Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ : ಸಮಾಜವು ಸುಸ್ಥಿರದಲ್ಲಿ...

ಭಟ್ಕಳ : ಸಮಾಜವು ಸುಸ್ಥಿರದಲ್ಲಿ ಬದಲಾವಣೆಯಾಗಬೇಕಾದರೆ ಅದು ಮೌಲ್ಯಾಧರಿತ ಶಿಕ್ಷಣದಿಂದ ಮಾತ್ರ ಸಾಧ್ಯ - ದಾಮೋದರ್ ಎ.ಟಿ.

ವಾರ್ತಾಭಾರತಿವಾರ್ತಾಭಾರತಿ25 March 2016 6:40 PM IST
share
ಭಟ್ಕಳ : ಸಮಾಜವು ಸುಸ್ಥಿರದಲ್ಲಿ ಬದಲಾವಣೆಯಾಗಬೇಕಾದರೆ ಅದು ಮೌಲ್ಯಾಧರಿತ ಶಿಕ್ಷಣದಿಂದ ಮಾತ್ರ ಸಾಧ್ಯ - ದಾಮೋದರ್ ಎ.ಟಿ.

ಭಟ್ಕಳ : ಸಮಾಜವು ಸುಸ್ಥಿರದಲ್ಲಿ ಬದಲಾವಣೆಯಾಗಬೇಕಾದರೆ ಅದು ಮೌಲ್ಯಾಧರಿತ ಶಿಕ್ಷಣದಿಂದ ಮಾತ್ರ ಸಾಧ್ಯ. ಒಂದು ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದರೂ ಸಹ ಮೌಲ್ಯಾಧರಿತ ಶಿಕ್ಷಣ ಹೊಂದಿದಲ್ಲಿ ಖಂಡಿತ ಆ ಸಮಾಜ ಎಳಿಗೆ ಸಾಧ್ಯ ಎಂದು ಗೋವಾ ರಾಜ್ಯದ ಐ.ಎಫ್.ಎಸ್. ಅಧಿಕಾರಿ ಡಿ.ಸಿ.ಎಫ್ ದಾಮೋದರ್ ಎ.ಟಿ. ತಿಳಿಸಿದರು.
      
