ಎಸಿಬಿಯಿಂದ ಪಕ್ಷಕ್ಕೆ ಹಾನಿ: ಪೂಜಾರಿ
ಉಡುಪಿ, ಮಾ.26: ಭ್ರಷ್ಟಾಚಾರ ನಿಗ್ರಹ ದಳ ರಚನೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಹಾನಿಯಾಗಲಿದೆ ಮತ್ತು ಮುಖ್ಯಮಂತ್ರಿಯ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಗಿದೆ. ಇನ್ನೂ ಕಾಲ ಮಿಂಚಿಲ್ಲ. ಸಿದ್ದರಾಮಯ್ಯ ಪಕ್ಷ ಹಾಗೂ ಜನರ ಹಿತದೃಷ್ಟಿಯಿಂದ ಕೂಡಲೇ ಭ್ರಷ್ಟಾಚಾರ ನಿಗ್ರಹ ದಳವನ್ನು ಹಿಂದೆಗೆದುಕೊಳ್ಳಬೇಕು ಎಂದು ಕಾಂಗ್ರೆಸನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ನಿಗ್ರಹ ದಳ ರಚನೆಯ ಮೂಲಕ ಲೋಕಾಯುಕ್ತವನ್ನು ದುರ್ಬಲಗೊಳಿಸಲ್ಲ ಎಂಬ ಮುಖ್ಯಮಂತ್ರಿಯವರ ಮಾತು ಎಷ್ಟು ಸಮಂಜಸ?. ಸಂವಿಧಾನದ ಪ್ರಕಾರ ಒಬ್ಬ ಆರೋಪಿಯನ್ನು ಒಂದಕ್ಕಿಂತ ಹೆಚ್ಚು ಸಲ ವಿಚಾರಣೆಗೆ ಗುರಿಪಡಿಸಲು ಸಾಧ್ಯವಿಲ್ಲ. ಹಾಗಾಗಿ ಯಾವುದೇ ಒಬ್ಬ ವ್ಯಕ್ತಿಯ ವಿರುದ್ಧ ಲೋಕಾಯುಕ್ತ ಹಾಗೂ ಭ್ರಷ್ಟಾಚಾರ ನಿಗ್ರಹ ದಳಗಳಿಗೆ ದೂರು ನೀಡಿದರೆ ಆತನನ್ನು ಎರಡು ಸಲ ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಹರೀಶ ಕಿಣಿ ಉಪಸ್ಥಿತರಿದ್ದರು.
Next Story