Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನನ್ನ ಸಂದರ್ಶಕಿ ಮುಸ್ಲಿಂ ಅಂತ ಯಾರೂ...

ನನ್ನ ಸಂದರ್ಶಕಿ ಮುಸ್ಲಿಂ ಅಂತ ಯಾರೂ ಹೇಳಿರಲಿಲ್ಲ

ಹೋರಾಟಗಾರ್ತಿ ಸೂಕಿಯ ಆಘಾತಕಾರಿ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ25 March 2016 3:33 PM IST
share
ನನ್ನ ಸಂದರ್ಶಕಿ ಮುಸ್ಲಿಂ ಅಂತ ಯಾರೂ ಹೇಳಿರಲಿಲ್ಲ

ಲಂಡನ್, ಮಾ. 25: ಆಕೆ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆಯೇನೋ ಹೌದು. ಆದರೆ, ಸಂದರ್ಶನವೊಂದರಲ್ಲಿ ಆಕೆ ಹೇಳಿದ ಮಾತುಗಳು ಆಘಾತಕಾರಿಯಾಗಿದ್ದವು. ಹೊರ ಜಗತ್ತಿಗೆ ಕಾಣದ ಇನ್ನೊಂದು ಮುಖ ಆಕೆಯಲ್ಲಿ ಇದೆಯೇನೋ ಎಂಬ ಸಂಶಯ ಹುಟ್ಟಿಸಿವೆ.

2013ರಲ್ಲಿ ಮ್ಯಾನ್ಮಾರ್‌ನ ಪ್ರಜಾಪ್ರಭುತ್ವ ಹೋರಾಟಗಾರ್ತಿ ಆಂಗ್ ಸಾನ್ ಸೂಕಿ ಬಿಬಿಸಿ ಸುದ್ದಿ ವಾಹಿನಿಯ ‘ಬಿಬಿಸಿ ಟುಡೆ’ ಕಾರ್ಯಕ್ರಮಕ್ಕೆ ಸಂದರ್ಶನವೊಂದನ್ನು ನೀಡಿದರು. ಸಂದರ್ಶನ ಮಾಡಿದ್ದು ಮಿಶಲ್ ಹುಸೈನ್ ಎಂಬ ನಿರೂಪಕಿ. ಸಂದರ್ಶನದಲ್ಲಿ ಮಿಶಲ್ ಹುಸೈನ್ ತನ್ನ ಅತಿಥಿಯನ್ನು ಚೆನ್ನಾಗಿಯೇ ಗೋಳುಹೊಯ್ಯಿಸಿಕೊಂಡರು. ಇದರಿಂದ ಬೇಸತ್ತ ಸೂ ಕಿ, ‘‘ನನ್ನನ್ನು ಸಂದರ್ಶನ ಮಾಡುವುದು ಓರ್ವ ಮುಸ್ಲಿಂ ವ್ಯಕ್ತಿ ಎಂಬುದಾಗಿ ಯಾರೂ ನನಗೆ ಹೇಳಿಲ್ಲ’’ ಎಂದು ಹೊರಗೆ ಗೊಣಗಿದರು ಎಂದು ‘ಡೇಲಿ ಮೇಲ್’ ಹೇಳಿದೆ.

ಪೀಟರ್ ಪೋಫಮ್ ಬರೆದ ಹೊಸ ಪುಸ್ತಕ ‘ದ ಲೇಡಿ ಆ್ಯಂಡ್ ದ ಜನರಲ್ಸ್: ಆಂಗ್ ಸಾನ್ ಸೂ ಕಿ ಆ್ಯಂಡ್ ಬರ್ಮಾಸ್ ಸ್ಟ್ರಗಲ್ ಫಾರ್ ಫ್ರೀಡಂ’ ಈ ಬಗ್ಗೆ ಹೆಚ್ಚಿನ ವಿವರಣೆಯನ್ನು ನೀಡಿದೆ.

 ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ಮುಸ್ಲಿಮರ ಹತ್ಯಾಕಾಂಡ ಮತ್ತು ಇಸ್ಲಾಂ ವಿರೋಧಿ ಭಾವನೆಗಳನ್ನು ಖಂಡಿಸುತ್ತೀರಾ ಎಂಬುದಾಗಿ ಸಂದರ್ಶಕಿ ಮಿಶಲ್ ಹುಸೈನ್ ಕೇಳಿದರು. ಆದರೆ, ಹಾಗೆ ಮಾಡಲು ಸೂ ಕಿ ನಿರಾಕರಿಸಿದರು. ಬದಲಿಗೆ ಅವರು ಹೀಗೆ ಹೇಳಿದರು: ‘‘ಹಲವಾರು ಕಾರಣಗಳಿಗಾಗಿ ಭಾರೀ ಸಂಖ್ಯೆಯಲ್ಲಿ ಬೌದ್ಧರೂ ದೇಶವನ್ನು ತೊರೆದಿದ್ದಾರೆ ಎಂದು ನನಗನಿಸುತ್ತದೆ. ಇದು ಸರ್ವಾಧಿಕಾರಿ ಆಡಳಿತದಲ್ಲಿ ನಾವು ಅನುಭವಿಸುತ್ತಿರುವ ಯಾತನೆಗಳ ಫಲಿತಾಂಶವಾಗಿದೆ’’.

ಮ್ಯಾನ್ಮಾರ್‌ನಲ್ಲಿ ಮುಸ್ಲಿಮರ ಜನಸಂಖ್ಯೆ 4 ಶೇಕಡ. ಹೆಚ್ಚಾಗಿ ಹಿಂಸೆಯನ್ನು ಅನುಭವಿಸುವವರು ರೊಹಿಂಗ್ಯಾ ಮುಸ್ಲಿಮರು. ರೊಹಿಂಗ್ಯ ಮುಸ್ಲಿಮರಿಗೆ ಪೌರತ್ವವನ್ನು ನೀಡುವುದನ್ನು ನಿಲ್ಲಿಸಲಾಗಿದೆ ಹಾಗೂ ಅವರಿಗೆ ಯಾವುದೇ ರಾಜಕೀಯ ಅಧಿಕಾರವಿಲ್ಲ.

ಕಳೆದ ವರ್ಷದ ನವೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಸೂ ಕಿಯ ನ್ಯಾಶನಲ್ ಲೀಗ್ ಫಾರ್ ಡೆಮಾಕ್ರಸಿ (ಎನ್‌ಎಲ್‌ಡಿ) ಅಭೂತಪೂರ್ವ ಬಹುಮತದಿಂದ ಅಧಿಕಾರಕ್ಕೆ ಬಂದಿದೆ.

 ಸ್ವತಃ ಸೂ ಕಿ ದೇಶದ ಅಧ್ಯಕ್ಷೆಯಾಗುವುದನ್ನು ಸಂವಿಧಾನ ನಿರ್ಬಂಧಿಸಿರುವುದರಿಂದ, ಅವರ ನಿಕಟವರ್ತಿ ಹಟಿನ್ ಕ್ಯಾವ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸೂ ಕಿಯನ್ನು ವಿದೇಶಾಂಗ ಸಚಿವೆಯನ್ನಾಗಿ ನೂತನ ಅಧ್ಯಕ್ಷರು ನೇಮಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X