Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 1.70 ಲಕ್ಷ ಮಕ್ಕಳು ಶಿಕ್ಷಣ ವಂಚಿತರು

1.70 ಲಕ್ಷ ಮಕ್ಕಳು ಶಿಕ್ಷಣ ವಂಚಿತರು

ವಾರ್ತಾಭಾರತಿವಾರ್ತಾಭಾರತಿ25 March 2016 10:14 PM IST
share

ಕುಶಾಲನಗರ,ಮಾ.25: ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಪತ್ರಿಕಾವರದಿ ಆಧರಿಸಿ ರಾಜ್ಯ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಶಕ್ತಿ ಪ್ರಕರಣ ದಾಖಲಿಸಿಕೊಂಡು ಎರಡು ವರ್ಷಗಳಾಗುತ್ತಾ ಬಂದಿದೆ.

ಈ ಹಿನ್ನೆಲೆಯಲ್ಲಿ ಎಷ್ಟು ಮಕ್ಕಳು ಶಾಲೆಯಿಂದ ಹೊರಗಿದ್ದಾರೆ ಎಂದು ಮಾಹಿತಿ ನೀಡಿ ಎಂದು ನ್ಯಾಯಾಲಯ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಕೋರಿದ ಹಿನ್ನೆಲೆಯಲ್ಲಿ ಇಲಾಖೆಯು 2013 ರ ನವೆಂಬರ್‌ನಲ್ಲಿ ರಾಜ್ಯಾದ್ಯಂತ ವೈಜ್ಞ್ಞಾನಿಕ ಸಮೀಕ್ಷೆಯನ್ನು ನಡೆಸಿದಾಗ 1.70 ಲಕ್ಷ ಮಕ್ಕಳು ಶಾಲೆಯಿಂದ ಹೊರಗಿರುವ ಅಂಶ ಬೆಳಕಿಗೆ ಬಂದಿದ್ದು, ಅದರಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಜಾರಿಗೆ ಬಂದ ನಂತರ ಇಷ್ಟೊಂದು ಮಕ್ಕಳು ಶಾಲೆಯಿಂದ ಹೊರಗಿರುವ ಅಂಶ ಆಂತಕಕಾರಿ ಬೆಳವಣಿಗೆಯಾಗಿ ಕಂಡು ಬಂದಿತ್ತು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಒಂದು ವರ್ಷದ ಅವಧಿಯಲ್ಲಿ 1 ಲಕ್ಷದ 10 ಸಾವಿರಕ್ಕೂ ಅಧಿಕ ಮಕ್ಕಳನ್ನೂ ಮುಖ್ಯವಾಹಿನಿಗೆ ಕರೆ ತಂದಿರುವುದಾಗಿ ಅಲ್ಲದೆ ಇನ್ನು 53 ಸಾವಿರ ಮಕ್ಕಳು ಶಾಲೆಯಿಂದ ಹೊರಗಿರುವುದಾಗಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿತ್ತು. ಈ ಮನವಿಗೆ ಸ್ಪಂದಿಸಿದ ನ್ಯಾಯಾಲಯವು ಇದೊಂದು ಗಂಭೀರ ಸಮಸ್ಯೆ ಉಳಿದ ಎಲ್ಲ ಮಕ್ಕಳನ್ನೂ ಶಾಲೆಗೆ ಕರೆತಂದು ಈ ಅಂಕಿ ಸಂಖ್ಯೆಯನ್ನು ಸೊನ್ನೆಗೆ ಇಳಿಸಬೇಕು ಎಂದು ತಾಕೀತು ಮಾಡುತ್ತಲೇ ಬಂದಿದೆ. ಪ್ರಕರಣದ ಗಂಭೀರತೆಯನ್ನು ಅರಿತ ಸರಕಾರವು ಶಿಕ್ಷಣ ಇಲಾಖೆಯ ಮೂಲಕ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಅಭಿಯಾನ ಹಮ್ಮಿಕೊಂಡಿರುವುದಾಗಿ ಹೈಕೋರ್ಟ್‌ಗೆ ಪ್ರಮಾಣ ಪತ್ರವನ್ನು ಸಲ್ಲಿಸಿದೆ. ಆದರೆ ಅಭಿಯಾನದ ಮಾತಿರಲಿ ಮಕ್ಕಳನ್ನು ಶಾಲೆಗೆ ತರಲು ಬೇಕಿರುವ ಪ್ರಾಮಾಣಿಕ ಮತ್ತು ಶ್ರದ್ಧೆಯ ಕೆಲಸ ಶಿಕ್ಷಣ ಇಲಾಖೆಯಿಂದ ಆಗುತ್ತಿದೆಯೇ ಎಂದು ಹುಡುಕಲು ಹೊರಟರೆ ನಿಜವಾಗಿ ನಿರಾಸೆಯಾಗುತ್ತದೆ.

