Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿ ಶಕ್ತಿಗಳನ್ನು ದಮನ ಮಾಡುವ...

ವಿದ್ಯಾರ್ಥಿ ಶಕ್ತಿಗಳನ್ನು ದಮನ ಮಾಡುವ ಸರಕಾರಗಳು ಈವರೆಗೆ ಉಳಿದಿಲ್ಲ: ಎಸ್.ಐ.ಓ ರಾಜ್ಯಾಧ್ಯಕ್ಷ ಲಬೀದ್ ಶಾಫಿ

ಇರ್ಷಾದ್ ವೇಣೂರ್ಇರ್ಷಾದ್ ವೇಣೂರ್29 March 2016 7:10 PM IST
share
ವಿದ್ಯಾರ್ಥಿ ಶಕ್ತಿಗಳನ್ನು ದಮನ ಮಾಡುವ ಸರಕಾರಗಳು ಈವರೆಗೆ ಉಳಿದಿಲ್ಲ: ಎಸ್.ಐ.ಓ ರಾಜ್ಯಾಧ್ಯಕ್ಷ ಲಬೀದ್ ಶಾಫಿ

ಮಂಗಳೂರು: ವಿದ್ಯಾರ್ಥಿ ಶಕ್ತಿಗಳನ್ನು ವ್ಯವಸ್ಥಿತವಾಗಿ ಷಡ್ಯಂತ್ರದ ಮೂಲಕ ದಮನ ಮಾಡುವ ಯಾವುದೇ ಸರಕಾರಗಳು ಇದುವರೆಗೆ ಉಳಿದಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಮಡಿದ ಹಲವರು ಕ್ಯಾಂಪಸ್ಸಿನಿಂದಲೇ ಹುಟ್ಟಿ ಬಂದಿರುವುದು ಸರಕಾರವು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಲಬೀದ್ ಶಾಫಿ ಹೇಳಿದರು.

ಅವರು ಇಂದು ನಗರದಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ, ದ.ಕ. ಜಿಲ್ಲಾ ಘಟಕದ ವತಿಯಿಂದ ನಡೆದ ದೇಶದ ವಿವಿಧ ಕ್ಯಾಂಪಸ್‌ಗಳಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ನಡೆದ ಪ್ರಜಾಸತ್ತಾತ್ಮಕ ಕ್ಯಾಂಪಸ್ ನಿರ್ಮಾಣಕ್ಕಾಗಿ ನಮ್ಮ ನಡಿಗೆ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಅನ್ಯಾಯದ ವಿರುದ್ಧ ಮಾತನಾಡುವ ಅಮಾಯಕ ವಿದ್ಯಾರ್ಥಿಗಳ ವಿರುದ್ಧ ಇಲ್ಲಸಲ್ಲದ ಕೇಸುಗಳನ್ನು ದಾಖಲಿಸಿ, ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನಡೆಸುತ್ತಿರುವುದು ಖಂಡನೀಯ. ಹೈದರಾಬಾದ್ ವಿವಿಯಲ್ಲಿ ಸುಮಾರು 3500 ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳನ್ನು ದಿಗ್ಬಂಧನ ವಿಧಿಸಿ, ಅಘೋಷಿತ ತುರ್ತು ವಾತಾವರಣವನ್ನು ನಿರ್ಮಿಸಲು ವಿವಿಗಳ ಕುಲಪತಿಗಳ ಮೂಲಕ ಅಘೋಷಿತ ತುರ್ತು ವಾತಾವರಣವನ್ನು ಸರಕಾರಗಳು ನಿರ್ಮಾಣ ಮಾಡುತ್ತಿವೆ ಎಂದರು.

ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ನೈತಿಕ ಹೊಣೆ ಹೊತ್ತು ಕೇಂದ್ರ ಸಚಿವೆ ಸ್ಮತಿ ಇರಾನಿ ರಾಜೀನಾಮೆ ನೀಡಬೇಕು ಹಾಗೂ ರೋಹಿತ್ ವೇಮುಲಾರ ಸಾವಿಗೆ ಕಾರಣರಾದ ಹೈದರಾಬಾದ್ ವಿವಿ ಕುಲಪತಿ ಅಪ್ಪಾರಾವ್‌ರನ್ನು ಹುದ್ದೆಯಿಂದ ಕಿತ್ತೆಸೆಯಬೇಕು. ಇದೇ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಎಸ್ ಐ ಓ ವತಿಯಿಂದ ರಾಜ್ಯಮಟ್ಟದ ಬೃಹತ್ ಪ್ರತಿಭಟನೆಯು ಎಪ್ರಿಲ್ 9 ರಂದು ಹಮ್ಮಿಕೊಳ್ಳಲಾಗಿದೆ ಎಂದು ಲಬೀದ್ ಶಾಫಿ ತಿಳಿಸಿದರು.

