Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಿರಾಶ್ರಿತರ ಪಾದ ತೊಳೆದ ಪೋಪ್

ನಿರಾಶ್ರಿತರ ಪಾದ ತೊಳೆದ ಪೋಪ್

ವಾರ್ತಾಭಾರತಿವಾರ್ತಾಭಾರತಿ25 March 2016 11:45 PM IST
share
ನಿರಾಶ್ರಿತರ ಪಾದ ತೊಳೆದ ಪೋಪ್

ಕ್ಯಾಸಲ್‌ನುವೊ ಡಿ ಪೋರ್ಟೊ, ಮಾ.25: ಪೋಪ್ ಫ್ರಾನ್ಸಿಸ್ ಅವರು ಪವಿತ್ರ ಗುರುವಾರದಂದು ಇಲ್ಲಿ ಮುಸ್ಲಿಮ್, ಕ್ರಿಶ್ಚಿಯನ್ ಮತ್ತು ಹಿಂದೂ ನಿರಾಶ್ರಿತರ ಪಾದಗಳನ್ನು ತೊಳೆದು ಚುಂಬಿಸಿದರು. ನಾವೆಲ್ಲರೂ ಒಂದೇ ದೇವರ ಮಕ್ಕಳು ಎಂದು ಪೋಪ್ ಈ ಸಂದರ್ಭದಲ್ಲಿ ಘೋಷಿಸಿದರು.

ಬ್ರಸೆಲ್ಸ್ ದಾಳಿಗಳ ಬಳಿಕ ಮುಸ್ಲಿಮ್ ವಿರೋಧಿ ಭಾವನೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಭ್ರಾತೃತ್ವದ ಸಂದೇಶವನ್ನು ಸಾರುವ ಮೂಲಕ ಗಮನ ಸೆಳೆದರು.

ರೋಮ್‌ನ ಹೊರವಲಯದಲ್ಲಿನ ಕ್ಯಾಸಲ್‌ನುವೊ ಡಿ ಪೋರ್ಟೊದಲ್ಲಿನ ನಿರಾಶ್ರಿತರ ಶಿಬಿರದಲ್ಲಿ ಈಸ್ಟರ್ ಸಪ್ತಾಹದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡಿದ್ದ ಪೋಪ್ ಅವರು, ಬ್ರಸೆಲ್ಸ್ ನರಮೇಧವನ್ನು ರಕ್ತಪಿಪಾಸುಗಳು ನಡೆಸಿರುವ ‘ಯುದ್ಧ’ದ ದ್ಯೋತಕವೆಂದು ಖಂಡಿಸಿದರು.

ಪವಿತ್ರ ಗುರುವಾರದಂದು ಯೇಸು ಕ್ರಿಸ್ತರು ಶಿಲುಬೆಗೇರುವ ಮುನ್ನ ತನ್ನ ಶಿಷ್ಯರ ಪಾದಗಳನ್ನು ತೊಳೆದಿದ್ದ ವಿಧಿಯನ್ನು ಪುನರಾವರ್ತಿಸಲಾಗುತ್ತದೆ. ಇದು ಸೇವೆಯ ದ್ಯೋತಕವಾಗಿದೆ. ಇದಕ್ಕೆ ವಿರುದ್ಧವಾಗಿ ಬ್ರಸೆಲ್ಸ್ ದಾಳಿಯು ವಿನಾಶದ ದ್ಯೋತಕವಾಗಿದೆ ಎಂದ ಪೋಪ್, ಅವರು ವಲಸಿಗರು ಪ್ರತಿನಿಧಿಸುತ್ತಿರುವ ಮಾನವತೆಯ ಭ್ರಾತೃತ್ವವನ್ನು ನಾಶಗೊಳಿಸಲು ಬಯಸಿದ್ದಾರೆ ಎಂದರು.

ನಾವು ವಿಭಿನ್ನ ಸಂಸ್ಕೃತಿಗಳು ಮತ್ತು ಧರ್ಮಗಳನ್ನು ಹೊಂದಿದ್ದೇವೆ. ಆದರೆ ನಾವೆಲ್ಲ ಸಹೋದರರಾಗಿದ್ದೇವೆ ಮತ್ತು ಶಾಂತಿಯಿಂದ ಬದುಕಲು ಬಯಸಿದ್ದೇವೆ ಎಂದು ಅವರು ಹೇಳಿದರು.

ಪೋಪ್ ಫ್ರಾನ್ಸಿಸ್ ಅವರು ತಮ್ಮ ಮುಂದೆ ಮಂಡಿಯೂರಿ ಹಿತ್ತಾಳೆಯ ಗಿಂಡಿಯಿಂದ ಪವಿತ್ರ ಜಲವನ್ನು ತಮ್ಮ ಪಾದಗಳ ಮೇಲೆ ಎರೆದು ಅವುಗಳನ್ನು ಸ್ವಚ್ಛಗೊಳಿಸಿದಾಗ ಹಲವಾರು ವಲಸಿಗರು ಕಂಬನಿಗರೆದರು.

ಈ ವಿಧಿಯಲ್ಲಿ ನಾಲ್ವರು ಮಹಿಳೆಯರು ಮತ್ತು ಎಂಟು ಪುರುಷರು ಭಾಗಿಯಾಗಿದ್ದರು. ಮಹಿಳೆಯರು ಕ್ರೈಸ್ತರಾಗಿದ್ದು,ಓರ್ವರು ಇಟಲಿಯವರಾಗಿದ್ದರೆ ಇತರ ಮೂವರು ಇರಿಟ್ರಿಯಾದವರಾಗಿದ್ದರು. ಪುರುಷರಲ್ಲಿ ನೈಜೀರೀಯಾದ ನಾಲ್ವರು ಕ್ರೈಸ್ತರು,ಮಾಲಿ,ಸಿರಿಯಾ ಮತ್ತು ಪಾಕಿಸ್ತಾನದ ತಲಾ ಓರ್ವ ಮುಸ್ಲಿಮರು ಮತ್ತು ಭಾರತದ ಓರ್ವ ಹಿಂದೂ ಸೇರಿದ್ದರು.

ಪ್ರಾರ್ಥನಾ ಸಭೆಗೆ ಪೋಪ್ ನಡೆದು ಬಂದಾಗ ವಿವಿಧ ಭಾಷೆಗಳಲ್ಲಿ ‘ಸುಸ್ವಾಗತ’ ಎಂದು ಬರೆಯಲಾಗಿದ್ದ ಬ್ಯಾನರ್ ಅವರಿಗಾಗಿ ಕಾಯುತ್ತಿತ್ತು. ಆದರೆ ಶಿಬಿರದಲ್ಲಿ ಆಶ್ರಯ ಪಡೆದಿರುವ 892 ನಿರಾಶ್ರಿತರ ಪೈಕಿ ಕೆಲವೇ ಜನರು ಸಭೆಯಲ್ಲಿ ಭಾಗವಹಿಸಿದ್ದು,ಹೆಚ್ಚಿನ ಆಸನಗಳು ಖಾಲಿಯಾಗಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X