Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣೆಯಲ್ಲಿ ಹಣಬಲ ಬಳಕೆಗೆ ತಡೆ: ಕ್ರಮ...

ಚುನಾವಣೆಯಲ್ಲಿ ಹಣಬಲ ಬಳಕೆಗೆ ತಡೆ: ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಹೈಕೋರ್ಟ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ24 March 2016 11:48 PM IST
share
ಚುನಾವಣೆಯಲ್ಲಿ ಹಣಬಲ ಬಳಕೆಗೆ ತಡೆ: ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಹೈಕೋರ್ಟ್ ಸಲಹೆ

ಹೊಸದಿಲ್ಲಿ, ಮಾ.24: ಚುನಾವಣೆಗಳಲ್ಲಿ ಹಣಬಲದ ದುರುಪಯೋಗ ತಡೆಯಲು ಸರಕಾರವು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ದಿಲ್ಲಿ ಹೈಕೋರ್ಟ್ ಬುಧವಾರ ಹೇಳಿದೆ. ನಾಲ್ಕು ರಾಜ್ಯಗಳು ಕೇಂದ್ರಾಡಳಿತದ ಪುದುಚೇರಿಗಳಲ್ಲಿ ಸದ್ಯವೇ ಚುನಾವಣೆಗಳು ನಡೆಯಲಿವೆ.

ರಾಜಕೀಯ ಪಕ್ಷಗಳು ಖರ್ಚು ಮಾಡುವ ಹೆಚ್ಚಿನ ಸಾರ್ವಜನಿಕ ನಿಧಿಗಳ ‘ಲೆಕ್ಕ ಸಿಗುವುದಿಲ್ಲ’ ಎಂದು ಬೆಟ್ಟುಮಾಡಿದ ನ್ಯಾಯಮೂರ್ತಿ ಎಸ್. ಮುರಳಿಧರ್ ನೇತೃತ್ವದ ಪೀಠವೊಂದು , ಹಣದ ಶಕ್ತಿಯು ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಳನ್ನು ನಡೆಸುವ ದಾರಿಗೆಡಿಸದಂತೆ ಖಚಿತಪಡಿಸಲು ಕಾನೂನು ಆಯೋಗದ ಶಿಫಾರಸುಗಳಿಗೆ ಸರಕಾರ ಹಾಗೂ ಸಂಸತ್ ಗಂಭೀರ ಮತ್ತು ತುರ್ತು ಲಕ್ಷ ನೀಡಬೇಕೆಂದು ತಿಳಿಸಿದೆ.

ಪಕ್ಷವು ಪಡೆದಿರುವ ‘ಸ್ವ ಇಚ್ಛೆಯ’ ದೇಣಿಗೆಗಳಿಗೆ 1994-95ನೆ ವೌಲ್ಯಮಾಪನ ವರ್ಷಕ್ಕೆ ಆದಾಯತೆರಿಗೆ ವಿನಾಯಿತಿ ನೀಡುವಂತೆ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯೊಂದನ್ನು ನ್ಯಾಯಪೀಠ ತಳ್ಳಿ ಹಾಕಿತು.

ಚುನಾವಣಾ ಪ್ರಕ್ರಿಯೆಯಲ್ಲಿ ಧನ ಬಲದ ಪ್ರಭಾವವನ್ನು ತಡೆಯಲು ಪರಿಣಾಮಕಾರಿ ಕಾನೂನು ಕ್ರಮಗಳು ಅಗತ್ಯವೆಂಬುದನ್ನು ಈ ಪ್ರಕರಣ ತೋರಿಸುತ್ತಿದೆಯೆಂದು ಅದು ಅಭಿಪ್ರಾಯಿಸಿತು.

ರಾಜಕೀಯ ಪಕ್ಷಗಳು ನಮ್ಮ ಪ್ರಜಾಪ್ರಭುತ್ವದ ಅವಶ್ಯ ಅಂಗಗಳಾಗಿವೆ. ಅವುಗಳು ಅಪಾರ ಮೊತ್ತದ ಹಣದ ವ್ಯವಹಾರ ನಡೆಸುತ್ತಿವೆ. ಆದರೆ, ಹೆಚ್ಚಿನದಕ್ಕೆ ಲೆಕ್ಕವೇ ಇರುವುದಿಲ್ಲ. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದಕ್ಕೆ ರಾಜಕೀಯ ಪಕ್ಷಗಳ ಲೆಕ್ಕ ಪತ್ರಗಳ ಸೂಕ್ತ ತಪಾಸಣೆ ಅಗತ್ಯ ಹಾಗೂ ನಿರ್ಣಾಯಕವಾಗಿದೆಯೆಂದು ಪೀಠ ಸ್ಟಷ್ಟಪಡಿಸಿತು.

ಇದು ಸಂಪೂರ್ಣವಾಗಿ, ರಾಜಕೀಯ ಪಕ್ಷಗಳ ಕಾರ್ಯಾಚರಣೆಯಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವವನ್ನು ತುಂಬುತ್ತದೆ. ಈ ಮೂಲಕ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತದೆ ಹಾಗೂ ಆಳಗೊಳಿಸುತ್ತದೆಂದುಹೇಳಿದೆ ಪೀಠ, ರಾಜಕೀಯ ಪಕ್ಷಗಳ ಲೆಕ್ಕ ಪತ್ರಗಳನ್ನು ಸೂಕ್ತವಾಗಿ ತಪಾಸಣೆ ಮಾಡುವುದು ಅಗತ್ಯವೆಂದಿತು.

ಒಂದು ರಾಜಕೀಯ ಪಕ್ಷದ ಒಟ್ಟು ಸಂಗ್ರಹದ (ಚೆಕ್ ಯಾ ನಗದು)ಸ ಶೇ.20ರಷ್ಟು ಅಥವಾ ರೂ.20 ಕೋಟಿ- ಯಾವುದು ಕಡಿಮೆಯೋ ಅದು-ಮಾತ್ರ ಅನಾಮಧೇಯವಾಗಿ (ಗುಪ್ತವಾಗಿ) ಇರಬಹುದೆಂಬ ಕಾನೂನು ಆಯೋಗದ, ಚುನಾವಣಾ ಸುಧಾರಣೆಯ ಕುರಿತ 255ನೆ ವರದಿಯನ್ನು ಪರಿಗಣಿಸುವಂತೆ ಸರಕಾರಕ್ಕೆ ಪೀಠ ಸಲಹೆ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X