Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭೂಮಿಯ ಹಕ್ಕುರಾಷ್ಟ್ರೀಕರಣಗೊಳ್ಳಲಿ: ಪೀರ್...

ಭೂಮಿಯ ಹಕ್ಕುರಾಷ್ಟ್ರೀಕರಣಗೊಳ್ಳಲಿ: ಪೀರ್ ಬಾಷಾ

ವಾರ್ತಾಭಾರತಿವಾರ್ತಾಭಾರತಿ26 March 2016 11:53 PM IST
share
ಭೂಮಿಯ ಹಕ್ಕುರಾಷ್ಟ್ರೀಕರಣಗೊಳ್ಳಲಿ: ಪೀರ್ ಬಾಷಾ

ಮಂಗಳೂರು, ಮಾ.26: ಕೇಂದ್ರ ಸರಕಾರವು ಅಂಬೇಡ್ಕರ್ ನೆನಪಿನಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ಅಂಬೇಡ್ಕರ್ ಮಂದಿರ ಅಂಬೇಡ್ಕರ್‌ವಾದವನ್ನು ದಮನ ಮಾಡುವ ಪ್ರಯತ್ನವಾಗಿದೆ. ಅದರ ಬದಲು ಭೂಮಿಯ ಹಕ್ಕನ್ನು ರಾಷ್ಟ್ರೀಕರಣಗೊಳಿಸಿ ಅಂಬೇಡ್ಕರ್‌ರಿಗೆ ಗೌರವ ನೀಡಲಿ ಎಂದು ಹಿರಿಯ ಚಿಂತಕ ಪೀರ್ ಬಾಷಾ ಹೇಳಿದರು.

