 41 ಸೀಟುಗಳಲ್ಲಿ 29 ಸೀಟುಗಳನ್ನು ಗೆದ್ದಿತ್ತು, ಡಿಎಂಕೆ ಪತನದ ನಂತರ ವಿಜಯ್‌ಕಾಂತ್ ಪ್ರತಿಪಕ್ಷ ನಾಯಕನಾದರು. ಅದೇವೇಳೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ತೆಕ್ಕೆಗೆ ಹೋಗಿದ್ದ ವಿಜಯ್‌ಕಾಂತ್‌ರ ಪಕ್ಷಕ್ಕೆ ಒಂದು ಸ್ಥಾನದಲ್ಲಿಯೂ ಗೆಲ್ಲಲು ಸಾಧ್ಯವಾಗಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X