Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು : ಪಂಚ ರಾಜ್ಯ ಚುನಾವಣೆ ಬಳಿಕವೇ...

ಬೆಂಗಳೂರು : ಪಂಚ ರಾಜ್ಯ ಚುನಾವಣೆ ಬಳಿಕವೇ ಸಂಪುಟ ಪುನರ್ ರಚನೆ

ವಾರ್ತಾಭಾರತಿವಾರ್ತಾಭಾರತಿ29 March 2016 5:21 PM IST
share

ಬೆಂಗಳೂರು, ಮಾ,29: ರಾಜ್ಯ ಸಚಿವ ಸಂಪುಟದ ಪುನರ್‌ರಚನೆಗೆ ಇದೀಗ ಪಂಚ ರಾಜ್ಯಗಳ ಚುನಾವಣೆ ಅಡ್ಡಿಯಾಗಿ ಪರಿಣಮಿಸಿದೆ.
ಹೈಕಮಾಂಡ್ ಚುನಾವಣೆಯಲ್ಲಿ ತಲ್ಲೀನವಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಈ ಪ್ರಕ್ರಿಯೆಗೆ ಚಾಲನೆ ನೀಡಲು ಕಾಂಗ್ರೆಸ್ ವರಿಷ್ಠರು ಉದ್ದೇಶಿಸಿದ್ದಾರೆ.
ಮೇ ತಿಂಗಳ ಮಧ್ಯ ಭಾಗದಲ್ಲಿ ಸಚಿವ ಸಂಪುಟವನ್ನು ಪುನರ್ ರಚಿಸಲು ಹೈಕಮಾಂಡ್ ಉದ್ದೇಶಿಸಿತ್ತು. ಆದರೆ ಕೇಂದ್ರ ಸರ್ಕಾರ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮೇಲೆ ಗದಾ ಪ್ರಹಾರ ನಡೆಸಿ, ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶದ ನಂತರ ಮುಂದಿನ ಹೆಜ್ಜೆ ಇಡಲು ಉದ್ದೇಶಿಸಿದೆ.
ಸಿದ್ಧರಾಮಯ್ಯ ಅವರ ಸಚಿವ ಸಂಪುಟದಲ್ಲಿರುವ ಹತ್ತರಿಂದ ಹನ್ನೆರಡು ಮಂದಿಯನ್ನು ಕೈ ಬಿಟ್ಟು ಸಂಪುಟ ಪುನರ್ ರಚಿಸಲು ತೀರ್ಮಾನಿಸಲಾಗಿತ್ತು.
ಏಪ್ರಿಲ್ ಎರಡನೇ ವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಗೆ ಹೋಗುವ ಕಾರ್ಯಕ್ರಮವಿದೆ. ಆದರೆ ವರಿಷ್ಠರು ಚುನಾವಣೆ ನೆಪ ಮುಂದೊಡ್ಡಿದರೆ ಮೇ ತಿಂಗಳಿಗೆ ತಮ್ಮ ದೆಹಲಿ ಪ್ರವಾಸವನ್ನು ಮುಂದೂಡುವ ಸಾಧ್ಯತೆಗಳು ಸಹ ಇವೆ ಎನ್ನಲಾಗಿದೆ.
ಸಚಿವರ ಮೌಲ್ಯ ಮಾಪನದ ವರದಿಯನ್ನು ವರಿಷ್ಠರಿಗೆ ಈಗಾಗಲೇ ರವಾನಿಸಲಾಗಿದೆ. ಈ ವರದಿಯ ವಿವರಗಳನ್ನು ಕೂಲಂಕುಶವಾಗಿ ಪರಿಶೀಲಿಸಲಿರುವ ಕಾಂಗ್ರೆಸ್ ಹೈಕಮಾಂಡ್ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ಮುಂದಿನ ಹೆಜ್ಜೆ ಇಡಲಿದ್ದಾರೆ.
ತಮಿಳ್ನಾಡು,ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಸಂಪುಟ ಪುನರ್ ರಚನೆ ಮಾಡಲು ಮುಂದಾದರೆ ಅತೃಪ್ತರು ಒಂದು ಮಟ್ಟದಲ್ಲಾದರೂ ಧ್ವನಿ ಹೊರಡಿಸಬಹುದು. ಹೀಗಾಗಿ ಚುನಾವಣೆಗಳಿಗೂ ಮುನ್ನ ಯಾವುದೇ ರೀತಿಯಲ್ಲೂ ಅಪಸ್ವರ ಹೊರಡದಂತೆ ನೋಡಿಕೊಳ್ಳಬೇಕು ಎಂದು ಹೈಕಮಾಂಡ್ ಮುಖ್ಯಮಂತ್ರಿಗಳಿಗೆ ಸ್ಪಷ್ಟ ಮಾತುಗಳಲ್ಲಿ ವಿವರಿಸಲಿದೆ.
ಪ್ರತ್ಯೇಕ ಸಭೆ ನಡೆಸಲು ಈಗಾಗಲೇ ನಿರ್ಧರಿಸಿದ್ದ ಆಕಾಂಕ್ಷಿಗಳ ಬಯಕೆಗೆ ತಣ್ಣೀರೆರಚಿದಂತಾಗಿದೆ. ಸರ್ಕಾರಕ್ಕೆ ಎರಡು ವರ್ಷ ಎರಡು ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ತಾವು ಗಟ್ಟಿಯಾದ ಯತ್ನ ಮಾಡದಿದ್ದರೆ ಮಂತ್ರಿಯಾಗುವುದು ಕಷ್ಟ ಎಂಬ ಭಾವನೆ ಇದ್ದುದರಿಂದ ಹಲ ಮಂದಿ ಶಾಸಕರು ಪ್ರತ್ಯೇಕ ಸಭೆ ನಡೆಸಿ ವರಿಷ್ಠರ ಮೇಲೆ ಒತ್ತಡ ಹೇರಲು ತೀರ್ಮಾನಿಸಿದ್ದರು.