     ಅವರು ಶುಕ್ರವಾರ ಭಟ್ಕಳದ ನ್ಯೂ ಇಂಗ್ಲೀಷ್ ಶಾಲೆಯಲ್ಲಿ ಆಯೋಜಿಸಲಾದ ಭಟ್ಕಳ ತಾಲೂಕಾ ಅರ್ಯ ಈಡಿಗ ನಾಮಧಾರಿ ನೌಕರರ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರತೀಬಾ ಪುರಸ್ಕಾರ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯನಲ್ಲಿ ಆತ್ಮವಿಶ್ವಾಸ ಮತ್ತು ಆತ್ಮಬಲ ಜೊತೆಗೆ ಕಠೀಣ ಪರಿಶ್ರಮವಿದ್ದರೆ ಎಂತಹ ಸಾಧನೆ ಬೇಕಾದರೂ ಮಾಡಿ ತೋರಿಸಬಹುದು ಎಂಬುದಕ್ಕೆ ನಾನೇ ಉದಾಹರಣೆ ಎಂದು ತಿಳಿಸಿದ ಅವರು ಸಾಧನೆಗೆ ಬಡತನ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದರು. ಸರ್ಕಾರ ಇಂದಿನ ಯುವ ಪೀಳಿಗೆಯ ಶಿಕ್ಷಣಕ್ಕೆ ಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸುತ್ತಿದ್ದು, ಅದರ ಸದುಪಯೋಗ ಪಡೆದುಕೊಂಡು ಯುವ ಜನತೆ ದೇಶಕ್ಕೆ ಹಾಗೂ ಸಮಾಜಕ್ಕೆ ಕಿಂಚಿತ್ತು ಸಹಾಯ ಮಾಡುವಂತೆ ತಿಳಿಸಿದರು. ನಾವು ಸಮಾಜದ ದುರ್ಬಲರಿಗೆ ಆರ್ಥಿಕ ಸಹಾಯ ಮಾಡಲು ಶಕ್ತರಾಗದಿದ್ದರೂ ನಾವು ಕಲಿತ ಜ್ಞಾನವನ್ನು ಅವರಿಗೆ ದಾನ ಮಾಡುವುದರ ಮುಖಾಂತರ ಸಮಾಜ ಶೈಕ್ಷಣಿಕವಾಗಿ ಉನ್ನತಿಗೊಳ್ಳಲು ಎಲ್ಲರೂ ಪ್ರಯತ್ನಿಸೋಣಾ ಎಂದು ಕರೆ ಇತ್ತರು. ಇನ್ನೋರ್ವ ಮುಖ್ಯ ಅತಿಥಿಗಳಾದ ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಮಾತನಾಡಿ ಶೋಷಿತ, ಶೂದ್ರ ಜನಾಂಗವೆಂದು ಕರೆಯಿಸಿಕೊಳ್ಳುತ್ತಿದ್ದ ನಾಮಧಾರಿಗಳಿಗೆ ಸ್ವಾಭಿಮಾನ ಕಲಿಸಿ ನಾವು ಎಲ್ಲರಂತೆ ಸಾಧನೆ ಮಾಡಲು ತೋರಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಹಾಗೇ ಸಾಧನೆ ಮಾಡಿದ ಸಮಾಜದ ಸಾಧಕರು ಅವಕಾಶ ಅಂತಾ ಬಂದಾಗ ಸಮಾಜ ವ್ಯಕ್ತಿಗಳಿಗೆ ಪ್ರಥಮ ಪ್ರಾಶಸ್ತ್ಯ ನೀಡಿ ನಂತರ ಉಳಿದವರಿಗೆ ನೀಡುವಂತಾಗಬೇಕು ಎಂದು ತಿಳಿಸಿದರು. ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ! ಲಕ್ಷ್ಮೀಶ ನಾಯ್ಕ, ಉತ್ತರ ಕನ್ನಡ ಜಿಲ್ಲಾ ಆರ್ಯ ಈಡಿಗ ನಾಮಧಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ ನಾಯ್ಕ, ಗೊರ್ಟೆ ಪ್ರೌಡಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ನಾಯ್ಕ, ನಾಮಧಾರಿ ಸಮಾಜದ ಅಧ್ಯಕ್ಷ ಡಿ ಬಿ ನಾಯ್ಕಮುಂತಾದವರು ಈ ಸಂದರ್ಭದಲ್ಲಿ ಮಾತನಾಡಿದರು. ಭಟ್ಕಳ ಆರ್ಯ ಈಡಿಗ ನಾಮಧಾರಿ ಸಂಘದ ಅಧ್ಯಕ್ಷ ಶ್ರೀಧರ ನಾಯ್ಕ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಭಟ್ಕಳ ಶಾಖಾ ವ್ಯವಸ್ಥಾಪಕಿ ಸಂಧ್ಯಾ ನಾಯ್ಕ, ನ್ಯೂ ಇಂಗ್ಲೀಷ ಶಾಲೆಯ ಮುಖ್ಯೋಪಧ್ಯಾಯ ಎಂ ಕೆ ನಾಯ್ಕ, ಹೊನ್ನಾವರ ಆರ್ಯ ಈಡಿಗ ನಾಮಧಾರಿ ನೌಕರರ ಸಂಘದ ಅಧ್ಯಕ್ಷ ಜಿ.ಎಚ್.ನಾಯ್ಕ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚೂ ಅಂಕ ಪಡೆದ ವಿದ್ಯಾರ್ಥಿಗಳಿಗೆ ಈ ಸಂಧರ್ಬದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅದೇ ರೀತಿ ಸಾಧನೆ ಮಾಡಿದ ನೌಕರರನ್ನು, ನಿವೃತ್ತಿಗೊಂಡ ನೌಕರರನ್ನು ಹಾಗೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಈ ಸಂದರ್ಭದಲ್ಲಿ ನೌಕರರ ಸಂಘದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X