Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆನೆಕಾಲು ರೋಗ ಜಾಗೃತಿ ಕಾರ್ಯಕ್ರಮ

ಆನೆಕಾಲು ರೋಗ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 March 2016 10:12 PM IST
share
ಆನೆಕಾಲು ರೋಗ ಜಾಗೃತಿ ಕಾರ್ಯಕ್ರಮ

ಶಿಕಾರಿಪುರ, ಮಾ.27: ಸೊಳ್ಳೆಗಳಿಂದ ತೀವ್ರಗತಿಯಲ್ಲಿ ಹರಡಲಿರುವ ಆನೆಕಾಲು ರೋಗದ ನಿಯಂತ್ರಣಕ್ಕೆ ಚರಂಡಿಯಲ್ಲಿ ನೀರು ನಿಲ್ಲದಂತೆ, ಕೊಳಚೆ ಪ್ರದೇಶ ನಿರ್ಮಾಣವಾಗದಂತೆ ಎಚ್ಚರವಹಿಸುವಂತೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕುಮಾರಸ್ವಾಮಿ ಕರೆ ನೀಡಿದರು.

ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಆನೆಕಾಲು ರೋಗ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉಚ್ಚಲೇರಿಯ ಕ್ಯೂಲೆಕ್ಸ್ ಎಂಬ ಸೊಳ್ಳೆಯು ವ್ಯಕ್ತಿಗೆ ಕಚ್ಚುವುದರಿಂದ ಆನೆಕಾಲು ರೋಗ ಹರಡಲಿದ್ದು. ಸೊಳ್ಳೆಗಳ ನಿರ್ಮೂಲನೆ ರೋಗದ ನಿಯಂತ್ರಣಕ್ಕೆ ಅತ್ಯವಶ್ಯಕವಾಗಿದೆ ಎಂದರು.

ಸಾಮಾನ್ಯವಾಗಿ ಸೊಳ್ಳೆಗಳು ಹೆಚ್ಚಾಗಿ ಮನುಷ್ಯನಿಗೆ ಸಂಜೆ ವೇಳೆಯಲ್ಲಿ ಕಚ್ಚಲಿದ್ದು, ಈ ಅವಧಿಯಲ್ಲಿಯೇ ಆರೋಗ್ಯ ಇಲಾಖೆಯ ಸಿಬ್ಬಂದಿ ತಂಡ ರಾತ್ರಿ 8ರಿಂದ 11ರವರೆಗೆ ಮನೆ ಮನೆ ಸಮೀಕ್ಷೆಗೆ ತಾಲೂಕಿನ ಕೆಲ ಆಯ್ದ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ ಎಂದ ಅವರು, ಇದೇ 28 ಹಾಗೂ 29ರಂದು ಚಿಕ್ಕಜೋಗಿಹಳ್ಳಿ ಹಾಗೂ ಗಾಮ ಗ್ರಾಮದಲ್ಲಿ ನಡೆಯಲಿರುವ ರಕ್ತ ಲೇಪನ ಸಂಗ್ರಹ ಸಮೀಕ್ಷಾ ಕಾರ್ಯಕ್ಕೆ ಗ್ರಾಮಸ್ಥರು ಸಂಪೂರ್ಣ ಸಹಕಾರವನ್ನು ಸಿಬ್ಬಂದಿಗೆ ನೀಡುವಂತೆ ಮನವಿ ಮಾಡಿದರು.

 ಚರಂಡಿ ಹಾಗೂ ಕೊಳಚೆ ಪ್ರದೇಶ ಸೊಳ್ಳೆಗಳ ಉತ್ಪತ್ತಿಯ ಬಹು ಮುಖ್ಯ ತಾಣವಾಗಿದ್ದು,ಮನೆ ಸುತ್ತಮುತ್ತ ನೀರು ನಿಲ್ಲದಂತೆ ಸರಾಗವಾಗಿ ಹರಿಯಲು ವ್ಯವಸ್ಥೆ ಕಲ್ಪಿಸಿ ಪರಿಸರ ಸ್ವಚ್ಛತೆಯಿಂದ ಹಲವು ರೋಗಗಳನ್ನು ತಡೆಗಟ್ಟಬಹುದಾಗಿದೆ ಎಂದರು.