ಅದರೆ ಹೈಕಮಾಂಡ್ ವರಿಷ್ಠರು ಇಂತಹ ಯಾವ ಬೆಳವಣಿಗೆಯನ್ನೂ ಲೆಕ್ಕಿಸಲು ತಯಾರಿಲ್ಲದೆ ಇರುವುದರಿಂದ ಮತ್ತು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ತನಕ ಇಂತಹ ಯಾವ ಬೆಳವಣಿಗೆಗೂ ಉಪ್ಪು,ಸೊಪ್ಪು ಹಾಕದಿರಲು ತೀರ್ಮಾನಿಸಿರುವುದರಿಂದ ಸಚಿವ ಪದವಿ ಆಕಾಂಕ್ಷಿಗಳಿಗೆ ನಿರಾಸೆ ಉಂಟಾಗಿದೆ.
ಹೀಗಾಗಿ ಮೇ ಹದಿನೈದರಿಂದ ಇಪ್ಪತ್ತರ ವೇಳೆಗೆ ಸಚಿವ ಸಂಪುಟ ಪುನರ್ ರಚನೆ ಕಾರ್ಯ ನಡೆದರೆ ಸರ್ಕಾರಕ್ಕೆ ಬಾಕಿ ಇರುವುದೇ ಎರಡು ವರ್ಷ.ಒಂದು ವರ್ಷ ಕಳೆಯುವಷ್ಟರಲ್ಲಿ ಚುನಾವಣಾ ವರ್ಷ ಶುರುವಾಗುವುದರಿಂದ ತಮ್ಮ ತಮ್ಮ ಕ್ಷೇತ್ರಗಳನ್ನು ಭದ್ರಪಡಿಸಿಕೊಳ್ಳುವತ್ತ ಗಮನ ಹರಿಸಬೇಕಾಗುತ್ತದೆ.
ಆದ್ದರಿಂದ ತಾವು ಸಚಿವರಾದರೂ ನಿರೀಕ್ಷಿತ ಪ್ರಮಾಣದ ಕೆಲಸ ಮಾಡಲು ಸಾಧ್ಯವಿಲ್ಲ ಎಂಬ ಬೇಗುದಿಗೆ ಒಳಗಾಗಿರುವ ಶಾಸಕರ ಗುಂಪಿಗೆ ಹೈಕಮಾಂಡ್ ವಿರುದ್ಧ ತಲೆ ಎತ್ತಿ ನಿಲ್ಲುವ ಧೈರ್ಯವೂ ಇಲ್ಲ.
ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿಯುವ ತನಕ ಯಾರಾದರೂ ಮಂತ್ರಿ ಪದವಿಗಾಗಿ ಲಾಬಿ ಮಾಡಿದರೆ ನಿಶ್ಚಿತವಾಗಿ ಬರೆದಿಟ್ಟುಕೊಳ್ಳಿ.ಅಂತವರು ಯಾವ ಕಾರಣಕ್ಕೂ ಮಂತ್ರಿಯಾಗದಂತೆ ನೋಡಿಕೊಳ್ಳುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ದಿಗ್ವಿಜಯ್‌ಸಿಂಗ್ ವಿವರಿಸಿದ್ದಾರೆ ಎನ್ನಲಾಗಿದೆ.
ಹೀಗಾಗಿ ಪುನ: ಸನ್ನಿವೇಶ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವರದಾನವಾಗಿ ಪರಿಣಮಿಸಿದ್ದು ಹೈಕಮಾಂಡ್ ವರಿಷ್ಟರೇ ಸಂಪುಟ ಪುನರ್ರಚನೆಯನ್ನು ಮುಂದೂಡಲು ಬಯಸಿರುವುದರಿಂದ ಅವರು ಮತ್ತಷ್ಟು ನೆಮ್ಮದಿಯಿಂದಿರಲು ಸಾಧ್ಯವಾಗಲಿದೆ.
ಈ ಮಧ್ಯೆ ರಾಷ್ಟ್ರೀಯ ಕಾಂಗ್ರೆಸ್‌ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೂ ಸಿದ್ಧರಾಮಯ್ಯ ಅವರ ಜತೆ ಕೈಗೂಡಿಸಿದ್ದು ಫೈನಲಿ,ಈ ಅಂಶ ಸಿದ್ಧುಗೆ ಆನೆ ಬಲ ತಂದು ಕೊಟ್ಟಂತಾಗಿದೆ.


ಇಡೀ ದೇಶದಲ್ಲಿ ಕಾಂಗ್ರೆಸ್ ಆಡಳಿತವಿರುವ ಅತ್ಯಂತ ದೊಡ್ಡ ರಾಜ್ಯವಾಗಿರುವ ಕರ್ನಾಟಕದಿಂದ ಹೆಚ್ಚಿನ ನೆರವು ಪಡೆಯಲು ಹೈಕಮಾಂಡ್ ಬಯಸಿದೆ. ಈ ಮಧ್ಯೆ ಐದು ರಾಜ್ಯಗಳ ಚುನಾವಣೆಯಲ್ಲಿ ಸಿದ್ಧರಾಮಯ್ಯ ಅವರನ್ನು ಚುನಾವಣೆಗೆ ಬಳಸಿಕೊಳ್ಳಲು ವರಿಷ್ಠರು ಉದ್ದೇಶಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X