Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ಪುರಸಭೆ: ನೀರಿನ ಸಮಸ್ಯೆ...

ಬಂಟ್ವಾಳ ಪುರಸಭೆ: ನೀರಿನ ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮ: ನೂತನ ಅಧ್ಯಕ್ಷ ಭರವಸೆ

ವಾರ್ತಾಭಾರತಿವಾರ್ತಾಭಾರತಿ29 March 2016 11:50 PM IST
share
ಬಂಟ್ವಾಳ ಪುರಸಭೆ: ನೀರಿನ ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮ: ನೂತನ ಅಧ್ಯಕ್ಷ ಭರವಸೆ

ಬಂಟ್ವಾಳ, ಮಾ. 29: ನೂತನ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾದ ರಾಮಕೃಷ್ಣ ಆಳ್ವರ ಅಧ್ಯಕ್ಷತೆಯಲ್ಲಿ ಮಂಗಳವಾರ ಪುರಸಭೆ ಸಭಾಂಗಣದಲ್ಲಿ ನಡೆದ ಮೊದಲ ಸಾಮಾನ್ಯ ಸಭೆಯು ಕುಡಿಯುವ ನೀರಿನ ಕುರಿತು ಬಿಸಿ ಬಿಸಿ ಚರ್ಚೆಗೆ ಸಾಕ್ಷಿಯಾಯಿತು. ಪುರಸಭೆ ವ್ಯಾಪ್ತಿಯಲ್ಲಿ ನೀರಿನ ಮೂಲಗಳಿದ್ದರೂ ಕೂಡಾ ಜನರಿಗೆ ಸಮರ್ಪಕವಾಗಿ ನೀರು ಪೂರೈಸುವಲ್ಲಿ ಅಧಿಕಾರಿಗಳು ಹಾಗೂ ಆಡಳಿತ ವಿಫಲವಾಗಿದೆ ಎಂದು ವಿಪಕ್ಷ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಸಭೆ ಆರಂಭವಾಗುತ್ತಿದ್ದಂತೆ ಸದಸ್ಯ ಮುನೀಶ್ ಅಲಿ ವಿಷಯ ಪ್ರಸ್ತಾಪಿಸಿ, ಪುರಸಭೆ ವ್ಯಾಪ್ತಿಯ ಎತ್ತರ ಪ್ರದೇಶಗಳಿಗಾದರೂ ಸ್ವಲ್ಪ ಮಟ್ಟಿಗೆ ನೀರು ಪೂರೈಕೆಯಾಗುತ್ತಿದೆ. ಆದರೆ ತಗ್ಗು ಪ್ರದೇಶವಾದ ಕೆಳಗಿನ ಪೇಟೆಗೆ ಸಮರ್ಪಕವಾಗಿ ನೀರು ಪೂರೈಕೆಯಾಗದಿರುವುದು ವಿಪರ್ಯಾಸ ಎಂದು ಗಮನ ಸೆಳೆದರು. ಇದಕ್ಕೆ ಧ್ವನಿ ಗೂಡಿಸಿದ ವಿಪಕ್ಷ ನಾಯಕ ಗೋವಿಂದ ಪ್ರಭು, ಮೂರು ತಿಂಗಳಿನಿಂದ ಪುರಸಭೆ ವ್ಯಾಪ್ತಿಯ ವಿವಿಧೆಡೆ ನೀರಿನ ಸಮಸ್ಯೆ ತಲೆದೋರಿದರೂ ಈ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಪುರಸಭೆ ವಿಫಲವಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಸುಧಾಕರ್ ಭಟ್ ಹಾಗೂ ಅಧ್ಯಕ್ಷ ರಾಮಕೃಷ್ಣ ಆಳ್ವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಲಾಗುವುದು. ಕೆಳಗಿನ ಪೇಟೆಗೆಯಲ್ಲಿ ನೀರಿಗೆ ಸಂಬಂಧಿಸಿದ ಕಾಮಗಾರಿಯನ್ನು ಬುಧವಾರದಿಂದಲೇ ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭ ಇಂಜಿನಿಯರ್ ಡೊಮೇನಿಕ್ ಡಿಮೆಲೊ ಮಾತನಾಡಿ, ಈಗಾಗಲೇ ತಯಾರಿಸಿದ ಎಲ್ಲ ನೀರಿನ ಕಾಮಗಾರಿಗಳನ್ನು ಶೇ. 100ರಷ್ಟು ಪೂರ್ಣಗೊಳಿಸಲಾಗಿದೆ ಎಂದರು. ಆವಾಗ ಸದಸ್ಯ ಗೋವಿಂದ ಪ್ರಭು ಈ ಬಗ್ಗೆ ದಾಖಲೆ ಒದಗಿಸುವಂತೆ ಪಟ್ಟು ಹಿಡಿದರು. ಆಗ ಡೊಮೇನಿಕ್ ಡಿಮೆಲೊ ‘8 ಲಕ್ಷ ರೂ.ವಿನ ಕಾಮಗಾರಿ ಬಾಕಿ ಉಳಿದಿದೆ’ ಎಂದಾಗ ಕುಪಿತರಾದ ಗೋವಿಂದ ಪ್ರಭು ಸಭೆಗೆ ತಪ್ಪು ಮಾಹಿತಿ ನೀಡುತ್ತಿದ್ದಿರಾ? ಎಂದು ತರಾಟೆಗೆ ತೆಗೆದುಕೊಂಡರು. *ರಾಜೀನಾಮೆಗೆ ಮುಂದಾದ ಪ್ರಭು: ಅಮ್ಟಾಡಿ ಗ್ರಾಮಕ್ಕೆ ಪುರಸಭೆಯಿಂದ ನೀರು ಪೂರೈಕೆಯಾಗುತ್ತಿದ್ದರೂ ಗ್ರಾಪಂನಿಂದ ಯಾವುದೇ ನೀರಿನ ಕರ ಪುರಸಭೆಗೆ ಪಾವತಿಯಾಗುತ್ತಿಲ್ಲ. ಕರ ಪಾವತಿಸುವಂತೆ ಪಂಚಾಯತ್‌ಗೆ ಪತ್ರ ಬರೆಯಲು ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಪತ್ರ ರವಾನೆಯಾಗಿದೆಯಾ? ಎಂದು ಸದಸ್ಯ ಗೋವಿಂದ ಪ್ರಭು ಪ್ರಶ್ನಿಸಿದರು.