  ಇದೇ ವೇಳೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸನ್ಮಾರ್ಗ ಪತ್ರಿಕೆಯ ಸಂಪಾದಕ ಏ.ಕೆ. ಕುಕ್ಕಿಲ ದೇಶದ ವಿವಿಧೆಡೆ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಿದರೆ ಅದನ್ನು ಹತ್ತಿಕ್ಕುವ ಕೆಲಸಗಳು ಸರಕಾರಗಳು ವ್ಯವಸ್ಥಿತವಾಗಿ ಮಾಡುತ್ತಿರುವಾಗ ಆಝಾದಿಯ ಕೂಗು ಪ್ರತಿಯೊಂದು ಕ್ಯಾಂಪಸ್‌ಗಳಲ್ಲಿಯೂ ಮೊಳಗಬೇಕು. ಕೇಂದ್ರದ ಮೂವರು ಮಂತ್ರಿಗಳು ಕ್ರಿಶ್ಚಿಯನ್ನರ ಶೋಕದ ದಿನ ಗುಡ್ ಫ್ರೈಡೇಗೂ ಹ್ಯಾಪಿ ಗುಡ್ ಪ್ರೈಡ್ ಎಂದು ಸಂದೇಶ ನೀಡುವ ಮೂಲಕ ತಮ್ಮ ವಿಕೃತಿಯ ಮನೋಭಾವವನ್ನು ಮೆರೆದಿದ್ದಾರೆ. ನಿಜಕ್ಕೂ ಖೇದನೀಯ ಎಂದು ವಿಷಾದ ವ್ಯಕ್ತಪಡಿಸಿದರು. ಇದೇ ವೇಳೆ ತುರ್ತು ಪರಿಸ್ಥಿತಿಯ ಬಳಿಕ ದೇಶದಲ್ಲಿ ಆಝಾದಿಯ ಕೂಗಿಗೆ ಕಾರಣರಾದ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮತಿ ಇರಾನಿಗೆ ಅಭಿನಂದನೆ ಸಲ್ಲಿಸಬೇಕಿದೆ ಎಂದು ಪರೋಕ್ಷವಾಗಿ ಕುಟುಕಿದರು.

ಸಭೆಗೆ ಮೊದಲು ಜ್ಯೋತಿ ಅಂಬೇಡ್ಕರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರ್ಯಾಲಿ ನಡೆಯಿತು. ಎಸ್ ಐ ಓ ಜಿಲ್ಲಾ ಕಾರ್ಯದರ್ಶಿ ಅಸ್ಲಂ ಪಂಜಾಲ, ತಾಲೂಕು ಅಧ್ಯಕ್ಷ ಆಶಿಕ್ ಹಶಾಸ್, ಸೋಲಿಡಾರಿಟಿ ಯೂತ್ ಮೂಮೆಂಟ್ ಜಿಲ್ಲಾಧ್ಯಕ್ಷ ಮುಸ್ತಾಕ್ ಪಟ್ಲ, ಜಮಾಅತೆ ಇಸ್ಲಾಮಿ ಹಿಂದ್ ನ ದ.ಕ. ಜಿಲ್ಲಾ ಹೊಣೆಗಾರರಾದ ಇಲ್ಯಾಸ್ ಇಸ್ಮಾಯೀಲ್, ಮಂಗಳೂರು ಅಧ್ಯಕ್ಷ ಮುಹಮ್ಮದ್ ಕುಂಞ, ಜಿ.ಐ.ಓ ಜಿಲ್ಲಾಧ್ಯಕ್ಷೆ ಸಲ್ಮಾ ಸಈದ್ ಉಪಸ್ಥಿತರಿದ್ದರು. ಎಸ್.ಐ.ಓ. ಸದಸ್ಯ ದಾನಿಶ್ ಪಾಣೆಮಂಗಳೂರು ನಿರೂಪಿಸಿದರು.

share
ಇರ್ಷಾದ್ ವೇಣೂರ್
ಇರ್ಷಾದ್ ವೇಣೂರ್
Next Story
X