Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಾಹೋರ್ ಸ್ಫೋಟ: ಪಾಕ್ ಪ್ರಧಾನಿ ಅಮೆರಿಕ...

ಲಾಹೋರ್ ಸ್ಫೋಟ: ಪಾಕ್ ಪ್ರಧಾನಿ ಅಮೆರಿಕ ಪ್ರವಾಸ ರದ್ದು

ವಾರ್ತಾಭಾರತಿವಾರ್ತಾಭಾರತಿ29 March 2016 11:21 AM IST
share
ಲಾಹೋರ್ ಸ್ಫೋಟ: ಪಾಕ್ ಪ್ರಧಾನಿ ಅಮೆರಿಕ ಪ್ರವಾಸ ರದ್ದು

ಇಸ್ಲಾಮಾಬಾದ್, ಮಾ. 29: ಲಾಹೋರ್‌ನಲ್ಲಿ ಆದ ಭಯೋತ್ಪಾದಕ ದಾಳಿಯಿಂದಾಗಿ ವಿಚಲಿತರಾಗಿರುವ ಪಾಕಿಸ್ತಾನದ ಪ್ರಧಾನಿ ನವಾಝ್ ಶರೀಫ್ ತನ್ನ ಮುಂದಿನ ಅಮೆರಿಕ ಪ್ರವಾಸವನ್ನು ರದ್ದುಪಡಿಸಿರುವುದಾಗಿ ವರದಿಗಳು ತಿಳಿಸಿವೆ.

ಈ ವಾರ ಅಮೆರಿಕದಲ್ಲಿ ಪರಮಾಣು ಸುರಕ್ಷ ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕಾಗಿತ್ತು. ಶರೀಫ್ ಮಾರ್ಚ್ 31ರಂದು ನಡೆಯಲಿರುವ ನಾಲ್ಕನೆ ಪರಮಾಣು ಸುರಕ್ಷ ಸಮ್ಮೇಳನದಲ್ಲಿ ಭಾಗವಹಿಸಲಿಕ್ಕಾಗಿ ವಾಶಿಂಗ್ಟನ್ ತೆರಳುವವರಿದ್ದರು.

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಸಮ್ಮೇಳನದ ನೇತೃತ್ವ ವಹಿಸಲಿರುವರು. ರೇಡಿಯೊ ಪಾಕಿಸ್ತಾನ್ ರಾಷ್ಟ್ರವನ್ನುದ್ದೇಶಿಸಿ ಶರೀಫ್ ಮಾತಾಡುವ ಸ್ವಲ್ಪ ಸಮಯ ಮೊದಲು ಟ್ವೀಟ್ ಮಾಡಿ ಪ್ರಧಾನಿ ನವಾಝ್ ಶರೀಪ್ ತನ್ನ ಮುಂದಿನ ಅಮೆರಿಕ ಪ್ರವಾಸ ರದ್ದು ಪಡಿಸಿರುವುದಾಗಿ ತಿಳಿಸಿತು. ಲಾಹೋರ್‌ನಲ್ಲಿ  ರವಿವಾರ ಈಸ್ಟರ್‌ನಂದು ಗುಲ್ಶನ್ ಎ ಇಕ್ಬಾಲ್ ಪಾರ್ಕ್‌ನ ಸಮೀಪ ಬಾಂಬ್ ಸ್ಫೋಟದಲ್ಲಿ ಎಪ್ಪತ್ತೆರಡು ಮಂದಿ ಸಾವನ್ನಪ್ಪಿ,  233 ಮಂದಿ ಗಾಯಗೊಂಡಿದ್ದರು.

ತಹರೀಕೆ ತಾಲಿಬಾನ್ ಪಾಕಿಸ್ತಾನ್ ನ ಒಂದು ಗುಂಪು ಜಮಾಅತುಲ್ ಅಹ್ರಾರ್ ಇದರ ಹೊಣೆವಹಿಸಿಕೊಂಡಿದ್ದು ಕ್ರೈಸ್ತರು ತಮ್ಮ ಗುರಿಯಾಗಿತ್ತು ಎಂದು ಹೇಳಿಕೊಂಡಿದೆ.

ಎಕ್ಸ್‌ಪ್ರೆಸ್ ನ್ಯೂಸ್‌ನ ವರದಿಯ ಪ್ರಕಾರ ಪ್ರಧಾನಿ ವಿದೇಶಕ್ಕೆ ತನ್ನ ವಿಶೇಷ ದೂತರನ್ನು ಕಳುಹಿಸಲಿದ್ದಾರೆ. ಅವರು ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಿಯನ್ನು ಪ್ರತಿನಿಧಿಸಲಿದ್ದಾರೆ.

ಮಾಧ್ಯಮಗಳ ವರದಿಯ ಪ್ರಕಾರ ಸಮ್ಮೇಳನದಲ್ಲಿ ಶರೀಫ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿಯ ಭೇಟಿಯಾಗುವುದಿತ್ತು. ಇದಕ್ಕೂ ಮೊದಲು ಇಂದು ಬ್ರಿಟನ್ ಪ್ರಯಾಣ ಬೆಳೆಸಬೇಕಿತ್ತು. ಲಾಹೋರ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಈ ಪ್ರವಾಸವನ್ನೂ ರದ್ದುಗೊಳಿಸಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X