ಈ ಸಂದರ್ಭ ಮುಖ್ಯಾಧಿಕಾರಿ ಈಗಾಗಲೇ ಪತ್ರ ರವಾನಿಸಲಾಗಿದೆ ಎಂದರು. ಆದರೆ, ಪತ್ರದ ಪ್ರತಿಯನ್ನು ಸಭೆಯಲ್ಲಿ ಪರಿಶೀಲಿಸಿದಾಗ ಮಾ.29ರಂದು ರವಾನೆಯಾಗಿರುವುದು ಬೆಳಕಿಗೆ ಬಂತು. ಇದರಿಂದ ಕುಪಿತರಾದ ಪ್ರಭು, ಅಧಿಕಾರಿಗಳು ಸದಸ್ಯರಿಗೆ ತಪ್ಪು ಮಾಹಿತಿ ನೀಡುವ ಮೂಲಕ ದಾರಿ ತಪ್ಪಿಸುತ್ತಿದ್ದಾರೆ. ಇದು ಚುನಾಯಿತ ಸದಸ್ಯರಿಗೆ ಮಾಡುವ ಅವಮಾನ ಎಂದು ಕಿಡಿಕಾರಿದರಲ್ಲದೆ ತನ್ನ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾದರು. ಅಧ್ಯಕ್ಷ ರಾಮಕೃಷ್ಣ ಆಳ್ವ ಮಧ್ಯೆ ಪ್ರವೇಶಿಸಿ ಮುಂದಿನ ದಿನದಲ್ಲಿ ಈ ರೀತಿ ಎಡವಟ್ಟು ಆಗದಂತೆ ಎಚ್ಚರಿಕೆ ವಹಿಸಲಾಗುವುದು ಎನ್ನುತ್ತಾ ಪರಿಸ್ಥಿತಿ ತಿಳಿಗೊಳಿಸಿದರು. ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಸದಸ್ಯರಾದ ಗಂಗಾಧರ, ಜಗದೀಶ್ ಕುಂದರ್, ಬಿ.ಮೋಹನ್, ಭಾಸ್ಕರ್ ಟೈಲರ್, ವಸಂತಿ ಚಂದಪ್ಪ, ಸುಗುಣ ಕಿಣಿ, ವಾಸು ಪೂಜಾರಿ, ಯಾಸ್ಮೀನ್, ಮುಮ್ತಾಝ್ ಮೊದಲಾದವರು ಚರ್ಚೆಯಲ್ಲಿ ಪಾಲ್ಗೊಂಡರು. ‘ನೀನು ಯಾರು? ನೀನು ಯಾರು?’