ವಿವಿಧ ಇಲಾಖೆಗಳ ಸಮನ್ವಯತೆ ಸಾಧಿಸುವುದರ ಜೊತೆಗೆ ಮತ್ತು ಸ್ವಯಂಸೇವಾ ಸಂಸ್ಥೆಗಳ ಸಹಕಾರದಿಂದ ಈ ಕೆಲಸವನ್ನು ಮಾಡಿ ಎಂದು ನ್ಯಾಯ ಪೀಠವೇನೋ ಹೇಳಿತ್ತು. ಆದರೆ ಸ್ವಯಂ ಸೇವಾ ಸಂಸ್ಥೆಗಳೇನೂ ಸ್ವಯಂ ಇಚ್ಛೆಯಿಂದ ಇದರಲ್ಲಿ ತೊಡಗಿಸಿಕೊಂಡವು ಆದರೆ, ಇತರೆ ಇಲಾಖೆಗ ಳಿಗೆ ನಿರ್ದೆಶನವೇನೂ ಹೋಗಲಿಲ್ಲಿ ಜೊತೆಗೆ ತಮ್ಮ ಇಲಾಖೆಯ ಕೆಲಸಗಳೇ ಬೇಕಾದಷ್ಟು ಇರುವಾಗ ಈ ಹೆಚ್ಚಿನ ಹೊರೆ ಹೊತ್ತುಕೊಳ್ಳಲು ಹೇಗೆ ಸಾಧ್ಯ ಎಂಬುದೇ ಇತರೆ ಇಲಾಖೆಗಳ ಪ್ರಶ್ನೆ ಹೀಗಾಗಿ ಇವುಗಳು ಸ್ವಯಂ ಪ್ರೇರಿತರಾಗಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಶಾಲೆಗೆ ಸೇರಿಸಲು ಮುತುವರ್ಜಿ ವಹಿಸಲಿಲ್ಲ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಅಂತರ್ ಇಲಾಖಾ ಮುಖ್ಯಸ್ಥರ ಮತ್ತು ಉನ್ನತಾಧಿಕಾರಿಗಳ ಸಮಿತಿ ಸಭೆಗಳು ಕೆಲವು ನಡೆದರೂ ಸಭೆಯಲ್ಲಿ ಭಾಗವಹಿಸಿದ್ದ ಗ್ರಾಮೀಣಾಭಿವೃದ್ಧ್ದಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಪೊಲೀಸ್. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧ್ದಿ, ಸಮಾಜ ಕಲ್ಯಾಣ, ಪ.ಜಾತಿ ಮತ್ತು ಪ.ಪಂಗಡ ಮತ್ತು ಅಲ್ಪಸಂಖ್ಯಾಂತ ಇಲಾಖೆಯ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ ತೋಟಗಳಲ್ಲಿ ಮಕ್ಕಳಿಗೆ ಕಾಫಿ. ಕೀಳುವ ಕೆಲಸ ಜೊತೆಗೆ ಮೆಣಸು ಕೀಳುವ ಕೆಲಸಕ್ಕೆ ಮಕ್ಕಳನ್ನು ತಮ್ಮ ಮನೆಯ ಹಿಂಭಾಗದ ರೂಮ್ ಗಳಲ್ಲಿ ಮುಚ್ಚಿಟ್ಟು ಒಂದು ಹೊತ್ತು ಊಟ ಹಾಕಿ ಸಿಕ್ಕಿದಷ್ಟು ಸಂಬಳ ಕೊಟ್ಟು ಸಾಕಿಕೊಳ್ಳುತ್ತಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದ ಶಾಲೆಯ ಶಿಕ್ಷಕರು ತೋಟದ ಮಾಲಕರನ್ನು ವಿಚಾರಿಸಿದರೆ ಸಾರ್ ಜೇನು ಕುರುಬರ ಮಕ್ಕಳು ಬಂದು ಶಾಲೆಯಲ್ಲಿ ಕುಳಿತು ಪಾಠ ಕಲಿತರೆ ನಮ್ಮ ಮನೆಯಲ್ಲಿ ಕೆಲಸ ಮಾಡುವವರು ಯಾರು ಎಂದು ಹಾರಿಕೆಯ ಉತ್ತರವನ್ನು ಕೊಟ್ಟು ಕಳುಹಿಸುತ್ತಾರೆ. ಸರಕಾರ ಈ ವಿಷಯದ ಬಗ್ಗೆ ಗಂಭೀರ ಕ್ರಮ ಕೈ ಗೊಳ್ಳಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X