Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ: ರಸ್ತೆ ಕಲಹ

ದಿಲ್ಲಿ: ರಸ್ತೆ ಕಲಹ

ಗುಂಪಿನಿಂದ ದಂತ ವೈದ್ಯನ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ25 March 2016 11:54 PM IST
share

ಹೊಸದಿಲ್ಲಿ, ಮಾ.25: ಇಲ್ಲಿ ವಿಕಾಸಪುರಿಯಲ್ಲಿ ಬುಧವಾರ ಮಧ್ಯರಾತ್ರಿಯ ವೇಳೆ ನಡೆದ ರಸ್ತೆ ಘರ್ಷಣೆಯಲ್ಲಿ 40ರ ಹರೆಯದ ದಂತ ವೈದ್ಯರೊಬ್ಬರನ್ನು 12ಕ್ಕೂ ಹೆಚ್ಚಿನ ಜನರು ಹಾಕಿಸ್ಟಿಕ್ ಹಾಗೂ ಕಬ್ಬಿಣದ ಸರಳುಗಳಿಂದ ಥಳಿಸಿ, ಅವರ ನಿವಾಸದೆದುರು ಕೊಂದಿದ್ದಾರೆ.

ಆರೋಪಿಗಳಲ್ಲಿ ಇಬ್ಬರು ಇದಕ್ಕೆ ಮೊದಲು ಮೃತ ಪಂಕಜ್ ನಾರಂಗ್ ಹೆಸರಿನ ದಂತ ವೈದ್ಯನಿಗೆ ತಮ್ಮ ಬೈಕನ್ನು ತಾಗಿಸಿದರು. ಆಗ, ಅವರೊಳಗೆ ವಾಗ್ವಾದ ನಡೆದಿತ್ತು.

ಬುಧವಾರ ಮಧ್ಯರಾತ್ರಿ 12:15ರ ವೇಳೆಗೆ ಇಬ್ಬರು ಬೈಕ್ ಸವಾರರು ನಾರಂಗ್‌ರಿಗೆ ವಾಹನವನ್ನು ಒರೆಸಿದ್ದರು. ಆಗ ಅವರು ಸರಿಯಾಗಿ ಬೈಕ್ ಚಲಾಯಿಸುವಂತೆ ಸವಾರರಿಗೆ ಬುದ್ಧಿ ಹೇಳಿದರು. ಆಗ ನಾರಂಗ್ ಹಾಗೂ ಸವಾರರಿಬ್ಬರ ನಡುವೆ ವಾಗ್ವಾದ ಉಂಟಾಯಿತು. ಅವರು, ಬೈಕನ್ನು ವೈದ್ಯರ ಮನೆಯ ಮುಂದೆಯೇ ಬಿಟ್ಟು ತೆರಳಿ, ಹಾಕಿಸ್ಟಿಕ್ ಹಾಗೂ ಕಬ್ಬಿಣದ ಸರಳುಗಳನ್ನು ಹಿಡಿದಿದ್ದ ಇತರ 13 ಮಂದಿಯೊಂದಿಗೆ ಮರಳಿ ಬಂದರೆಂದು ಪೊಲೀಸರು ವಿವರಿಸಿದ್ದಾರೆ.

ಆ ಬಳಿಕ, ದುಷ್ಕರ್ಮಿಗಳ ಗುಂಪು, ನಾರಂಗ್‌ರಿಗೆ ಹಾಕಿಸ್ಟಿಕ್ ಹಾಗೂ ಸರಳುಗಳಿಂದ ಮತ್ತೆ ಮತ್ತೆ ಥಳಿಸಿತು. ಅವರಿಗೆ ತಲೆ ಸಹಿತ ಇಡೀ ಮೈಗೆ ಗಾಯಗಳಾಗಿ ರಕ್ತ ಸುರಿಯ ಹತ್ತಿತು. ಗುಂಪಿನಲ್ಲಿದ್ದ ಜನರ ಸಂಖ್ಯೆ ಹಾಗೂ ಅವರ ಆಕ್ರೋಶಕ್ಕೆ ಅಂಜಿದ ಮನೆಯವರು ಮಧ್ಯಪ್ರವೇಶಿಸಲು ಹಿಂಜರಿದರು.

ದುಷ್ಕರ್ಮಿಗಳು ಅಲ್ಲಿಂದ ತೆರಳಿದ ಬಳಿಕ ಪೊಲೀಸರನ್ನು ಕರೆಸಲಾಯಿತು. ನಾರಂಗ್‌ರನ್ನು ತಕ್ಷಣ ಆಸ್ಪತ್ರೆಗೆ ಒಯ್ಯಲಾಯಿತಾದರೂ, ಅವರಾಗಲೇ ಕೊನೆಯುಸಿರೆಳೆದಿದ್ದಾರೆಂದು ವೈದ್ಯರು ಘೋಷಿಸಿದರು.

ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರ ಪತ್ತೆಗೆ ಪ್ರಯತ್ನ ನಡೆಯುತ್ತಿದೆ. ಎಲ್ಲ ಆರೋಪಿಗಳನ್ನು ಗುರುತಿಸಲಾಗಿದ್ದು, ಅವರೆಲ್ಲ ಅದೇ ಪ್ರದೇಶದ ಇ-ರಿಕ್ಷಾ ಚಾಲಕರು ಹಾಗೂ ಮೆಕಾನಿಕ್‌ಗಳಾಗಿದ್ದಾರೆಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X