Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಯಿ ಬೊಗಳಿದ್ದಕ್ಕೆ ಜಗಳ, ಯುವಕನ...

ನಾಯಿ ಬೊಗಳಿದ್ದಕ್ಕೆ ಜಗಳ, ಯುವಕನ ಕೊಲೆಯಲ್ಲಿ ಅಂತ್ಯ

ಸಾರ್ವಜನಿಕ ಕ್ರಿಕೆಟ್ ಪಂದ್ಯ ವೀಕ್ಷಣೆ ಆಯೋಜಿಸಿದ್ದ ಕುಟುಂಬಕ್ಕೆ ಭಾರೀ ಆಘಾತ

ವಾರ್ತಾಭಾರತಿವಾರ್ತಾಭಾರತಿ29 March 2016 11:08 AM IST
share
ನಾಯಿ ಬೊಗಳಿದ್ದಕ್ಕೆ ಜಗಳ, ಯುವಕನ ಕೊಲೆಯಲ್ಲಿ ಅಂತ್ಯ

ಬೆಂಗಳೂರು : ನಗರದ ಜೆಸಿ ನಗರ ಪ್ರದೇಶದಲ್ಲಿ ರವಿವಾರ ರಾತ್ರಿ ನಡೆದ ಭಾರತ-ಆಸ್ಟ್ರೇಲಿಯಾ ಟಿ-20 ಪಂದ್ಯದ ಸಾರ್ವಜನಿಕ ವೀಕ್ಷಣೆಯನ್ನು ಆಯೋಜಿಸಿದ್ದ ಕುಟುಂಬ ಆ ರಾತ್ರಿ ನಾಯಿ ಬೊಗಳಿದ ವಿಚಾರದಲ್ಲುಂಟಾದ ಜಗಳ ಕೊಲೆಯಲ್ಲಿ ಪರ್ಯವಸಾನವಾಗಿ ತನ್ನ ಯುವ ಸದಸ್ಯನನ್ನು ಕಳೆದುಕೊಂಡು ದು:ಖದ ಮಡುವಿನಲ್ಲಿ ಮುಳುಗುವಂತಾಗಿದೆ. ಕೊಲೆಗೀಡಾದ ಯುವಕನನ್ನು 23 ವರ್ಷದ ಅವಿನಾಶ್ ಜೊನಾಥನ್ ಎಂದು ಗುರುತಿಸಲಾಗಿದೆ.

ಆತ ಬಿಷಪ್ ಕಾಟನ್ ಕಾಲೇಜಿನಲ್ಲಿ ಬಿ.ಕಾಂ ವಿದ್ಯಾರ್ಥಿಯಾಗಿದ್ದು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವಿನಾಶ್ ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.ಆ ದಿನ ರಾತ್ರಿ ಅವಿನಾಶ್ ಕುಟುಂಬ ಹಾಗೂ ನೆರೆಹೊರೆಯವರು ಮ್ಯಾಚ್ ನೋಡುವುದರಲ್ಲಿ ತಲ್ಲೀನರಾಗಿದ್ದಾಗ ಅದೇ ಪ್ರದೇಶದ ನಿವಾಸಿ ಜಾನ್ ಕೆನ್ನಡಿ (24) ಅಲ್ಲಿಗೆ ತನ್ನ ಲಾಬ್ರಡೋರ್ ನಾಯಿಯೊಂದಿಗೆ ಆಗಮಿಸಿದ್ದು ಆ ನಾಯಿ ಸತತವಾಗಿ ಬೊಗಳಲು ಆರಂಭಿಸಿ ಕ್ರಿಕೆಟ್ ಪ್ರೇಮಿಗಳಿಗೆ ತೊಂದರೆಯುಂಟು ಮಾಡಿದಾಗ ಅವಿನಾಶ್ ಅದನ್ನು ವಿರೋಧಿಸಿದ್ದಾಗಿ ತಿಳಿದು ಬಂದಿದೆ.

ಆಗ ಅವಿನಾಶ್ ಹಾಗೂ ಜಾನ್ ನಡುವೆ ಜಗಳವಾಗಿ ಅವಿನಾಶ್ ಜಾನ್ ಕೆನ್ನೆಗೆ ಹೊಡೆದಿದ್ದನೆನ್ನಲಾಗಿದೆ. ಆಗ ಜಾನ್ ತನ್ನ ನಾಯಿಯೊಂದಿಗೆ ಹಿಂದಿರುಗಿದನಾದರೂ ಮತ್ತೆ ಯುವಕರ ಗುಂಪಿನೊಂದಿಗೆ ಆಗಮಿಸಿ, ಅವಿನಾಶ್ ಮತ್ತಿತರರನು ಅಲ್ಲಿಂದ ಓಡಿಸಿದ್ದೆನೆಂದು ಆರೋಪಿಸಲಾಗಿದೆ.ಆಗ ಅಲ್ಲಿಗೆ ಆಟೋ ಒಂದರಲ್ಲಿ ಆಗಮಿಸಿದ ಮೂವರು ಅವಿನಾಶ್‌ಗೆ ಚೂರಿಯಿಂದ ಇರಿದಿದ್ದು,ಆತನ ಇಬ್ಬರು ಸಂಬಂಧಿಗಳು ಕೆನ್ನತ್ ಹಾಗೂ ಡೇವಿಡ್ ಅವರನ್ನು ತಡೆಯಲು ಯತ್ನಿಸಿದರೂ ಅವರ ಮೇಲೂ ಹಲ್ಲೆಗೈಯ್ಯಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವಿನಾಶ್ ಮರುದಿನ ಬೌರಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಪೊಲೀಸರು ಜಾನ್ ಕೆನ್ನಡಿಯನ್ನು ಕೊಲೆ ಆರೋಪದ ಮೇಲೆ ಬಂಧಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X