Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ 27 ವಿಮಾನ ನಿಲ್ದಾಣಗಳಿಗೆ...

ಭಾರತದ 27 ವಿಮಾನ ನಿಲ್ದಾಣಗಳಿಗೆ ಸಿಐಎಸ್‌ಎಫ್ ಭದ್ರತೆಯಿಲ್ಲ!

ವಾರ್ತಾಭಾರತಿವಾರ್ತಾಭಾರತಿ27 March 2016 11:39 PM IST
share

ಹೊಸದಿಲ್ಲಿ, ಮಾ.27: ಬ್ರಸೆಲ್ಸ್‌ನ ಝವೆಂಟಂ ವಿಮಾನ ನಿಲ್ದಾಣದಲ್ಲಿ ನಡೆದ ಭಯೋತ್ಪಾದಕ ದಾಳಿಯು ವಿಮಾನ ನಿಲ್ದಾಣಗಳ ಭದ್ರತೆಯ ಕುರಿತು ಹೊಸ ಕಳವಳವನ್ನು ಮುನ್ನೆಲೆಗೆ ತಂದಿದೆ. ಭಾರತವು ನಿಧಿಯ ಅಭಾವದಿಂದಾಗಿ ಕಳೆದ 5 ವರ್ಷಗಳಿಂದ 2 ಡಜನ್‌ಗೂ ಹೆಚ್ಚು, ಅಂತಹ ಸೂಕ್ಷ್ಮ ಸೌಲಭ್ಯಗಳಿಗೆ ವಿಶೇಷ ಸಿಐಎಸ್‌ಎಫ್ ಭದ್ರತೆಯನ್ನು ಒದಗಿಸಿಲ್ಲವೆಂದು ಭದ್ರತಾ ಸಂಸ್ಥೆಗಳ ವರದಿಯೊಂದು ತಿಳಿಸಿದೆ. ಭಾರತೀಯ ಮೀಸಲು ಬೆಟಾಲಿಯನ್ (ಐಆರ್‌ಬಿ) ಅಥವಾ ರಾಜ್ಯ ಪೊಲೀಸ್ ಘಟಕಗಳಂತಹ ಇತರ ಭದ್ರತಾ ಪಡೆಗಳಿಂದ ರಕ್ಷಿಸಲ್ಪಡುತ್ತಿವೆ. ಅಧಿಕೃತ ಸಿಐಎಸ್‌ಎಫ್ ಭದ್ರತಾ ದಳವನ್ನು ಹೊರಗಿಡಲಾಗಿದೆ.

ಸಾರಿಗೆ, ಪ್ರವಾಸೋದ್ಯಮ ಹಾಗೂ ಸಂಸ್ಕೃತಿಗಳ ಕುರಿತಾದ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ ವರದಿಯೊಂದು, ಈ ವರ್ಷದ ಆರಂಭದಲ್ಲಿ ತನ್ನ ಕಳವಳವ್ಯಕ್ತಪಡಿಸಿತ್ತು. ನಮ್ಮ 8 ಅತೀ ಸೂಕ್ಷ್ಮ ಹಾಗೂ 19 ಸೂಕ್ಷ್ಮ ವಿಮಾನ ನಿಲ್ದಾಣಗಳಲ್ಲಿ ವಾಯು ಯಾನ ಕ್ಷೇತ್ರಗಳಲ್ಲಿ ಈಗಿರುವ ಏಕೈಕ ವಿಶೇಷ ದಳವಾದ ಸಿಐಎಸ್‌ಎಫ್‌ನ ಭದ್ರತೆ ಇರುವುದಿಲ್ಲವೆಂದು ತಿಳಿದು ಭಯವಾಗಿದೆಯೆಂದು ಅದು ಹೇಳಿತ್ತು.
ಸುಮಾರು 1.42 ಸಿಬ್ಬಂದಿ ಬಲದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳವು ವಿಮಾನಯಾನ ಭದ್ರತಾ ಗುಂಪು (ಎಎಸ್‌ಜಿ) ಎಂಬ ತನ್ನ ಸಂಸ್ಥಾಪನೆಯಲ್ಲಿ ನಿಷ್ಠಾವಂತ ಹಾಗೂ ತರಬೇತಿ ಹೊಂದಿದ ಘಟಕವನ್ನು ಇದಕ್ಕಾಗಿಯೇ ರಚಿಸಿದೆ. ಅದರಲ್ಲಿ, ಹೆಚ್ಚುವರಿ ಮಹಾ ನಿರ್ದೇಶಕರ ಮಟ್ಟದ ಅಧಿಕಾರಿಯ ನೇತೃತ್ವದಲ್ಲಿ ಸುಮಾರು 22 ಸಾವಿರ ಪುರುಷ ಹಾಗೂ ಮಹಿಳಾ ಕಮಾಂಡೊಗಳಿದ್ದಾರೆ.
ಇಂಡಿಯನ್ ಏರ್‌ಲೈನ್ಸ್‌ನ ಐಸಿ-814 ವಿಮಾನಾಪಹರಣದ ಬಳಿಕ, 2010ರಲ್ಲಿ ಜೈಪುರ ವಿಮಾನ ನಿಲ್ದಾಣದಲ್ಲಿ ಮೊತ್ತ ಮೊದಲ ಬಾರಿ ಎಎಸ್‌ಜಿಯನ್ನು ಭದ್ರತೆಗಾಗಿ ನೇಮಿಸಲಾಗಿತ್ತು. ಕೊನೆಯ ಎಎಸ್‌ಜಿಯನ್ನು 2011ರಲ್ಲಿ ದಿಯು ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾಗಿತ್ತು.
ಸಿಐಎಸ್‌ಎಫ್ ಹಾಗೂ ಗುಪ್ತಚರ ಸಂಸ್ಥೆಗಳು ಇತ್ತೀಚೆಗೆ ಸಿದ್ಧಪಡಿಸಿರುವ ವರದಿಯೊಂದು, ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಬೇಕೆಂಬ ಸಂಸದೀಯ ಸ್ಥಾಯಿ ಸಮಿತಿಯ ಅಭಿಪ್ರಾಯಕ್ಕೆ ಒತ್ತು ನೀಡಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X