Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೋಳಿ ಬಲೂನಿಗೆ ಆಕ್ಷೇಪಿಸಿದ ನೈಜೀರಿಯಾ...

ಹೋಳಿ ಬಲೂನಿಗೆ ಆಕ್ಷೇಪಿಸಿದ ನೈಜೀರಿಯಾ ಪ್ರಜೆಗಳ ಮೇಲೆ ಬರ್ಬರ ಹಲ್ಲೆ

ಇದೆಂತಹಾ ಸಂಭ್ರಮಾಚರಣೆ ?

ವಾರ್ತಾಭಾರತಿವಾರ್ತಾಭಾರತಿ24 March 2016 4:57 PM IST
share
ಹೋಳಿ ಬಲೂನಿಗೆ ಆಕ್ಷೇಪಿಸಿದ ನೈಜೀರಿಯಾ ಪ್ರಜೆಗಳ ಮೇಲೆ ಬರ್ಬರ ಹಲ್ಲೆ

ನವದೆಹಲಿ : ಬಾಲಕನೊಬ್ಬ ನೀರು ತುಂಬಿದ ಬಲೂನನ್ನು ತಮ್ಮತ್ತ ಎಸೆದಿದ್ದಕ್ಕಾಗಿ ಆತನಿಗೆ ಬೈದರೆಂಬ ಒಂದೇ ಕಾರಣಕ್ಕೆ ಫುಟ್ಬಾಲ್ ಕೋಚ್ ಒಬ್ಬರು ಸೇರಿದಂತೆ ಇಬ್ಬರು ನೈಜೀರಿಯಾ ಪ್ರಜೆಗಳ ಮೇಲೆ ಕ್ರಿಕೆಟ್ ಹಾಗೂ ಬೇಸ್‌ಬಾಲ್ ಬ್ಯಾಟುಗಳಿಂದಸುಮಾರು 12 ಮಂದಿಯ ಗುಂಪೊಂದು ಹಲ್ಲೆಗೈದ ಘಟನೆ ಪಶ್ಚಿಮ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಭಾನುವಾರ ನಡೆದಿದ್ದು ಘಟನೆ ನಡೆದು 24 ಗಂಟೆಗಳ ತರುವಾಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆನ್ನಲಾಗಿದೆ. ಈ ತನಕ ಯಾರನ್ನೂ ಬಂಧಿಸಲಾಗಿಲ್ಲವೆಂದು ತಿಳಿದು ಬಂದಿದೆ. ಘಟನೆ ನಡೆದಂದಿನಿಂದ ನೈಜೀರಿಯಾ ಪ್ರಜೆಗಳಿಬ್ಬರೂ ತಮ್ಮ ಮನೆಗೆ ಹಿಂದಿರುಗಿಲ್ಲ ಹಾಗೂ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆಯೆನ್ನಲಾಗಿದೆ.

‘‘ನಾವು ಭಯಭೀತರಾಗಿದ್ದೇವೆ ಹಾಗೂನಮ್ಮ ಸ್ನೇಹಿತರೊಬ್ಬರ ಮನೆಯಲ್ಲಿ ತಂಗಿದ್ದೇವೆ.ನಾವಿದ್ದ ಪ್ರದೇಶವನ್ನು ತೊರೆಯುತ್ತೇವೆಯಾದರೂ ನ್ಯಾಯಕ್ಕಾಗಿ ನಾವು ಹೋರಾಡುತ್ತೆವೆ,’’ಎಂದು ಸಂತ್ರಸ್ತರಲ್ಲೊಬ್ಬರಾದ ಎವ್ವಿರ್ಹಿ ಐಸಾಕ್ ಇಂಡಿಯನ್ ಎಕ್ಸ್‌ಪ್ರೆಸ್ ಪ್ರತಿನಿಧಿಯೊಂದಿಗೆ ಮಾತನಾಡುತ್ತಾ ಹೇಳಿದರು. ಗುಲ್‌ಮೊಹರ್ ಬಾಗ್‌ನಲ್ಲಿರುವ ಸಾಕರ್ ಕ್ಲಬ್‌ನಲ್ಲಿ ಅವರು ಕೋಚ್ ಆಗಿದ್ದಾರೆ. ಇವರು ದ್ವಾರಕಾ ಪ್ರದೇಶದಲ್ಲಿ ಕಳೆದ ಮೂರು ವರ್ಷಗಳಿಂದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಾರೆ. ‘‘ಜನಾಂಗೀಯ ನಿಂದನೆಯನ್ನು ಹಲವು ಬಾರಿ ಎದುರಿಸಬೇಕಾಗಿ ಬಂದಿದ್ದರೂ ನಾನು ಅದನ್ನು ಯಾವತ್ತೂನಿರ್ಲಕ್ಷ್ಯಿಸಿದ್ದೇನೆ,’’ಎಂದು ಐಸಾಕ್ ಹೇಳಿದ್ದಾರೆ. ‘‘ಆದರೆ ರವಿವಾರ ನಡೆದ ಘಟನೆಯಲ್ಲಿ ಜನರು ನಮ್ಮನ್ನು ಸಾಯಿಸಿಯೇ ಬಿಡುತ್ತಿದ್ದರೇನೋ,’’ಎಂದವರು ಭೀತಿ ವ್ಯಕ್ತಪಡಿಸಿದ್ದಾರೆ.

ಐಸಾಕ್ ಮಾರ್ಕೆಟ್‌ನತ್ತ ನಡೆಯುತ್ತಿದ್ದಾಗ ಬಾಲಕನೊಬ್ಬ ಅವರ ಮೇಲೆ ನೀರು ತುಂಬಿದ ಬಲೂನು ಎಸೆದಾಗ ಐಸಾಕ್ ಬಾಲಕನನ್ನು ಹಿಡಿದು ಬೈದು ನಂತರ ತಮ್ಮ ದಾರಿ ಹಿಡಿದಿದ್ದರು. ಸ್ವಲ್ಪ ಹೊತ್ತಿನ ಬಳಿಕ ಬಾಲಕನ ಸಹೋದರಅಲ್ಲಿಗೆ ಬಂದಾಗ ಹತ್ತಿರದ ಅಂಗಡಿಯವ ನಡೆದಿದ್ದನ್ನು ವಿವರಿಸಿದ್ದ. ಸ್ವಲ್ಪ ಹೊತ್ತಿನಲ್ಲಿಯೇ ಐಸಾಕ್ ಮನೆ ಬಾಗಿಲನ್ನು ಬಡಿದ ಜನರು ಒಳ ಪ್ರವೇಶಿಸಿ ಅವರ ಹಾಗೂ ಅವರ ರೂಂ ಮೇಟ್ ಅಬ್ದುಲ್ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿ ದಾಂಧಲೆಗೈದು ಹೊರನಡೆದಿದ್ದರು.

ಘಟನೆ ನಡೆದ ಸಮಯ ತಾನು ಐಸಾಕ್ ಜತೆಗಿರಲಿಲ್ಲವೆಂದು ಆತನ ರೂಂ ಮೇಟ್ ಅಬ್ದುಲ್ ದಾಳಿಕೋರರಲ್ಲಿ ಹೇಳಿದರೂ ಏನೂ ಪ್ರಯೋಜನವಾಗಲಿಲ್ಲವೆನ್ನಲಾಗಿದೆ.

ಹಿರಿಯ ಅಧಿಕಾರಿಗಳ ಹಸ್ತಕ್ಷೇಪದ ನಂತರವಷ್ಟೇ ಪೊಲೀಸರು ಪ್ರಕರಣ ದಾಖಲಿಸಿದ್ದಾರೆನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X