Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೀಫ್ ತಿನ್ನುವುದು ಅಪರಾಧ ಅಲ್ಲ , ಆಹಾರ...

ಬೀಫ್ ತಿನ್ನುವುದು ಅಪರಾಧ ಅಲ್ಲ , ಆಹಾರ ಪದ್ಧತಿ ಬಗ್ಗೆ ಕಾನೂನಿಲ್ಲ : ಮದ್ರಾಸ್ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ26 March 2016 9:04 PM IST
share
ಬೀಫ್ ತಿನ್ನುವುದು ಅಪರಾಧ ಅಲ್ಲ , ಆಹಾರ ಪದ್ಧತಿ ಬಗ್ಗೆ ಕಾನೂನಿಲ್ಲ : ಮದ್ರಾಸ್ ಹೈಕೋರ್ಟ್

" ಭಾರತೀಯ ದಂಡ ಸಂಹಿತೆಯಲ್ಲಿ ಎಲ್ಲಿಯೂ ಮಾಂಸಾಹಾರ ಸೇವನೆ ಅಪರಾಧ ಎಂದು ಹೇಳಿಲ್ಲ. ಯಾವುದೇ ಧರ್ಮದವರ ಆಹಾರ ಪದ್ಧತಿಯ ಬಗ್ಗೆ ಯಾವುದೇ ಕಾನೂನು ಇಲ್ಲ. ಹೀಗಿರುವಾಗ ಬೀಫ್ ತಿನ್ನುವುದು ಅಪರಾಧ ಎಂಬ ಅರ್ಜಿದಾರರ ವಾದವನ್ನು ಒಪ್ಪಲು ಸಾಧ್ಯವಿಲ್ಲ " 
- ಪಳನಿ ದೇವಸ್ಥಾನದ ಸುತ್ತ ಇರುವ ಮುಸ್ಲಿಮರ ಅಂಗಡಿಗಳನ್ನು ತೆಗೆಸಲು ಕೋರಿದ ಅರ್ಜಿ ತಿರಸ್ಕರಿಸಿದ  ತೀರ್ಪಿನ ಸಾಲು 

 

