Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ನಿದ್ದೆಗೆಡುವುದರಿಂದ ನಿಮ್ಮ ಮೆದುಳಿಗೆ...

ನಿದ್ದೆಗೆಡುವುದರಿಂದ ನಿಮ್ಮ ಮೆದುಳಿಗೆ ಅಪಾಯ!

ವಾರ್ತಾಭಾರತಿವಾರ್ತಾಭಾರತಿ29 March 2016 10:48 AM IST
share
ನಿದ್ದೆಗೆಡುವುದರಿಂದ ನಿಮ್ಮ ಮೆದುಳಿಗೆ ಅಪಾಯ!

ಪ್ರತಿಯೊಬ್ಬರೂ ಬ್ಯುಸಿಯಾಗಲು ಏನಾದರೂ ಒಂದು ಕಾರಣವಿರುತ್ತದೆ. ಆದರೆ ಸಾಮಾನ್ಯವಾಗಿ ಮಾಡಬೇಕಾಗಿರುವುದೆಲ್ಲವನ್ನೂ ಮಾಡಲು ಎಚ್ಚರವಾಗಿರುವ ಸಮಯ ಸಾಕಾಗುವುದಿಲ್ಲ. ವಿದ್ಯಾರ್ಥಿಗಳು, ಉದ್ಯಮಿಗಳು ಮತ್ತು ಮನೆಯಲ್ಲಿಯೇ ಇರುವವವರೂ ಸಹ ನಿದ್ದೆಯ ಸಮಯವನ್ನು ಕಡಿತಗೊಳಿಸುತ್ತಾರೆ. ಇದರಿಂದ ಕೆಲವು ಉತ್ತಮ ಫಲ ಸಿಗಬಹುದಾದರೂ ನಿದ್ದೆಯ ಕೊರತೆ ಆರೋಗ್ಯಕಾರಿಯಲ್ಲ. ನಿದ್ದೆಯ ಕೊರತೆ ನಿಮ್ಮ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನೀವು ಮಂದಗತಿಯವರಾಗುತ್ತೀರಿ ಮತ್ತು ತೂಕದಲ್ಲಿ ಏರಿಳಿತವಾಗುತ್ತದೆ. ಮಧುಮೇಹ ಮೊದಲಾದ ರೋಗಗಳೂ ಬರಬಹುದು.


ಬೇಗ ಮುಪ್ಪಾಗುವುದು

ಕೊಬ್ಬು ಮತ್ತು ಮಾರಕ ರೋಗಗಳ ಹೊರತಾಗಿ ನಿದ್ದೆಯ ಕೊರತೆಯಿಂದ ಬರುವ ಸಾಮಾನ್ಯ ಸಮಸ್ಯೆಯೆಂದರೆ ಬುದ್ಧಿ ಮಾಂದ್ಯತೆ. ಈ ಅಭ್ಯಾಸ ಧೀರ್ಘ ಕಾಲ ಇದ್ದರೆ ಬೇಗನೇ ಮರಣ ಬರಬಹುದು. ಚಯಾಪಚಯ ಸರಿಯಾಗಿ ಕೆಲಸ ಮಾಡದೆ ಬೇಗನೇ ಮುಪ್ಪು ಬರಬಹುದು.

ಮೆದುಳಿನ ಪ್ರಕ್ರಿಯೆಯಲ್ಲಿ ದೋಷ


ಸರಿಯಾಗಿ ನಿದ್ದೆಯಿಲ್ಲದಿದ್ದರೆ ಮೆದುಳಿನ ಕಾರ್ಯದಲ್ಲಿ ದೋಷ ಕಾಣಬಹುದು. ಏಕೆಂದರೆ ಫ್ರಂಟಲ್ ಲೋಬ್‌ಗೆ ಸಾಕಷ್ಟು ರಕ್ತ ಪರಿಚಲನೆಯಾಗುವುದಿಲ್ಲ. ಹೀಗಾಗುತ್ತಲೇ ನಿಮ್ಮ ಮೆದುಳಿನ ಅಲೆಗಳು ನಿಧಾನವಾಗುತ್ತದೆ. ನಿರ್ಧಾರ ಕೈಗೊಳ್ಳುವುದರ ಮೇಲೆ ಪರಿಣಾಮ ಬೀರಿ ಸ್ಪಷ್ಟವಾಗಿ ಯೋಚಿಸುವುದು ಸಾಧ್ಯವಾಗುವುದಿಲ್ಲ.

ಕೊಳಕು ಮೆದುಳು


ಸಕ್ರಿಯ ಮೆದುಳು ಎಂದರೆ ಬ್ಯುಸಿಯಾಗಿರುವ ಯಂತ್ರದ ಹಾಗೆ. ಬೇಗನೇ ಕೊಳಕಾಗುತ್ತದೆ. ಹೀಗಾಗಿ ಕೊಳೆಯನ್ನು ತೆಗೆಯಲು ನಿದ್ದೆ ಅವಶ್ಯಕ. ನಿದ್ದೆಯಿಂದ ಸೆರೆಬ್ರೊಸ್ಪಿನಲ್ ಫ್ಲೂಯಿಡ್ ಕೊಳೆ ನಿವಾರಿಸುತ್ತದೆ. ಸರಿಯಾಗಿ ನಿದ್ದೆ ಬಾರದೆ ಇದ್ದಲ್ಲಿ ನಿಮ್ಮ ಮೆದುಳು ಕೊಳಕು ತುಂಬಿಕೊಂಡರೆ ಆರೋಗ್ಯಕಾರಿ ಎನ್ನಲು ಸಾಧ್ಯವಿಲ್ಲ.

ಒತ್ತಡ ದ್ವಿಗುಣ


ನೀವು ಸುಸ್ತಾದಾಗ ಮತ್ತು ನಿದ್ದೆ ಬಂದಂತಿದ್ದರೆ ನಿಮ್ಮ ನಿತ್ಯದ ಕಾರ್ಯಗಳಾಗಿರುವ ನಾಯಿಯ ಜೊತೆ ನಡೆಯುವುದು, ಸಾಮಾನು ಸರಂಜಾಮು ತರುವುದು, ಮನೆಗೆ ವಾಹನ ಚಲಾಯಿಸುವುದು ಮೊದಲಾದ ಕೆಲಸವೇ ಸುಸ್ತು ಹೊಡೆಸಬಹುದು. ನಿಮ್ಮ ಒತ್ತಡದ ಸಹಿಷ್ಣುತೆ ಇಳಿಕೆಯಾಗಿ ಖಿನ್ನತೆಗೆ ಕಾರಣವಾಗಬಹುದು.


ನಿದ್ದೆಗೆ ಸಾಕಷ್ಟು ಗಮನ ಕೊಡದವರು ನೀವಾಗಿದ್ದರೆ ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಅಪಾಯಕ್ಕೆ ಹಾಕುತ್ತೀರಿ. ಜಾಗ್ರತೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X