ಅಧ್ಯಕ್ಷ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿದ್ದ, ಹುದ್ದೆ ಕೈ ತಪ್ಪಿದ ಬಳಿಕ ಪಕ್ಷದ ಮುಖಂಡರ ವಿರುದ್ಧ ಮುನಿಸಿಕೊಂಡಿರುವ ಆಡಳಿತ ಪಕ್ಷದ ಸದಸ್ಯ ಸದಾಶಿವ ಬಂಗೇರ ವಿಪಕ್ಷ ಸದಸ್ಯರ ಸಾಲಿನಲ್ಲಿ ಕುಳಿತು ವಿರೋಧ ಪಕ್ಷದ ಸದಸ್ಯರಂತೆ ಚರ್ಚಿಸಿ ಸಭೆಯ ಗಮನ ಸೆಳೆದರು. ನೀರಿನ ಸಮಸ್ಯೆಗೆ ಸಂಬಂಧಿಸಿದ ಚರ್ಚೆಯ ವೇಳೆ ಸದಸ್ಯ ಮುಹಮ್ಮದ್ ಇಕ್ಬಾಲ್, ಅಧ್ಯಕ್ಷರ ಪರ ಮಾತನಾಡಿದಾಗ ಮಧ್ಯ ಪ್ರವೇಶಿಸಿದ ಸದಾಶಿವ ಬಂಗೇರ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅಸಾಂವಿಧಾನಿಕ ಪದ ಬಳಸಿದರು. ಈ ವೇಳೆ ಬಂಗೇರ ಪರ ಸದಸ್ಯೆ ಚಂಚಲಾಕ್ಷಿ ನಿಂತರೆ, ಇಕ್ಬಾಲ್ ಪರ ಜಸಿಂತಾ ಹಾಗೂ ಮುಹಮ್ಮದ್ ಶರೀಫ್ ವಾದಿಸಿದರು. ಆಗ ಚಂಚಲಾಕ್ಷಿ, ಜಸಿಂತಾ, ಶರೀಫ್ ಮಧ್ಯೆ ಮಾತಿನ ಚಕಮಕಿ ನಡೆದು ‘ನೀನು ಯಾರು...? ನೀನು ಯಾರು..?’ ಎಂಬ ಪದ ಬಳಕೆಯಾಯ್ತು. ಅಧ್ಯಕ್ಷ ರಾಮಕೃಷ್ಣ ಆಳ್ವ ಮಧ್ಯ ಪ್ರವೇಶಿಸಿ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದ ಚರ್ಚೆಗೆ ಆಸ್ಪದವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿ ಚರ್ಚೆಗೆ ತೆರೆ ಎಳೆದರು. ಸ್ವೀಕರಿಸುವುದಿಲ್ಲ: ಬಂಟ್ವಾಳ ಪುರಸಭೆ ಭ್ರಷ್ಟಾಚಾರದಿಂದ ಕೂಡಿದ್ದು, ಭ್ರಷ್ಟಾಚಾರ ಮುಕ್ತ ಪುರಸಭೆಯಾಗುವ ತನಕ ಗೌರವ ಧನ, ಚಾ, ಮತ್ತು ಊಟ ಸ್ವೀಕರಿಸುವುದಿಲ್ಲ ಎಂದು ಸದಸ್ಯ ಸದಾಶಿವ ಬಂಗೇರ ಹಾಜರಿ ಪುಸ್ತಕದಲ್ಲಿ ಉಲ್ಲೇಖಿಸುವ ಮೂಲಕ ಅಚ್ಚರಿ ಮೂಡಿಸಿದರಲ್ಲದೆ ಸಭೆಯ ಅರ್ಧದಿಂದಲೇ ಎದ್ದು ಹೊರ ನಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X