ಮುಷ್ಕರ ಮುಂದೂಡಿಕೆ
ಬೆಂಗಳೂರು, ಮಾ.23: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾ. 23ರಂದು ರಾಜ್ಯವ್ಯಾಪಿ ಕರೆ ನೀಡಲಾಗಿದ್ದ ಕರ್ನಾಟಕ ರಾಜ್ಯ ವಸತಿ ಶಾಲೆ ಮತ್ತು ನಿಲಯಗಳ ಬೋಧಕೇತರ ಸಿಬ್ಬಂದಿ ಮುಷ್ಕರವನ್ನು ಮುಂದೂಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ನಾಲ್ಕು ತಿಂಗಳಲ್ಲಿ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಷ್ಕರವನ್ನು ಮುಂದೂಡಲಾಗಿದೆ.
ಎಲ್ಲ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕೆಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯಭಾಸ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