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯ ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಪ್ರತ್ಯೇಕತೆ ನೀತಿ ಅಧ್ಯಯನ ಸಂಸ್ಥೆ , ಅಂಬೇಡ್ಕರ್ ಅಧ್ಯಯನ ಕೇಂದ್ರವು ನಗರದ ರೋಶನಿ ನಿಲಯಲ್ಲಿ ಆಯೋಜಿಸಿದ ‘ಯುವಜನತೆ ಮತ್ತು ಪ್ರಜಾತಂತ್ರಕ್ಕಾಗಿ ಅಂಬೇಡ್ಕರ್’ ಅಭಿಯಾನದ ದ.ಕ. ಜಿಲ್ಲೆಯ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.ಂಬೇಡ್ಕರ್‌ರ ಮಂದಿರ ನಿರ್ಮಾಣ ದಿಂದ ಅವರ ಭಾವಚಿತ್ರವನ್ನು ತೋರಿ ಸುವ ಪ್ರಯತ್ನವಾಗುತ್ತದೆಯೇ ಹೊರತು ಅಂಬೇಡ್ಕರ್‌ರ ವಾದವನ್ನು ಜಾರಿಗೊಳಿಸಲು ಸಾಧ್ಯವಾಗುವುದಿಲ್ಲ. ಇದರಿಂದ ಅಂಬೇಡ್ಕರ್ ಅವರ ವಿಚಾರಕ್ಕೆ ಬೆಂಬಲ ಕೊಟ್ಟಂತಾಗುವುದಿಲ್ಲ ಎಂದರು.ಚ್ಟ*ಮತಬ್ಯಾಂಕ್ ಆಗಿ ದಲಿತರು: ಪ್ರಸಕ್ತ ಪ್ರಭುತ್ವ ಅಂಬೇಡ್ಕರ್ ವಿಚಾರಧಾರೆಗೆ ಒಪ್ಪದೆ ಕೇವಲ ಭಾವಚಿತ್ರವನ್ನು ತೋರಿಸಿ ದಲಿತ ಸಮುದಾಯವನ್ನು ಮತಬ್ಯಾಂಕ್ ಆಗಿ ಸೃಷ್ಟಿಸಲು ಮಾಡುತ್ತಿರುವ ಪ್ರಯತ್ನ ವಿದಾಗಿದೆ ಎಂದು ಆರೋಪಿಸಿದ ಅವರು, ಆರೆಸ್ಸೆಸ್ ಒಂದು ಕಡೆ ಅಂಬೇಡ್ಕರ್‌ರನ್ನು ಹಿಂದೂ ಧರ್ಮದ ಸುಧಾರಕ ಎಂದು ಹೇಳುತ್ತಿದೆ. ಮತ್ತೊಂದೆಡೆ ಅದರ ಮುಖ್ಯಸ್ಥ ಮೀಸಲಾತಿಯ ಬಗ್ಗೆ ಗೊಂದ ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಅಂಬೇಡ್ಕರ್‌ರ ತಾತ್ವಿಕತೆಗೆ ಚುಚ್ಚುವ ಪ್ರಯತ್ನವಾಗಿದೆ. ಅಂಬೇಡ್ಕರ್ ಹಿಂದೂ ಧರ್ಮವನ್ನು ತ್ಯಜಿಸಿ ಐದು ಲಕ್ಷ ಜನರೊಂದಿಗೆ ಬೌದ್ಧ್ದ ಧರ್ಮವನ್ನು ಸ್ವೀಕರಿಸಿದವರು. ಭಾರತ ಮಾತಾಕೀ ಜೈ ಎನ್ನುವಂತಹ, ರಾಷ್ಟ್ರಭಕ್ತಿ,ದೇಶ, ಧರ್ಮ ಎಂಬ ವಿಚಾರದಲ್ಲಿ ಅನಗತ್ಯ ವಾದಗಳನ್ನು ಮಾಡಲಾಗುತ್ತಿದೆ. ಆದರೆ ಅಂಬೇಡ್ಕರ್ ಅವರು ನನಗೆ ಮಾತೃಭೂಮಿಯೆಂಬುದಿಲ್ಲ. ನಾಯಿಗಿಂತ ಕೀಳಾಗಿ ಕಾಣುವ, ನೀರನ್ನು ಕೊಡದ ಈ ಭೂಮಿಯನ್ನು ಮಾತೃಭೂಮಿ ಯೆಂದು ಹೇಗೆ ಹೇಳಲೆಂದು ಕೇಳಿದ್ದರು ಎಂದರು.
ಪ್ರಸಕ್ತ ಅಂಬೇಡ್ಕರ್ ವಿಚಾರದ ಆಧಾರದಲ್ಲಿ ಹುಟ್ಟಿಕೊಳ್ಳಬೇಕಾದ ಚಳವಳಿ ಬರಲಿಲ್ಲ. ಲೋಹಿಯಾರಲ್ಲಿಯೂ ಅಂಬೇಡ್ಕರ್ ಬಗ್ಗೆ ಅನುಮಾನಗಳು ಇತ್ತು. ಕರ್ನಾಟಕದ ದಲಿತ ಚಿಂತಕರು ಅಂಬೇಡ್ಕರ್‌ವಾದಿಗಳಾಗದೆ ಕೇವಲ ಗಾಂಧಿವಾದಿಗಳಾಗಿದ್ದಾರೆ. ದಲಿತ ಚಿಂತಕರು ಗಾಂಧಿವಾದದಿಂದ, ಲೋಹಿ ಯಾವಾದದವರೆಗೆ ಬರುತ್ತಾರೆ. ಆದರೆ ಅಂಬೇಡ್ಕರ್ ವಾದದತ್ತ ಬರುವುದಿಲ್ಲ. ಈ ಕಾರಣದಿಂದಲೇ ರಾಜ್ಯದಲ್ಲಿ ದಲಿತ ಚಳವಳಿಯನ್ನು ಪರಿಣಾಕಾರಿಯಾಗಿ ಕಟ್ಟಲು ಸಾಧ್ಯವಾಗಿಲ್ಲ ಎಂದು ಹೇಳಿದರು.ಾರ್ಯಕ್ರಮವನ್ನು ವಿವಿಧ ಶಾಲೆಯ ವಿದ್ಯಾರ್ಥಿಗಳು ಸಂವಿಧಾನದ ಮುನ್ನುಡಿಯನ್ನು ಓದುವ ಮೂಲಕ ಉದ್ಘಾ ಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಎನ್ನೆಸ್ಸೆಸ್ ಸಂಯೋಜಕಿ ವಿನೀತಾ ರೈ ವಹಿಸಿದ್ದರು.
ಕಾರ್ಯಕ್ರಮ ಸಂಯೋಜಕರಾದ ಮನ್‌ಜಿತ್, ಡಾ.ವಾಸುದೇವ ಬೆಳ್ಳೆ, ಆಶಾಲತಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X