ಚೆನ್ನೈ,ಮಾ.26: ತಮಿಳುನಾಡಿನ ಪ್ರಸಿದ್ಧ ಯಾತ್ರಾಸ್ಥಳ ಪಳನಿ ದೇವಾಲಯದ ಸುತ್ತುಮುತ್ತಲಿನ ಪ್ರದೇಶಗಳಲ್ಲಿ ಇಸ್ಲಾಂ ಮತ್ತಿತರ ಧರ್ಮಗಳಿಗೆ ಸೇರಿದವರ ಅಂಗಡಿಗಳನ್ನು ತೆರವುಗೊಳಿಸಲು ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳನ್ನು ಮದ್ರಾಸ್ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ. ಮುಸ್ಲಿಂ ಮತ್ತಿತರ ಧರ್ಮಗಳಿಗೆ ಸೇರಿದವರು ಗೋಮಾಂಸ ಸೇವಿಸುತ್ತಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅಪಮಾನವುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಮುನ್ನೇತ್ರ ಕಳಗಂ ಅಧ್ಯಕ್ಷ ಗೋಪಿನಾಥ್ ಎಂಬವರು ಪಿಐಎಲ್ ಸಲ್ಲಿಸಿದ್ದರು.ಹಲವು ದಿನಗಳ ಉಪವಾಸ ವ್ರತ ಕೈಗೊಂಡ ಬಳಿಕ ಅನೇಕ ಭಕ್ತರು ಪಳನಿ ದೇಗುಲವಿರುವ ಗಿರಿವಾಳಪಾದೈಗೆ ಆಗಮಿಸುತ್ತಾರೆ. ಆದರೆ ಸುತ್ತಮುತ್ತಲಿರುವ ಅಂಗಡಿಗಳು ಇಸ್ಲಾಂ ಮತ್ತಿತರ ಧರ್ಮೀಯರಿಗೆ ಸೇರಿದ್ದಾಗಿದ್ದು, ಅವರು ಪಳನಿಬೆಟ್ಟದ ಮೆಟ್ಟಲುಗಳಲ್ಲಿ ಕುಳಿತು ಬೀಫ್ ಮತ್ತಿತರ ಮಾಂಸಹಾರಿ ತಿನಸುಗಳನ್ನು ಸೇವಿಸುತ್ತಿರುತ್ತಾರೆ. ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗುತ್ತದೆಯೆಂದು ಅವರು ಆಪಾದಿಸಿದ್ದರು. ಇದನ್ನು ತಡೆಗಟ್ಟದಿದ್ದಲ್ಲಿ ಕೋಮುಸೌಹಾರ್ದತೆ ಹದಗೆಡುವ ಸಾಧ್ಯತೆಯಿದೆಯೆಂದು ಅವರು ಅರ್ಜಿಯಲ್ಲಿ ತಿಳಿಸಿದ್ದರು. ತಮಿಳುನಾಡಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯನ್ನು ಅವರು ಪ್ರತಿವಾದಿಯಾಗಿ ಮಾಡಿದ್ದರು. ಇಂದು ಅರ್ಜಿಯ ಆಲಿಕೆ ನಡೆಸಿದ ನ್ಯಾಯಾಲಯವು ಗಿರಿವಾಳಪಾದೈಗೆ ತಾಗಿಕೊಂಡಿರುವ ದೇಗುಲದ ಜಮೀನಿನಲ್ಲಿ ಇಸ್ಲಾಂ ಮತ್ತಿತರ ಧರ್ಮಗಳವರು ಅಂಗಡಿಗಳನ್ನು ಹೊಂದಿರಬಾರದೆಂಬ ಅರ್ಜಿದಾರರ ವಾದದಲ್ಲಿ ಯಾವುದೇ ಹುರುಳಿಲ್ಲವೆಂದು ಅಭಿಪ್ರಾಯಿಸಿತು. ಅಂಗಡಿಗಳನ್ನು ಹೊಂದಿರುವವವರು ಪಳನಿ ದೇಗುಲವಿರುವ ಬೆಟ್ಟದ ಮೆಟ್ಟಲುಗಳಲ್ಲಿ ಕುಳಿತು ಗೋಮಾಂಸ ಮತ್ತಿತರ ಮಾಂಸಹಾರಗಳನ್ನು ಸೇವಿಸುತ್ತಿದ್ದಾರೆಂಬ ಅರ್ಜಿದಾರರ ವಾದಕ್ಕೆ ಯಾವುದೇ ಪುರಾವೆಯಿಲ್ಲವೆಂದು ನ್ಯಾಯಮೂರ್ತಿಗಳಾದ ಎಸ್.ಮಣಿಕುಮಾರ್ ಹಾಗೂ ಸಿ.ಟಿ.ಸೆಲ್ವನ್ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ.ಮಾಂಸಹಾರ ಸೇವನೆಯು ಅಪರಾಧವೆಂದು ಭಾರತೀಯ ದಂಡಸಂಹಿತೆಯಲ್ಲಿ ಎಲ್ಲೂ ಹೇಳಿಲ್ಲ. ಯಾವುದೇ ಧರ್ಮದವರ ಆಹಾರಸೇವನಾ ಹವ್ಯಾಸಗಳನ್ನು ಆಕ್ಷೇಪಿಸುವ ಯಾವುದೇ ಕಾನೂನು ನಮ್ಮಲ್ಲಿಲ್ಲ. ಗೋಮಾಂಸ ಸೇವನೆ ಅಪರಾಧವೆಂಬ ಅರ್ಜಿದಾರರ ವಾದವನ್ನು ಒಪ್ಪಲು ಸಾಧ್ಯವಿಲ್ಲವೆಂದು ನ್ಯಾಯಾಲಯ ಅಭಿಪ್ರಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X