ದಲಿತ ಸಂಘರ್ಷ ಸಮಿತಿಯ ತಾಲೂಕು ಅಧ್ಯಕ್ಷ ಜಗದೀಶ ಮಾತನಾಡಿ, ಶಿಕಾರಿಪುರ ಹಾಗೂ ಚುರ್ಚುಗುಂಡಿ ಗ್ರಾಮದಲ್ಲಿ ದಪ್ಪಗಾತ್ರದ ಆನೆಕಾಲು ರೋಗದ ಶಂಕಿತ ವ್ಯಕ್ತಿಗಳಿದ್ದು, ರಕ್ತ ಲೇಪನ ಸಂಗ್ರಹ ಸಮೀಕ್ಷಾ ಕಾರ್ಯ ಕೇವಲ ಎರಡು ಗ್ರಾಮಗಳಿಗೆ ಮಾತ್ರ ಸೀಮಿತವಾಗಿಸದೆ ತಾಲೂಕಿನಾದ್ಯಂತ ಇಲಾಖೆ ಹಮ್ಮಿಕೊಂಡು ಉಚಿತ ಚಿಕಿತ್ಸೆ ಮೂಲಕ ರೋಗ ಪೂರ್ಣ ತಡೆಗಟ್ಟಲು ಕ್ರಮಕ್ಕೆ ಆಗ್ರಹಿಸಿ ಆರೋಗ್ಯ ಇಲಾಖೆಗೆ ಸ್ಥಳೀಯ ಸಂಘ ಸಂಸ್ಥೆಗಳು ಪೂರಕವಾಗಿ ಸಹಕರಿಸಲಿದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ ನಾಗಲೀಕರ್ ಮಾತನಾಡಿ, ಆನೆಕಾಲು ರೋಗದ ನಿಯಂತ್ರಣಕ್ಕೆ ಡಿಇಸಿ ಮಾತ್ರೆಗಳು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ದಾಸ್ತಾನು ಹೆಚ್ಚಿದ್ದು , ವಯೋಮಾನಕ್ಕನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುವುದು ಎಂದ ಅವರು, ಗರ್ಭಿಣಿಯರು, ವಯೋವೃದ್ಧರು,ದೀರ್ಘ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವವರು ಡಿಇಸಿ ಮಾತ್ರೆ ಸೇವಿಸದಂತೆ ತಿಳಿಸಿದರು.

ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎ ಅತ್ತಾರ್ ಸೊಳ್ಳೆಗಳ ನಿಯಂತ್ರಣ, ಸುರಕ್ಷತಾ ಕ್ರಮದ ಬಗ್ಗೆ ವಿವರವಾಗಿ ತಿಳಿಸಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂ.ವೈ ಪೂಜಾರ್ ಮಾತನಾಡಿ, ಕಾಯಿಲೆಯ ಲಕ್ಷಣ, ಕೈಕಾಲು ಊತ, ಸ್ತನ, ವೃಷಣದ ಗಾತ್ರ ಹೆಚ್ಚಾಗುವುದು, ತೀವ್ರ ಜ್ವರ, ನೋವು ಹಾಗೂ ಚಿಕಿತ್ಸೆಯ ಬಗ್ಗೆ ತಿಳಿಸಿದರು.

ಪ್ರಾ.ಆ.ಕೇ ವೈದ್ಯಾಧಿಕಾರಿ ಡಾ.ರಾಜಪ್ಪ ಅಧ್ಯಕ್ಷತೆ ವಹಿಸಿದರು.

ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಜಯಪ್ಪ,ಗ್ರಾಪಂ ಮಾಜಿ ಸದಸ್ಯ ಲೋಕೇಶಪ್ಪ, ಪಾಲಾಕ್ಷಮ್ಮ, ಶಾಂತಣ್ಣ, ಕಲವೀರಪ್ಪ, ಪ್ರಕಾಶ್, ರಾಜು ಅಂಗಡಿ ಆರೋಗ್ಯ ಇಲಾಖೆಯ ಪಾಂಡು, ರಾಜುಗೌಡ, ಗೌರಮ್ಮ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

  ಗಾಯತ್ರಿ, ಸುಮಾ ಪ್ರಾರ್ಥಿಸಿ, ಚಂದ್ರಾ ನಾಯ್ಕ ಸ್ವಾಗತಿಸಿ, ಗೀತಾ ನಿರೂಪಿಸಿ, ಕವಿತಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X