Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವರ ಜಿಲ್ಲಾ ಪ್ರವಾಸಕ್ಕೆ ಒಕ್ಕೊರಲ...

ಸಚಿವರ ಜಿಲ್ಲಾ ಪ್ರವಾಸಕ್ಕೆ ಒಕ್ಕೊರಲ ಆಗ್ರಹ

ಬರ ಪರಿಹಾರ

ವಾರ್ತಾಭಾರತಿವಾರ್ತಾಭಾರತಿ24 March 2016 11:14 PM IST
share

ಬೆಂಗಳೂರು, ಮಾ. 24: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೃಷಿ, ಕಂದಾಯ, ಗ್ರಾಮೀಣಾಭಿವೃದ್ಧಿ, ಇಂಧನ ಹಾಗೂ ತೋಟಗಾರಿಕೆ ಸಚಿವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಖುದ್ದು ಪರಿಸ್ಥಿತಿ ಅವಲೋಕಿಸಿ ಅಗತ್ಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕೆಂದು ಆಡಳಿತ ಪಕ್ಷದ ಸದಸ್ಯ ಬಸವರಾಜ ರಾಯರೆಡ್ಡಿ ಆಗ್ರಹಿಸಿದ್ದಾರೆ.
ಗುರುವಾರ ವಿಧಾನಸಭೆಯಲ್ಲಿ ಬರ ಮತ್ತು ವಿದ್ಯುತ್ ಅಭಾವ ಸಂಬಂಧ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಧಿಕಾರಿಗಳ ಮೇಲೆ ಸರಕಾರ ಯಾವುದೇ ಕಾರಣಕ್ಕೂ ಅವಲಂಬಿಸಬಾರದು. ನಾಲ್ಕೈದು ಮಂದಿ ಸಚಿವರು ಜಿಲ್ಲಾ ಪ್ರವಾಸ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಅತ್ಯಂತ ಭೀಕರ ಸ್ವರೂಪದ ಬರ ಆವರಿಸಿದ್ದು, ಗ್ರಾಮೀಣ ಪ್ರದೇಶದ ಜನತೆ ಕುಡಿಯುವ ನೀರು, ಉದ್ಯೋಗ ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ರಾಜ್ಯ ಸರಕಾರ ಸಮರೋಪಾದಿಯಲ್ಲಿ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರಕಾರವೂ ಅಗತ್ಯ ನೆರವು ನೀಡಬೇಕೆಂದು ಮನವಿ ಮಾಡಿದರು.
ಇಚ್ಛಾಶಕ್ತಿ ಅಗತ್ಯ: ಬರ ಪರಿಸ್ಥಿತಿ ನಿರ್ವಹಿಸಲು ಆಡಳಿತ ವ್ಯವಸ್ಥೆಗೆ ಇಚ್ಛಾಶಕ್ತಿ ಅಗತ್ಯ. ಆದರೆ, ಅವರಿಗೆ ಇಚ್ಛಾಶಕ್ತಿ, ಆಸಕ್ತಿ, ಕ್ರಿಯಾಶೀಲತೆಯ ‘ಬರ’ ಆವರಿಸಿದೆ. ಸಚಿವರು-ಶಾಸಕರಿಗೂ ಜವಾಬ್ದಾರಿಯ ‘ಬರ’ ಬಂದಿದೆ. ಇಡೀ ಸದನವೇ ಒಗ್ಗೂಡಿ ಬರ ಪರಿಸ್ಥಿತಿ ನಿಭಾಯಿಸಲು ಪಕ್ಷಭೇದ ಮರೆತು ಕೆಲಸ ಮಾಡಬೇಕೆಂದು ಜೆಡಿಎಸ್ ಉಪ ನಾಯಕ ವೈಎಸ್‌ವಿ ದತ್ತ ಸಲಹೆ ನೀಡಿದರು.
ದೇವರಾಜ ಅರಸು ಮುಖ್ಯಮಂತ್ರಿ ಆಗಿದ್ದ ವೇಳೆ ಬರ ಪರಿಸ್ಥಿತಿ ಆವರಿಸಿತ್ತು. ಆ ಸಂದರ್ಭದಲ್ಲಿ ಅಧ್ಯಯನಕ್ಕೆ ಸದನ ಸಮಿತಿ ರಚಿಸಿ ಬರ ಪೀಡಿತ ಪ್ರದೇಶಗಳಿಗೆ ಸಮಿತಿ ಖುದ್ದು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು ಎಂದು ಅವರು ನೆನಪಿಸಿದರು.
ಸಾಲ ಮನ್ನಾಕ್ಕೆ ಆಗ್ರಹ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಮಾಡಬೇಕು. ಕುಡಿಯುವ ನೀರಿಗೆ ಪ್ರತೀ ತಾಲೂಕಿಗೆ ಕನಿಷ್ಠ 10 ಕೋಟಿ ರೂ. ಬಿಡುಗಡೆ ಮಾಡಬೇಕು. ಮೇವು ಬ್ಯಾಂಕ್ ಸ್ಥಾಪಿಸುವುದರ ಜೊತೆಗೆ ಹೋಬಳಿಗೆ ಒಂದು ಗೋಶಾಲೆ ಆರಂಭಿಸಬೇಕು. ಕನಿಷ್ಠ 2ಸಾವಿರ ಕೋಟಿ ರೂ.ಬರ ಪರಿಹಾರ ಕಾರ್ಯಗಳಿಗೆ ಸರಕಾರ ಒದಗಿಸಬೇಕೆಂದು ಗೋವಿಂದ ಕಾರಜೋಳ ಆಗ್ರಹಿಸಿದರು.

‘ಬೇಡುವುದೇ (ಕೇಂದ್ರಕ್ಕೆ ಹೆಚ್ಚಿನ ನೆರವು ನೀಡಲು ಮನವಿ ಮಾಡಿ)ಭಿಕ್ಷೆ, ಅದನ್ನು ಸರಿಯಾಗಿ ಬೇಡಿ.’
-ಗೋವಿಂದ ಕಾರಜೋಳ, ಬಿಜೆಪಿ ಸದಸ್ಯ

‘ರೀ ಗೋವಿಂದ ಕಾರಜೋಳ ನಿಮ್ಮ ಹೆಸರಿನಲ್ಲೇ ‘ಕಾರಜೋಳ’ ಅಡಗಿದೆ, ನಮ್ಮ ಪಾಲಿಗೆ ನೀವು ಸ್ವಲ್ಪ ಸಿಹಿಜೋಳನೂ ಆಗಿ.’
-ವಿ.ಶ್ರೀನಿವಾಸ ಪ್ರಸಾದ್, ಕಂದಾಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X