Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಕರಾವಳಿ ಜಲ ಸಂವರ್ಧನಾ...

ಮಂಗಳೂರು: ಕರಾವಳಿ ಜಲ ಸಂವರ್ಧನಾ ಪ್ರಾಧಿಕಾರ ರಚನೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 March 2016 9:17 PM IST
share

ಮಂಗಳೂರು ,ಮಾ.27:ಕರಾವಳಿ ಜಿಲ್ಲೆಯ ಕುಡಿಯುವ ನೀರಿನ ಸಂರಕ್ಷಣೆ, ಸಂವರ್ಧನೆಗಾಗಿ ವಿಧಾನ ಸಭೆಯಲ್ಲಿ ಕಾನೂನು ಪ್ರಕಾರವಾಗಿ ‘ಕರಾವಳಿ ಜಲ ಸಂವರ್ಧನಾ ಪ್ರಾಧಿಕಾರ’ವನ್ನು ಸರಕಾರ ರಚನೆ ಮಾಡಬೇಕು ಎಂದು ಹಿರಿಯ ನೀರಾವರಿ ತಜ್ಞ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ವಿ.ವಿ. ಭಟ್ ಒತ್ತಾಯಿಸಿದ್ದಾರೆ. ನಗರದಲ್ಲಿ ಇಂದು ನೇತ್ರಾವತಿ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕರಾವಳಿಗೆ ಆತಂಕವಾಗಿರುವ ಎತ್ತಿನಹೊಳೆ ಯೋಜನೆ ವಿರೋಧಿಸಿ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ಸುಪ್ರೀಂ ಕೋರ್ಟ್ ವರೆಗೆ ಹೋಗುವ ಅವಕಾಶಗಳಿವೆ. ಆದರೆ ಜಲ ಪ್ರಾಧಿಕಾರ ರಚನೆಯಿಂದ ಈ ಭಾಗದ ನೀರಿನ ಸಮಸ್ಯೆಗಳಿಗೆ ಪರಿಹಾರ ಸಿಗುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ಅಮೆರಿಕಾ ಸೇರಿದಂತೆ ಜಗತ್ತಿನ ನಾನಾ ರಾಷ್ಟ್ರಗಳಲ್ಲಿ ಜಲ ಪ್ರಾಧಿಕಾರ ರಚನೆಯಾಗಿದೆ. ನಮ್ಮಲ್ಲಿ ಗಂಗಾ ನದಿ ಪ್ರಾಧಿಕಾರ, ಕಾವೇರಿ ನದಿ ರಕ್ಷಣೆಗೂ ಪ್ರಾಧಿಕಾರ ರಚಿಸಲಾಗಿತ್ತು. ಅಂತಾರಾಷ್ಟ್ರೀಯ ನೀರಿನ ವರದಿ ಪ್ರಕಾರ ನೀರಿನ ಮೂಲದ ರಕ್ಷಣೆಗೆ ವಿಶೇಷ ಒತ್ತು ನೀಡಬೇಕಾಗಿದೆ. ಈ ನಿಟ್ಟಿಲ್ಲಿ ಪ್ರಾಧಿಕಾರ ಅಗತ್ಯ ಎಂದರು. ಹಿರಿಯ ನೀರಾವರಿ ತಜ್ಞ ಪ್ರೊ. ಎಸ್.ಜಿ.ಮಯ್ಯ ಮಾತನಾಡಿ, ಎತ್ತಿನಹೊಳೆಯಲ್ಲಿ ನೀರು ಲಭಿಸುವುದಿಲ್ಲ ಎಂಬುವುದು ಸರಕಾರಕ್ಕೆ ಮನವರಿಕೆ ಆಗಿದೆ. ಈ ಹಿನ್ನೆಲೆಯಿಂದ ಶರಾವತಿ, ಉಪ್ಪಿನಂಗಡಿಯವರೆಗೂ ಸರಕಾರ ಕಣ್ಣು ಇಟ್ಟಿದೆ. ನಮ್ಮ ನೀರಿನ ಅವಶ್ಯಕತೆ ಕುರಿತು ಇಲ್ಲಿನ ಜನಪ್ರತಿನಿಧಿಗಳು ಪರಿಣಾಮಕಾರಿಯಾಗಿ ಮಾತನಾಡುತ್ತಿಲ್ಲ. ಇಲ್ಲಿ ರಾಜಕೀಯ ಮೇಲಾಟ ನಡೆಯುತ್ತಿದೆ. ಹಿಂದೆ ಅವರು ಮಾಡಿದರು ಎಂದು ಇಂದಿನವರು ದೂರುತ್ತಿದ್ದಾರೆ. ಅವರು ಮಾಡಿದ ತಪ್ಪನ್ನು ಎಲ್ಲರು ಜತೆ ಸೇರಿ ಸರಿ ಮಾಡಲು ಯಾಕೆ ಮುಂದಾಗುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಕರಾವಳಿ ಭಾಗದ ಜನಪ್ರತಿನಿಧಿಗಳ ಸಂಖ್ಯೆ ಕಡಿಮೆ ಇರುವುದರಿಂದ ವಿಧಾನ ಸಭೆಯಲ್ಲಿ ನಮ್ಮ ಧ್ವನಿ ಕಡಿಮೆ ಆಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕಾಗಿ ಕರಾವಳಿಗೆ ಪ್ರತ್ಯೇಕ ರಾಜ್ಯವನ್ನೇ ಕೊಡಿ ಎಂಬ ಆಗ್ರಹವನ್ನು ಮಾಡುವ ಅಗತ್ಯವಿದೆ ಎಂದು ಪ್ರೊ. ಮಯ್ಯ ಹೇಳಿದರು.

ನೇತ್ರಾವತಿ ಹೋರಾಟ ಸಮಿತಿ ಮುಖಂಡರಾದ ಎಂ.ಜಿ.ಹೆಗಡೆ ,ಪುರುಷೋತ್ತಮ ಚಿತ್ರಾಪುರ, ಶಶಿರಾಜ್ ಶೆಟ್ಟಿ ಕೊಳಂಬೆ, ರಾಮಚಂದ್ರ ಬೈಕಂಪಾಡಿ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X